AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂ ಕುಸಿತ ತಡೆಗಟ್ಟಲು ಅರಣ್ಯ ಇಲಾಖೆಯಿಂದ ನೂತನ ಪ್ರಯೋಗ; ಡ್ರೋನ್ ಮೂಲಕ ಬೀಜ ಬಿತ್ತನೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಹೊಸ ಪ್ರಯೋಗಕ್ಕೆ ಮುಂದಾಗಿದ್ದು ಭೂ ಕುಸಿತ ಸಂಭವಿಸಿದ ಪ್ರದೇಶದಲ್ಲಿ ಡ್ರೋನ್ ಮೂಲಕ ಬೀಜ ಬಿತ್ತನೆ ಮಾಡಲು ನಿರ್ಧರಿಸಿದೆ.

ಭೂ ಕುಸಿತ ತಡೆಗಟ್ಟಲು ಅರಣ್ಯ ಇಲಾಖೆಯಿಂದ ನೂತನ ಪ್ರಯೋಗ; ಡ್ರೋನ್ ಮೂಲಕ ಬೀಜ ಬಿತ್ತನೆ
ಡ್ರೋನ್_ ಮೂಲಕ ಬೀಜ ಬಿತ್ತನೆ
TV9 Web
| Updated By: ವಿವೇಕ ಬಿರಾದಾರ|

Updated on:Sep 09, 2022 | 4:43 PM

Share

ಉತ್ತರ ಕನ್ನಡ: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಅರಣ್ಯ ಇಲಾಖೆ (Forest Department) ಹೊಸ ಪ್ರಯೋಗಕ್ಕೆ ಮುಂದಾಗಿದ್ದು, ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಭೂ ಕುಸಿತ (Landslide) ಸಂಭವಿಸಿದ ಪ್ರದೇಶದಲ್ಲಿ ಡ್ರೋನ್ ಮೂಲಕ ಬೀಜ ಬಿತ್ತನೆ ಮಾಡಲು ನಿರ್ಧರಿಸಿದೆ. ರಾಜ್ಯದಲ್ಲಿ ಮೊದಲ ಬಾರಿ ಡ್ರೋನ್ ಬಳಕೆ ಮಾಡಿ ಬೀಜ ಬಿತ್ತನೆ ಮಾಡಲಾಗುತ್ತಿದೆ. ಜಿಲ್ಲೆಯ 60 ಭೂ ಕುಸಿತ ಸ್ಥಳಗಳಲ್ಲಿ ಬೀಜ ಬಿತ್ತನೆ ಮಾಡಲಾಗುತ್ತಿದೆ.

ಅರಣ್ಯ ಇಲಾಖೆ ಸುಮಾರು 100 ರಿಂದ 120 ಹೆಕ್ಟೇರ್ ಪ್ರದೇಶದಲ್ಲಿ, ಸಸಿ ನಾಟಿ ಮಾಡುಲು ಸಾಧ್ಯವಿರದ ಸ್ಥಳಗಳಲ್ಲಿ ಬೀಜ ಬಿತ್ತನೆಗೆ ಮುಂದಾಗಿದೆ. ಅಣಶಿ ಘಟ್ಟ, ಕುಮಟಾ ಘಟ್ಟಭಾಗ, ಹೊನ್ನಾವರ, ಭಟ್ಕಳ ಭಾಗದಲ್ಲಿ ಹುಲ್ಲು, ಬಿದಿರು, ಕರಿಮತ್ತಿ, ಹೊನ್ನೆ ಇತರೆ ಬೀಜಗಳನ್ನು ಬಿತ್ತನೆ ಮಾಡಲಾಗುತ್ತಿದೆ. ಇದು ಭೂ ಕುಸಿತ ತಡೆಗಟ್ಟಲು ನೂತನ ಪ್ರಯೋಗ ಎನ್ನಲಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 1-2 ತಿಂಗಳಿಂದ ನಿರಂತರಾವಾಗಿ ಮಳೆಯಾಗುತ್ತಿದೆ. ಇದರಿಂದ ಜಿಲ್ಲೆಯ ವಿವಿಧ ಕಡೆಗಳಲ್ಲಿ ಭೂ ಕುಸಿತ ಸಂಭವಿಸಿ ಸಾಕಷ್ಟು ಹಾನಿಯಾಗಿದೆ. ಜಿಲ್ಲೆಯ ಭಟ್ಕಳ ತಾಲೂಕಿನ ಮುಟ್ಟಳ್ಳಿಯಲ್ಲಿ 2 ರಿಂದ 3 ಭಾರಿ ಗುಡ್ಡ ಕುಸಿದಿದೆ. ಇದರಿಂದ ಗ್ರಾಮದ 10ಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು. ಸ್ಥಳೀಯ ಆಡಳಿತ ಗುಡ್ಡದ ಭಾಗದಲ್ಲಿ ರಸ್ತೆ ಸಂಚಾರ ಬಂದ್ ಮಾಡಿತ್ತು.

ಇದಕ್ಕಿಂತ ಮುಂಚೆ ಮುಟ್ಟಳ್ಳಿ ಗ್ರಾಮದಲ್ಲೇ ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಮೃತಪಟ್ಟಿದ್ದರು. ಲಕ್ಷ್ಮೀ ನಾಯ್ಕ(48), ಪುತ್ರಿ ಲಕ್ಷ್ಮೀ(33), ಅನಂತ(32), ಪ್ರವೀಣ್ ನಾಯ್ಕ(20) ನಾಲ್ವರು ಮೃತಪಟ್ಟಿದ್ದರು. ಉತ್ತರ ಕನ್ನಡ ಜಿಲ್ಲೆಯ ಅಣಶಿ ಗುಡ್ಡ ಕುಸಿದಿತ್ತು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 34ರ ಕಾರವಾರ-ಜೋಯಿಡಾ ಮಾರ್ಗದ ಸಂಚಾರ ಬಂದ ಮಾಡಲಾಗಿತ್ತು. ನಿರಂತರ ಮಳೆಯಿಂದಾಗಿ ಹೆದ್ದಾರಿಯಲ್ಲಿ ಅಣಶಿ ಗುಡ್ಡ ಸತತ ನಾಲ್ಕು ಬಾರಿ ಕುಸಿತಗೊಂಡಿದೆ. ಈ ಸಂಬಂಧ ವಾಹನ ಸಂಚಾರ ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ ಹೊರಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:58 pm, Fri, 9 September 22

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!