AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂ ಕುಸಿತ ತಡೆಗಟ್ಟಲು ಅರಣ್ಯ ಇಲಾಖೆಯಿಂದ ನೂತನ ಪ್ರಯೋಗ; ಡ್ರೋನ್ ಮೂಲಕ ಬೀಜ ಬಿತ್ತನೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಹೊಸ ಪ್ರಯೋಗಕ್ಕೆ ಮುಂದಾಗಿದ್ದು ಭೂ ಕುಸಿತ ಸಂಭವಿಸಿದ ಪ್ರದೇಶದಲ್ಲಿ ಡ್ರೋನ್ ಮೂಲಕ ಬೀಜ ಬಿತ್ತನೆ ಮಾಡಲು ನಿರ್ಧರಿಸಿದೆ.

ಭೂ ಕುಸಿತ ತಡೆಗಟ್ಟಲು ಅರಣ್ಯ ಇಲಾಖೆಯಿಂದ ನೂತನ ಪ್ರಯೋಗ; ಡ್ರೋನ್ ಮೂಲಕ ಬೀಜ ಬಿತ್ತನೆ
ಡ್ರೋನ್_ ಮೂಲಕ ಬೀಜ ಬಿತ್ತನೆ
TV9 Web
| Edited By: ವಿವೇಕ ಬಿರಾದಾರ|

Updated on:Sep 09, 2022 | 4:43 PM

Share

ಉತ್ತರ ಕನ್ನಡ: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಅರಣ್ಯ ಇಲಾಖೆ (Forest Department) ಹೊಸ ಪ್ರಯೋಗಕ್ಕೆ ಮುಂದಾಗಿದ್ದು, ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಭೂ ಕುಸಿತ (Landslide) ಸಂಭವಿಸಿದ ಪ್ರದೇಶದಲ್ಲಿ ಡ್ರೋನ್ ಮೂಲಕ ಬೀಜ ಬಿತ್ತನೆ ಮಾಡಲು ನಿರ್ಧರಿಸಿದೆ. ರಾಜ್ಯದಲ್ಲಿ ಮೊದಲ ಬಾರಿ ಡ್ರೋನ್ ಬಳಕೆ ಮಾಡಿ ಬೀಜ ಬಿತ್ತನೆ ಮಾಡಲಾಗುತ್ತಿದೆ. ಜಿಲ್ಲೆಯ 60 ಭೂ ಕುಸಿತ ಸ್ಥಳಗಳಲ್ಲಿ ಬೀಜ ಬಿತ್ತನೆ ಮಾಡಲಾಗುತ್ತಿದೆ.

ಅರಣ್ಯ ಇಲಾಖೆ ಸುಮಾರು 100 ರಿಂದ 120 ಹೆಕ್ಟೇರ್ ಪ್ರದೇಶದಲ್ಲಿ, ಸಸಿ ನಾಟಿ ಮಾಡುಲು ಸಾಧ್ಯವಿರದ ಸ್ಥಳಗಳಲ್ಲಿ ಬೀಜ ಬಿತ್ತನೆಗೆ ಮುಂದಾಗಿದೆ. ಅಣಶಿ ಘಟ್ಟ, ಕುಮಟಾ ಘಟ್ಟಭಾಗ, ಹೊನ್ನಾವರ, ಭಟ್ಕಳ ಭಾಗದಲ್ಲಿ ಹುಲ್ಲು, ಬಿದಿರು, ಕರಿಮತ್ತಿ, ಹೊನ್ನೆ ಇತರೆ ಬೀಜಗಳನ್ನು ಬಿತ್ತನೆ ಮಾಡಲಾಗುತ್ತಿದೆ. ಇದು ಭೂ ಕುಸಿತ ತಡೆಗಟ್ಟಲು ನೂತನ ಪ್ರಯೋಗ ಎನ್ನಲಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 1-2 ತಿಂಗಳಿಂದ ನಿರಂತರಾವಾಗಿ ಮಳೆಯಾಗುತ್ತಿದೆ. ಇದರಿಂದ ಜಿಲ್ಲೆಯ ವಿವಿಧ ಕಡೆಗಳಲ್ಲಿ ಭೂ ಕುಸಿತ ಸಂಭವಿಸಿ ಸಾಕಷ್ಟು ಹಾನಿಯಾಗಿದೆ. ಜಿಲ್ಲೆಯ ಭಟ್ಕಳ ತಾಲೂಕಿನ ಮುಟ್ಟಳ್ಳಿಯಲ್ಲಿ 2 ರಿಂದ 3 ಭಾರಿ ಗುಡ್ಡ ಕುಸಿದಿದೆ. ಇದರಿಂದ ಗ್ರಾಮದ 10ಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು. ಸ್ಥಳೀಯ ಆಡಳಿತ ಗುಡ್ಡದ ಭಾಗದಲ್ಲಿ ರಸ್ತೆ ಸಂಚಾರ ಬಂದ್ ಮಾಡಿತ್ತು.

ಇದಕ್ಕಿಂತ ಮುಂಚೆ ಮುಟ್ಟಳ್ಳಿ ಗ್ರಾಮದಲ್ಲೇ ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಮೃತಪಟ್ಟಿದ್ದರು. ಲಕ್ಷ್ಮೀ ನಾಯ್ಕ(48), ಪುತ್ರಿ ಲಕ್ಷ್ಮೀ(33), ಅನಂತ(32), ಪ್ರವೀಣ್ ನಾಯ್ಕ(20) ನಾಲ್ವರು ಮೃತಪಟ್ಟಿದ್ದರು. ಉತ್ತರ ಕನ್ನಡ ಜಿಲ್ಲೆಯ ಅಣಶಿ ಗುಡ್ಡ ಕುಸಿದಿತ್ತು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 34ರ ಕಾರವಾರ-ಜೋಯಿಡಾ ಮಾರ್ಗದ ಸಂಚಾರ ಬಂದ ಮಾಡಲಾಗಿತ್ತು. ನಿರಂತರ ಮಳೆಯಿಂದಾಗಿ ಹೆದ್ದಾರಿಯಲ್ಲಿ ಅಣಶಿ ಗುಡ್ಡ ಸತತ ನಾಲ್ಕು ಬಾರಿ ಕುಸಿತಗೊಂಡಿದೆ. ಈ ಸಂಬಂಧ ವಾಹನ ಸಂಚಾರ ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ ಹೊರಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:58 pm, Fri, 9 September 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ