AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರೂರು ಗುಡ್ಡ ಕುಸಿತದಲ್ಲಿ ಸಿಲುಕಿದ್ದ ಲಾರಿ ಚಾಲಕನ ಫೋನ್ ರಿಂಗ್

ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಶಿರೂರು ಮಣ್ಣು ಕುಸಿತದ ವೇಳೆ ತನ್ನ ಲಾರಿಯಲ್ಲಿ ನಿದ್ರಿಸುತ್ತಿದ್ದರು. ಈ ಲಾರಿ ಮೇಲೆ ಇದೀಗ 60 ಟನ್ ಮಣ್ಣು ಬಿದ್ದಿದೆ. ಆದರೆ ಅರ್ಜುನ್ ಜೀವಂತ ಇದ್ದಾರೆ ಎಂಬ ನಂಬಿಕೆ ಹುಟ್ಟಿಕೊಂಡಿದೆ. ಅರ್ಜುನ್ ಫೋನ್ ಆನ್ ಆಫ್ ಆಗುತ್ತಿದೆ. ಹೀಗಾಗಿ ಮಣ್ಣು ಬೇಗ ತೆಗೆದರೆ ಅರ್ಜುನ್ ಬದುಕುತ್ತಾನೆ ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಶಿರೂರು ಗುಡ್ಡ ಕುಸಿತದಲ್ಲಿ ಸಿಲುಕಿದ್ದ ಲಾರಿ ಚಾಲಕನ ಫೋನ್ ರಿಂಗ್
ಶಿರೂರು ಗುಡ್ಡ ಕುಸಿತದಲ್ಲಿ ಸಿಲುಕಿದ್ದ ಲಾರಿ ಚಾಲಕನ ಫೋನ್ ರಿಂಗ್
Kiran Surya
| Edited By: |

Updated on: Jul 21, 2024 | 12:32 PM

Share

ಬೆಂಗಳೂರು, ಜುಲೈ.21: ಉತ್ತರಕನ್ನಡ ಜಿಲ್ಲೆಯ ಶಿರೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಂತ್ರಸ್ತರ ಶೋಧ ಕಾರ್ಯ ಮುಂದುವರೆದಿದೆ (Shirur Landslide). ಇನ್ನು ಲಾರಿ ಸಮೇತ ನೆಲದಡಿಯಲ್ಲಿ ಹೂತು ಹೋಗಿದ್ದ ಕೇರಳ ನಿವಾಸಿ ಅರ್ಜುನ್​ಗಾಗಿ ಕಳೆದ ಕೆಲ ದಿನಗಳಿಂದ ಶೋಧ ಕಾರ್ಯ ನಡೆಯುತ್ತಲೇ ಇದೆ. ಸದ್ಯ ಈಗ ಅರ್ಜುನ್ ಬದುಕಿರುವ ಬಗ್ಗೆ ಸುಳಿವು ಸಿಕ್ಕಿದೆ. ಆತನ ಫೋನ್ ಹಾಗೂ ಲಾರಿ ಇಂಜೆನ್ ಆನ್​ ಇದ್ದರೆ ಬಗ್ಗೆ ಮಾಹಿತಿ ಸಿಕ್ಕಿದೆ. ಅರ್ಜುನ್ ಕುಟುಂಬ ಸದಸ್ಯರು ಆಶಾಭಾವನೆ ಹೊರ ಹಾಕಿದ್ದಾರೆ. ಇನ್ನು ಮತ್ತೊಂದೆಡೆ ಸರ್ಕಾರ ಮತ್ತು ಸಚಿವರ ವಿರುದ್ಧ ಲಾರಿ ಅಸೋಸಿಯೇಷನ್ ಆಕ್ರೋಶ ಹೊರ ಹಾಕಿದೆ.

ಗುಡ್ಡ ಕುಸಿತ ಸಂಭವಿಸಿ ಅರ್ಜುನ್ ಲಾರಿ ಸಮೇತ ನೆಲದಡಿಯಲ್ಲಿ ಹೂತು ಹೋಗಿದ್ದು ಜುಲೈ 18ರ ಗುರುವಾರ ರಾತ್ರಿಯ ವರೆಗೂ ಲಾರಿ ಇಂಜನ್ ಚಾಲನೆಯಲ್ಲಿತ್ತು. ಹಾಗೂ ಶುಕ್ರವಾರ ಬೆಳಗ್ಗೆ ಅರ್ಜುನ್‌ನ ಫೋನ್ ರಿಂಗ್ ಆಗಿದೆ. ರೇಂಜ್ ಸಿಕ್ಕಾಗಲೆಲ್ಲ ಫೋನ್ ಆಕ್ಟಿವ್ ಆಗಿದೆ. ಇದರ ಅರ್ಥ ಅವರು ಎಲ್ಲೋ ಒಂದು ಕಡೆ ಬದುಕಿದ್ದಾರೆ ಎಂದು ಅರ್ಜುನ್ ಪತ್ನಿ ಕೃಷ್ಣಪ್ರಿಯಾ ಅವರು ಕೇರಳದ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಹೀಗಾಗಿ ಲಾರಿಯು ಗುಡ್ಡ ಕುಸಿತ ಅವಶೇಷದಲ್ಲಿ ಸಿಲುಕಿರದೇ ಬೇರೆ ಕಡೆಯೂ ಇರುವ ಸಾಧ್ಯತೆ ಇದೆ ಎಂದು ಕುಟುಂಬಸ್ಥರು ಸಂಶಯ ಹೊರ ಹಾಕಿದ್ದಾರೆ. ಇನ್ನು ಅರ್ಜುನ್ ಬದುಕಿರುವ ಸಾಧ್ಯತೆಗಳು ಹೆಚ್ಚಿವೆ. ನಮ್ಮ ಕಸಿನ್ ಕಾಲ್ ಮಾಡಿದಾಗ ಫೋನ್ ಶುಕ್ರವಾರ ಬೆಳಗ್ಗೆ ಸ್ವೀಟ್ಸ್ ಆಫ್ ಆಗಿದೆ. ಕಾರ್ಯಾಚರಣೆಗೆ ಸೇನೆ ಕರೆಸಬೇಕು ಎಂದು ಕಾಣೆಯಾಗಿರುವ ಅರ್ಜುನ್ ಸಹೋದರಿ ತಿಳಿಸಿದ್ದಾರೆ.

ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ; ದಿನೇ ದಿನೆ ಹೆಚ್ಚುತ್ತಿದೆ ನಾಪತ್ತೆಯಾದವರ ಸಂಖ್ಯೆ

ಗುಡ್ಡಕುಸಿದು ಮೂರ್ನಾಲ್ಕು ದಿನಗಳಾದ್ರು ಇನ್ನೂ ಲಾರಿಯನ್ನು ತೆಗೆದಿಲ್ಲ

ಇನ್ನು ಸರ್ಕಾರ ಮತ್ತು ಸಚಿವರ ವಿರುದ್ಧ ಲಾರಿ ಅಸೋಸಿಯೇಷನ್ ಆಕ್ರೋಶ ಹೊರ ಹಾಕಿದೆ. ಗುಡ್ಡಕುಸಿದು ಮೂರ್ನಾಲ್ಕು ದಿನಗಳಾದ್ರು ಇನ್ನೂ ಲಾರಿಯನ್ನು ತೆಗೆದಿಲ್ಲ. ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಹೋಗಿ ಪರಿಶೀಲಿಸಿಲ್ಲ ಎಂದು ಬೆಂಗಳೂರಿನಲ್ಲಿ ಲಾರಿ ಅಸೋಸಿಯೇಷನ್ ಅಧ್ಯಕ್ಷ ಷಣ್ಮುಗಪ್ಪ ಹೇಳಿಕೆ ನೀಡಿದ್ದಾರೆ. ಲಾರಿ ಡ್ರೈವರ್​ಗಳು ಅಂದ್ರೆ ರಾಜ್ಯ ಸರ್ಕಾರಕ್ಕೆ ಅಷ್ಟೊಂದು ಕಡೆಗಣನೆ. ನಮ್ಮನ್ನು ಕೂಡ ಗುಡ್ಡ ಕುಸಿದ ಸ್ಥಳಕ್ಕೆ ಹೋಗಲು ಅನುಮತಿ ನೀಡ್ತಿಲ್ಲ. ಗುಡ್ಡ ಕುಸಿದು ಮಂತ್ರಿಗಳೋ ಅಥವಾ ಅವರ ಕಡೆಯವರು ಯಾರಾದರು ಮಣ್ಣಿನೊಳಗಡೆ ಸಿಲುಕಿಕೊಂಡಿದ್ದರೇ ಇವರೆಲ್ಲಾ ಸುಮ್ಮನೇ ಇರ್ತಿದ್ರಾ? ರಾಜ್ಯ ಸರ್ಕಾರ ಕೂಡಲೇ ಲಾರಿ ಚಾಲಕನ ರಕ್ಷಣೆ ಮಾಡಬೇಕು. ನಾಳೆ ಮಧ್ಯಾಹ್ನ 12 ಗಂಟೆಯೊಳಗೆ ಲಾರಿಯನ್ನು ಆಚೆ ತೆಗೆಯಬೇಕು. ಇಲ್ಲದಿದ್ರೆ ಘಟನಾ ಸ್ಥಳದಲ್ಲೇ ಎಲ್ಲ ಲಾರಿಗಳನ್ನು ಅಡ್ಡಲಾಗಿ ಹಾಕಬೇಕಾಗುತ್ತೆ ಎಂದು ರಾಜ್ಯ ಸರ್ಕಾರಕ್ಕೆ ಲಾರಿ ಅಸೋಸಿಯೇಷನ್ ಅಧ್ಯಕ್ಷ ಷಣ್ಮುಗಪ್ಪ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK