AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರೂರು ಗುಡ್ಡ ಕುಸಿತದಲ್ಲಿ ಮಾಲೀಕನನ್ನು ಕಳೆದುಕೊಂಡು ಅನಾಥವಾಗಿದ್ದ ಶ್ವಾನ ಉತ್ತರ ಕನ್ನಡ ಪೊಲೀಸ್ ಇಲಾಖೆಯ ನೆಚ್ಚಿನ ನಾಯಿ

ಕಳೆದ ವರ್ಷ ಮಳೆಗಾಲದಲ್ಲಿ ಶಿರೂರಿನಲ್ಲಿ ಸಂಭವಿಸಿದ್ದ ಗುಡ್ಡ ಕುಸಿತದಲ್ಲಿ 11 ಜನ ಮೃತಪಟ್ಟಿದ್ದರು. ಇದೇ ಗುಡ್ಡ ಕುಸಿತದಲ್ಲಿ ಲಕ್ಷ್ಮಣ್ ನಾಯ್ಕ್​ ಎನ್ನುವ ಹೋಟೆಲ್ ಮಾಲೀಕನ ಕುಟುಂಬ ಮೃತಪಟ್ಟಿತ್ತು. ಲಕ್ಷ್ಮಣ್ ನಾಯ್ಕ್​ ಕುಟುಂಬದವರು ಪ್ರೀತಿಯಿಂದ ಸಾಕಿದ್ದ ಶ್ವಾನ ಅಂದು ಅನಾಥವಾಗಿತ್ತು. ಇದೀಗ, ಆ ಶ್ವಾನ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಆಕರ್ಷಣೆಯ ಕೇಂದ್ರಬಿಂದುವಾಗಿದೆ.

ಶಿರೂರು ಗುಡ್ಡ ಕುಸಿತದಲ್ಲಿ ಮಾಲೀಕನನ್ನು ಕಳೆದುಕೊಂಡು ಅನಾಥವಾಗಿದ್ದ ಶ್ವಾನ ಉತ್ತರ ಕನ್ನಡ ಪೊಲೀಸ್ ಇಲಾಖೆಯ ನೆಚ್ಚಿನ ನಾಯಿ
ಮಾಲೀಕನ ಸಾವಿನಿಂದ ಅನಾಥವಾಗಿದ್ದ ಶ್ವಾನ ಈಗ ಪೊಲೀಸರ ನೆಚ್ಚಿನ ನಾಯಿ​​
ಸೂರಜ್ ಪ್ರಸಾದ್ ಎಸ್.ಎನ್
| Edited By: ವಿವೇಕ ಬಿರಾದಾರ|

Updated on: Mar 10, 2025 | 8:34 AM

Share

ಕಾರವಾರ, ಮಾರ್ಚ್​ 10: ಉತ್ತರ ಕನ್ನಡ (Uttar Kannada) ಜಿಲ್ಲೆಯ ಶಿರೂರಿನ ಗುಡ್ಡ ಕುಸಿತ (Shirur Landslide) ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. 2024ರ ಜುಲೈ 16 ರಂದು ಧಾರಾಕಾರವಾಗಿ ಸುರಿದ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತವಾಗಿ 11 ಜನ ಮೃತಪಟ್ಟಿದ್ದರು. ಹೆದ್ದಾರಿ ಪಕ್ಕದಲ್ಲೇ ಲಕ್ಷ್ಮಣ್​ ನಾಯ್ಕ​ ಎಂಬುವರು ಹೋಟೆಲ್ ನಡೆಸುತ್ತಿದ್ದರು. ಗುಡ್ಡ ಕುಸಿದು ಮಣ್ಣು ಹೋಟೆಲ್ ಮೇಲೆ ಬಿದ್ದ ಪರಿಣಾಮ ಲಕ್ಷ್ಮಣ್​ ನಾಯ್ಕ ಮತ್ತು ಆತನ ಪತ್ನಿ ಹಾಗೂ ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದರು.

ಈ ಘಟನೆಯಲ್ಲಿ ಲಕ್ಷ್ಮಣ್ ನಾಯ್ಕ ಕುಟುಂಬದವರು ಪ್ರೀತಿಯಿಂದ ಸಾಕಿದ್ದ ಶ್ವಾನ ಅನಾಥವಾಗಿತ್ತು. ಕಾರ್ಯಚರಣೆ ನಡೆಯುವ ಪ್ರತಿದಿನ ಅವಘಡ ಸಂಭವಿಸಿದ್ದ ಸ್ಥಳಕ್ಕೆ ಬಂದು ಮಾಲೀಕನ ಬರುವಿಕೆಗಾಗಿ ಶ್ವಾನ ಕಾಯುತ್ತಾ ಕುಳಿತಿದ್ದು, ಸಾಕಷ್ಟು ಗಮನ ಸೆಳೆದಿತ್ತು. ಇದನ್ನು, ಗಮನಿಸಿದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ. ನಾರಾಯಣ್ ಶ್ವಾನವನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಿ ಸಾಕುತ್ತಿದ್ದಾರೆ.

ಈ ಶ್ವಾನಕ್ಕೆ ಜಿಲ್ಲಾ ಪೊಲೀಸ್ ಶ್ವಾನದಳದಲ್ಲಿ ತರಬೇತಿ ನೀಡಿಲಾಗಿದ್ದು, ರವಿವಾರ (ಮಾ.09) ಪೊಲೀಸ್ ಇಲಾಖೆಯಿಂದ ನಡೆದ ಮಾದಕ ದ್ರವ್ಯ ಹಾಗೂ ಸೈಬರ್ ಅಪರಾದ ಮುಕ್ತ ಕರ್ನಾಟಕ ಜಾಗೃತಿ ಮೂಡಿಸುವ ಮ್ಯಾರಾಥಾನ್​ನಲ್ಲಿ 5 ಕಿಮೀ ಓಡಿ ಪದಕವನ್ನ ಪಡೆದಿದೆ. ಶ್ವಾನಕ್ಕೆ ಸ್ವತಃ ಎಸ್​ಪಿ ಎಂ ನಾರಾಯಣ್ ತರಬೇತಿಯನ್ನು ನೀಡಿದ್ದು, ಬೇರೆ ಪೊಲೀಸ್​ ಶ್ವಾನಗಳಂತೆ ಈ ಶ್ವಾನ ಸಹ ಸಾಕಷ್ಟು ಚುರುಕಿನಿಂದ ಕೆಲಸ ಮಾಡುತ್ತಿದೆ. ಹೀಗಾಗಿ, ಇದು, ಎಸ್​​ಪಿ ಎಂ. ನಾರಾಯಣ್​ ಅವರ ನೆಚ್ಚಿನ ಶ್ವಾನವಾಗಿದೆ.

ಇದನ್ನೂ ಓದಿ
Image
ಮರಿ ಹುಲಿಗಳ ರಾಜ ಗಾಂಭೀರ್ಯ ನಡಿಗೆ ನೋಡಿ
Image
ಕಾರವಾರದಲ್ಲಿ SSLC ವಿದ್ಯಾರ್ಥಿ, ತುಮಕೂರಿನಲ್ಲಿ PUC ವಿದ್ಯಾರ್ಥಿನಿ ಸಾವು
Image
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
Image
ಸಚಿವರಿಂದ ಅರಣ್ಯ ಭೂಮಿ ಒತ್ತುವರಿ ಆರೋಪ: ಮಂಕಾಳು ವೈದ್ಯ ವಿರುದ್ಧ ದೂರು

ಪ್ರತಿನಿತ್ಯ ಬೆಳಿಗ್ಗೆ ನಾನು (ಎಂ. ನಾರಾಯಣ್​) ಕೆಲಸಕ್ಕೆ ತೆರಳುವಾಗ ಸಲ್ಯೂಟ್ ಮಾಡುತ್ತದೆ. ಮನೆಗೆ ವಾಪಾಸ್ ಬರುವವರೆಗೂ ಗೇಟ್ ಬಳಿಯೇ ಕಾಯುತ್ತಾ ಕುಳಿತಿರುತ್ತದೆ. ಮೀಟಿಂಗ್ ಅಥವಾ ಇನ್ನಿತರ ಕಾರಣಕ್ಕೆ ಬೆಂಗಳೂರಿಗೆ ಹೋದರೇ ನಾನು ಮರಳಿ ಮನೆಗೆ ಬರುವವರೆಗೆ ಮಂಕಾಗಿ ಇರುತ್ತದೆ. ಈ ಹಿನ್ನಲೆಯಲ್ಲಿ ಶ್ವಾನ ನನ್ನ ಮನೆಯ ಸದಸ್ಯನಂತಾಗಿದೆ ಎಂದು ಎಂ ನಾರಾಯಣ್ ಹೇಳಿದ್ದಾರೆ.

ಈ ಶ್ವಾನವನ್ನು ಶಿರೂರಿನಲ್ಲಿಯೇ ಬಿಟ್ಟು ಬಂದಿದ್ದರೆ, ಬೇರೆ ನಾಯಿಗಳಂತೆ ಇದು ಇರುತ್ತಿತ್ತು. ಆದರೆ, ಅದನ್ನು ತಂದು ಸೂಕ್ತ ತರಬೇತಿ ನೀಡಿದ ಪರಿಣಾಮ ಎಲ್ಲರ ಗಮನ ಸೆಳೆದಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ‘ನಾನೂ ನಿಮ್ಮಂತೆ ಡಿಸಿ ಆಗಬೇಕು’: ವಿದ್ಯಾರ್ಥಿನಿ ಮಾತಿಗೆ ಉತ್ತರ ಕನ್ನಡ ಡಿಸಿ ಮಾಡಿದ್ದೇನು ಗೊತ್ತಾ?

ಒಟ್ಟಿನಲ್ಲಿ ಮಾಲೀಕನ ಕಳೆದುಕೊಂಡು ಬೀದಿಯಲ್ಲಿ ತಿರುಗುತ್ತಿದ್ದ ಶ್ವಾನವನ್ನು ಪೊಲೀಸ್ ಇಲಾಖೆಯ ಸೇವೆಯಲ್ಲಿ ಬಳಸಿಕೊಂಡ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ್ ಅವರ ಕಾರ್ಯ ನಿಜಕ್ಕೂ ಮೆಚ್ಚುವಂತದ್ದು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More