AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರೂರು ಗುಡ್ಡ ಕುಸಿತ ಪ್ರಕರಣ; ಎಂಟನೇ ದಿನ, 8ನೇ ಶವ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟನೇ ದಿನವಾದ ಇಂದು(ಜು.23) ಎಂಟನೇ ಶವವೊಂದು ಪತ್ತೆಯಾಗಿದೆ. 61 ವರ್ಷದ ವೃದ್ಧೆ ಸಣ್ಣಿಗೌಡ ಎಂಬುವವರ ಮೃತದೇಹ ಇದಾಗಿದ್ದು, ಗಂಗೆಕೊಳ್ಳ ಪ್ರದೇಶದಲ್ಲಿ ಶವ ಸಿಕ್ಕಿದೆ.

ಶಿರೂರು ಗುಡ್ಡ ಕುಸಿತ ಪ್ರಕರಣ; ಎಂಟನೇ ದಿನ, 8ನೇ ಶವ ಪತ್ತೆ
ಶಿರೂರು ಗುಡ್ಡ ಕುಸಿತ ಪ್ರಕರಣ, ಎಂಟನೇ ಶವ ಪತ್ತೆ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Jul 23, 2024 | 5:12 PM

Share

ಉತ್ತರ ಕನ್ನಡ, ಜು.23: ಅಂಕೋಲಾ(Ankola) ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟನೇ ದಿನ ನಡೆದ ಕಾರ್ಯಾಚರಣೆಯಲ್ಲಿ 8ನೇ ಶವ ಪತ್ತೆಯಾಗಿದೆ. ಹೌದು, ಜುಲೈ 16ರಂದು ನಾಪತ್ತೆಯಾಗಿದ್ದ 61 ವರ್ಷದ ವೃದ್ಧೆ ಸಣ್ಣಿಗೌಡ ಎಂಬುವವರ ಮೃತದೇಹ ಇದಾಗಿದ್ದು, ಇಂದು(ಮಂಗಳವಾರ) ಗಂಗಾವಳಿ ನದಿಯ ಗಂಗೆಕೊಳ್ಳ ಪ್ರದೇಶದಲ್ಲಿ ಮೃತದೇಹ ಸಿಕ್ಕಿದೆ.

ತಾಲೂಕಿನ ಉಳುವರೆ ನಿವಾಸಿಯಾದ ಇವರು, ಮನೆಯಲ್ಲಿದ್ದ ವೇಳೆ ಶಿರೂರು ಬಳಿ ಗುಡ್ಡ ಕುಸಿದು ಅಪಾರ ಪ್ರಮಾಣದ ಮಣ್ಣು ಗಂಗಾವಳಿ ನದಿಗೆ ಬಿದ್ದಿತ್ತು. ಇದರ ರಭಸಕ್ಕೆ ಎದುರಿನ ಮನೆಗೆ ಅಪ್ಪಳಿಸಿತ್ತು. ಪರಿಣಾಮ ಶಿರೂರು ಎದುರಿನ ಉಳುವರೆ ಗ್ರಾಮದ 2 ಮನೆ ಕೊಚ್ಚಿಹೋಗಿತ್ತು. ಎಂಟು ದಿನದ ನಂತರ ಶವವಾಗಿ ಗೋಕರ್ಣ ಭಾಗದ ಗಂಗೆಕೊಳ್ಳದಲ್ಲಿ ಶವ ಪತ್ತೆ ಆಗಿತ್ತು.

ಇದನ್ನೂ ಓದಿ:ಶಿರೂರು ಗುಡ್ಡ ಕುಸಿತ ದುರಂತ: ಮೃತದೇಹಗಳನ್ನು ಹುಡುಕುವ ಕಾರ್ಯಾಚರಣೆ ಮುಂದುವರಿದಿದೆ

ಧಾರಾಕಾರ ಮಳೆ ನಡುವೆಯೇ ಶವಸಂಸ್ಕಾರ

ಧಾರಾಕಾರ ಮಳೆ ನಡುವೆಯೇ ಇಂದು ಗಂಗೆಕೊಳ್ಳದಲ್ಲಿ ಸಿಕ್ಕಿದ್ದ ಉಳವರೆಯ ಸಣ್ಣಿ ಹನುಮಂತ ಗೌಡ ಅವರ ಅಂತ್ಯ ಸಂಸ್ಕಾರ ಮಾಡಲಾಗಿದೆ. ಪುತ್ರ ಮಂಜುನಾಥ್  ಎಂಬುವರಿಂದ ಸಣ್ಣಿ ಗೌಡ ಚಿತೆಗೆ ಅಗ್ನಿಸ್ಪರ್ಷ ಮಾಡಲಾಗಿದೆ. ಇನ್ನು ಮನೆಯ ಮುಂದೆ ಮೃತ ದೇಹ ಬರುತ್ತಿದ್ದಂತೆ ಓಡಿ ಬಂದ ಶ್ವಾನ, ಶವದ ಬಳಿ ಶ್ವಾನದ ಮೌನ ರೋಧನೆ ಕರಳು ಹಿಂಡುವಂತಿತ್ತು. ಜೊತೆಗೆ ಪೂರ್ತಿ ನೆಲಸಮವಾದ ಮನೆಯ ಮುಂದೆಯೇ ಅಂತಿಮ ವಿಧಿವಿಧಾನ ಮಾಡಲಾಗಿದೆ.

ಎಂಟನೇ ದಿನವೂ ಮುಂದುವರೆದಿದ್ದ ಶೋಧಕಾರ್ಯ

ಮಳೆಯ ಅಬ್ಬರ ತಗ್ಗಿದ ಹಿನ್ನೆಲೆ ಎಂಟನೇ ದಿನವೂ ಕಾರ್ಯಾಚರಣೆ ಭರದಿಂದ ಸಾಗಿದ್ದು, NDRF, SDRF, NAVY and army ಸಿಬ್ಬಂಧಿಗಳು ನದಿಯಲ್ಲಿ ನಿರಂತರ ಶೋಧ ಕಾರ್ಯ ಮಾಡುತ್ತಿದ್ದಾರೆ. ಮೃತ ದೇಹದ ಪತ್ತೆಗಾಗಿ ತಂತ್ರಜ್ಞಾನದ ಮೊರೆ ಹೋಗಿರುವ ಜಿಲ್ಲಾಡಳಿತ, ಮೃತ ದೇಹಗಳ ಪತ್ತೆಗೆ ಸತತ ಪ್ರಯತ್ನ ಮಾಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:07 pm, Tue, 23 July 24

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ