AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರೂರು ಗುಡ್ಡ ಕುಸಿತ: ನದಿಯಲ್ಲಿ ಸಿಕ್ತು ಲಾರಿ ಚಾಲಕನ ಅರ್ಧ ಮೃತದೇಹ, DNA ಮೂಲಕ ಗುರುತು ಪತ್ತೆ

ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಇಲ್ಲಿಯವರೆಗೆ ಒಟ್ಟು ಹತ್ತು ಜನರು ಮೃತಪಟ್ಟಿದ್ದು, ಎಂಟು ಜನರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಇನ್ನುಳಿದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಈ ಮಧ್ಯೆ ಕಳೆದ ನಾಲ್ಕು ದಿನಗಳ ಹಿಂದೆ ಗಂಗೆಕೊಳದಲ್ಲಿ ಪತ್ತೆಯಾಗಿದ್ದ ಮೃತದೇಹ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಅವರದು ಎಂದು ತಿಳಿದುಬಂದಿದೆ.

ಶಿರೂರು ಗುಡ್ಡ ಕುಸಿತ: ನದಿಯಲ್ಲಿ ಸಿಕ್ತು ಲಾರಿ ಚಾಲಕನ ಅರ್ಧ ಮೃತದೇಹ, DNA ಮೂಲಕ ಗುರುತು ಪತ್ತೆ
ಮೃತ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Jul 25, 2024 | 7:41 PM

Share

ಉತ್ತರ ಕನ್ನಡ, ಜು.25: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತದೇಹ ಪತ್ತೆಯಾಗಿದ್ದು, ಡಿಎನ್​ಎ ವರದಿಯಲ್ಲಿ ಶರವಣನ್ ಬಾಡಿ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ವೇಳೆ ಕಳೆದ ನಾಲ್ಕು ದಿನಗಳ ಹಿಂದೆ ಗಂಗೆಕೊಳದಲ್ಲಿ ಹೊಟ್ಟೆಯ ಕೆಳಭಾಗದ ದೇಹ ಮಾತ್ರ ಪತ್ತೆಯಾಗಿತ್ತು. ಇದೀಗ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತ ದೇಹ ಎಂದು ಉತ್ತರ ಕನ್ನಡ ಎಸ್​ಪಿ ನಾರಾಯಣ್ ದೃಢ ಪಡಿಸಿದ್ದಾರೆ.

ಅಂಕೋಲಾ ಪೊಲೀಸ್ ಠಾಣೆಗೆ ಮೃತ ಶರವಣನ್​ ಕುರಿತು ದೂರು ನೀಡಿದ್ದ ಮಾವ

ಗುಡ್ಡ ಕುಸಿತವಾದ ಪಕ್ಕದಲ್ಲೆ ಆತನ ಟ್ಯಾಂಕರ್ ಇತ್ತು. ಅದನ್ನು ಜಿಲ್ಲಾಡಳಿತದವರು ಬೇರೆ ಕಡೆ ಸ್ಥಳಾಂತರ ಮಾಡಿದ್ದರು. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಚಾಲಕ ಶರವಣನ್​ ನಾಪತ್ತೆ ಆಗಿದ್ದಾರೆ ಎಂದು ಅವರ ಮಾವ ಸೆಂದೀಲ್ ಎಂಬುವವರು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಕುರಿತು ಮಾತನಾಡಿದ್ದ ಸೆಂದೀಲ್ , ‘ಶರವಣನ್ ಮೊಬೈಲ್​ ಬ್ಯಾಟರಿ ಕಡಿಮೆ ಆಗಿ ಮೊಬೈಲ್ ಸ್ವಿಚ್ ಆಫ್ ಆಗಿರಬಹುದು. ಆದ್ರೆ, ಬಹಳ ದಿನ ಕಳೆದರೂ ಮೊಬೈಲ್ ಆನ್ ಆಗದಿದಕ್ಕೆ ಹುಡುಕಾಟ ನಡೆಸಿದ್ದೇವೆ ಎಂದಿದ್ದರು.

ಇದನ್ನೂ ಓದಿ:ಶಿರೂರು ಗುಡ್ಡ ಕುಸಿತ: ಗಂಗಾವಳಿ ನದಿಯಲ್ಲಿ ತೇಲಿಬಂತು ಅರ್ಜುನ್ ಟ್ರಕ್​ನಲ್ಲಿದ್ದ ಮರದ ತುಂಡು

ಇನ್ನು ತಮಿಳುನಾಡು ಮೂಲದ ಲಾರಿ ಚಾಲಕ ಶವರಣ ನಾಪತ್ತೆ ಆದ ಕುರಿತು ದೂರು ದಾಖಲಿಸುತ್ತಿದ್ದಂತೆ ಆತನ ಸಂಬಂಧಿಕರು ಶಿರೂರುಗೆ ಬಂದಿದ್ದರು. ಇದೀಗ ನಾಲ್ಕು ದಿನದ ಹಿಂದೆ ಸಿಕ್ಕಿದ್ದ ಅರ್ಧ ದೇಹ, ಶರವಣನ್​​ ಅವರದ್ದಾಗಿದೆ ಎಂದು ಎಸ್ಪಿ ಖಚಿತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Thu, 25 July 24

Follow Us
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್