AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರೂರು ಗುಡ್ಡ ಕುಸಿತ: ನದಿಯಲ್ಲಿ ಸಿಕ್ತು ಲಾರಿ ಚಾಲಕನ ಅರ್ಧ ಮೃತದೇಹ, DNA ಮೂಲಕ ಗುರುತು ಪತ್ತೆ

ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಇಲ್ಲಿಯವರೆಗೆ ಒಟ್ಟು ಹತ್ತು ಜನರು ಮೃತಪಟ್ಟಿದ್ದು, ಎಂಟು ಜನರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಇನ್ನುಳಿದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಈ ಮಧ್ಯೆ ಕಳೆದ ನಾಲ್ಕು ದಿನಗಳ ಹಿಂದೆ ಗಂಗೆಕೊಳದಲ್ಲಿ ಪತ್ತೆಯಾಗಿದ್ದ ಮೃತದೇಹ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಅವರದು ಎಂದು ತಿಳಿದುಬಂದಿದೆ.

ಶಿರೂರು ಗುಡ್ಡ ಕುಸಿತ: ನದಿಯಲ್ಲಿ ಸಿಕ್ತು ಲಾರಿ ಚಾಲಕನ ಅರ್ಧ ಮೃತದೇಹ, DNA ಮೂಲಕ ಗುರುತು ಪತ್ತೆ
ಮೃತ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Jul 25, 2024 | 7:41 PM

Share

ಉತ್ತರ ಕನ್ನಡ, ಜು.25: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತದೇಹ ಪತ್ತೆಯಾಗಿದ್ದು, ಡಿಎನ್​ಎ ವರದಿಯಲ್ಲಿ ಶರವಣನ್ ಬಾಡಿ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ವೇಳೆ ಕಳೆದ ನಾಲ್ಕು ದಿನಗಳ ಹಿಂದೆ ಗಂಗೆಕೊಳದಲ್ಲಿ ಹೊಟ್ಟೆಯ ಕೆಳಭಾಗದ ದೇಹ ಮಾತ್ರ ಪತ್ತೆಯಾಗಿತ್ತು. ಇದೀಗ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತ ದೇಹ ಎಂದು ಉತ್ತರ ಕನ್ನಡ ಎಸ್​ಪಿ ನಾರಾಯಣ್ ದೃಢ ಪಡಿಸಿದ್ದಾರೆ.

ಅಂಕೋಲಾ ಪೊಲೀಸ್ ಠಾಣೆಗೆ ಮೃತ ಶರವಣನ್​ ಕುರಿತು ದೂರು ನೀಡಿದ್ದ ಮಾವ

ಗುಡ್ಡ ಕುಸಿತವಾದ ಪಕ್ಕದಲ್ಲೆ ಆತನ ಟ್ಯಾಂಕರ್ ಇತ್ತು. ಅದನ್ನು ಜಿಲ್ಲಾಡಳಿತದವರು ಬೇರೆ ಕಡೆ ಸ್ಥಳಾಂತರ ಮಾಡಿದ್ದರು. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಚಾಲಕ ಶರವಣನ್​ ನಾಪತ್ತೆ ಆಗಿದ್ದಾರೆ ಎಂದು ಅವರ ಮಾವ ಸೆಂದೀಲ್ ಎಂಬುವವರು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಕುರಿತು ಮಾತನಾಡಿದ್ದ ಸೆಂದೀಲ್ , ‘ಶರವಣನ್ ಮೊಬೈಲ್​ ಬ್ಯಾಟರಿ ಕಡಿಮೆ ಆಗಿ ಮೊಬೈಲ್ ಸ್ವಿಚ್ ಆಫ್ ಆಗಿರಬಹುದು. ಆದ್ರೆ, ಬಹಳ ದಿನ ಕಳೆದರೂ ಮೊಬೈಲ್ ಆನ್ ಆಗದಿದಕ್ಕೆ ಹುಡುಕಾಟ ನಡೆಸಿದ್ದೇವೆ ಎಂದಿದ್ದರು.

ಇದನ್ನೂ ಓದಿ:ಶಿರೂರು ಗುಡ್ಡ ಕುಸಿತ: ಗಂಗಾವಳಿ ನದಿಯಲ್ಲಿ ತೇಲಿಬಂತು ಅರ್ಜುನ್ ಟ್ರಕ್​ನಲ್ಲಿದ್ದ ಮರದ ತುಂಡು

ಇನ್ನು ತಮಿಳುನಾಡು ಮೂಲದ ಲಾರಿ ಚಾಲಕ ಶವರಣ ನಾಪತ್ತೆ ಆದ ಕುರಿತು ದೂರು ದಾಖಲಿಸುತ್ತಿದ್ದಂತೆ ಆತನ ಸಂಬಂಧಿಕರು ಶಿರೂರುಗೆ ಬಂದಿದ್ದರು. ಇದೀಗ ನಾಲ್ಕು ದಿನದ ಹಿಂದೆ ಸಿಕ್ಕಿದ್ದ ಅರ್ಧ ದೇಹ, ಶರವಣನ್​​ ಅವರದ್ದಾಗಿದೆ ಎಂದು ಎಸ್ಪಿ ಖಚಿತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Thu, 25 July 24

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು