AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರೂರು ಗುಡ್ಡ ಕುಸಿತ; ರಾಜ್ಯ ಸರ್ಕಾರದ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಕಿಡಿ

ಅಂಕೋಲಾ(Ankola) ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತ ಸ್ಥಳಕ್ಕೆ ಇಂದು(ಶನಿವಾರ) ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ‘ಇಂತಹ ಸಮಯದಲ್ಲಿ ಹಾನಿಯಾದ ಕುಟುಂಬದ ಜೊತೆ ಸರ್ಕಾರ ಇರಬೇಕು. ಇದರಲ್ಲೂ ರಾಜ್ಯ ಸರ್ಕಾರ ರಾಜಕಾರಣ ಮಾಡಬಾರದು ಎಂದು ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ.

ಶಿರೂರು ಗುಡ್ಡ ಕುಸಿತ; ರಾಜ್ಯ ಸರ್ಕಾರದ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಕಿಡಿ
ಸರ್ಕಾರದ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಕಿಡಿ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 20, 2024 | 3:58 PM

ಉತ್ತರ ಕನ್ನಡ, ಜು.20: ಅಂಕೋಲಾ(Ankola) ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತ ಸ್ಥಳಕ್ಕೆ ಇಂದು(ಶನಿವಾರ) ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ‘ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕೇಂದ್ರ ಹಾಗೂ ರಾಜ್ಯ ಎಂದು ರಾಜ್ಯ ಸರ್ಕಾರ ರಾಜಕಾರಣ ಮಾಡಬಾರದು. ಹಾನಿಯಾದ ಕುಟುಂಬದ ಜೊತೆ ಸರ್ಕಾರ ಇರಬೇಕು. ಘಟನೆ ಆಗಿದ್ದರ ಬಗ್ಗೆ ನನಗೆ ಬೇಸರವಿದೆ ಎಂದರು.

ನಾನು ಸಿಎಂ ಆಗಿದ್ದಾಗ ಭೂ ಕುಸಿತ ಆಗಿತ್ತು

ಅವೈಜ್ಞಾನಿಕ ಕಾಮಗಾರಿಯಿಂದ ಘಟನೆ ನಡೆದಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿ ಪ್ರೀಯಾ ಮಾಹಿತಿ ನೀಡಿದ್ದಾರೆ. ಈ ಘಟನೆಯಿಂದ ಒಂದೇ ಕುಟುಂಬದ ಐವರು ಮೃತಪಟ್ಟಿರುವುದು ದುರಂತ. 2018 ರಲ್ಲಿ ನಾನು ಸಿಎಂ ಆಗಿದ್ದಾಗ ಕೊಡಗಿನಲ್ಲಿ ಭೂ ಕುಸಿತ ಆಗಿತ್ತು. ಆಗ ಮನೆ ಕಳೆದುಕೊಂಡವರಿಗೆ ಹತ್ತು ಲಕ್ಷ ಹಣ ಕೊಟ್ಟಿದ್ದೆವು ಎಂದು ತಮ್ಮ ಅವಧಿಯಲ್ಲಿ ನಡೆದ ಘಟನೆಯನ್ನು ನೆನೆದರು. ಇನ್ನು ಎನ್​ಡಿಆರ್​ಎಫ್ ಈ ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದೆ. ಅದು ಕೇಂದ್ರ ಸರ್ಕಾರದ ಅಂಗವಲ್ಲವೇ?, ಮೊದಲು ಇಂತಹ ಘಟನೆಯಲ್ಲಿ ರಾಜಕಾರಣ ಮಾಡುವುದನ್ನ ರಾಜ್ಯ ಸರ್ಕಾರ ಬಿಡಲಿ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:ಶಿರೂರು ಗುಡ್ಡಕುಸಿತ; ಜಿಲ್ಲಾ ಉಸ್ತುವಾರಿ ಸಚಿವನ ಸಮಕ್ಷಮ ತೆರವು ಕಾರ್ಯಾಚರಣೆ ನಡೆದಿದೆ: ಶಿವಕುಮಾರ್

ಇನ್ನು ಘಟನೆಯಲ್ಲಿ ಹಲವು ಜನ ಪ್ರಾಣ ಕಳೆದುಕೊಂಡಿದ್ದರು. ನಿನ್ನೆಯಷ್ಟೇ  ನದಿಗೆ ತೇಲಿ ಹೋಗಿದ್ದ ಗ್ಯಾಸ್​ ಟ್ಯಾಂಕರ್​ನಿಂದ ಎಲ್​ಪಿಜಿ ಗ್ಯಾಸ್​ನ್ನು ಯಶಸ್ವಿಯಾಗಿ ಹೊರತೆಗೆಯಲಾಗಿದೆ. 24 ಗಂಟೆಗಳ ನಿರಂತರ ಕಾರ್ಯಾಚರಣೆ ನಡೆಸಿ, ಸುಮಾರು 100 ಕ್ಕೂ ಹೆಚ್ಚು ಜನರ ನಿರಂತರ ಶ್ರಮದಿಂದ ಯಾವುದೇ ಅಪಾಯ ಸಂಭವಿಸಿದಂತೆ ಟ್ಯಾಂಕರ್​ನಲ್ಲಿದ್ದ ಪೂರ್ತಿ ಗ್ಯಾಸ್​ನ್ನು ಗಂಗಾವಳಿ ನದಿಗೆ ಬಿಡಲಾಗಿತ್ತು. ಇದರಿಂದ​ ಸುಮಾರು 10 ಗ್ರಾಮಗಳಿಗಿದ್ದ ಆತಂಕ ದೂರವಾಗಿದ್ದು, ದೊಡ್ಡ ಆತಂಕದಿಂದ ಗ್ರಾಮಸ್ಥರನ್ನು ಪಾರುಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Sat, 20 July 24

ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್