AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರೂರು ಗುಡ್ಡ ಕುಸಿತ: ಮೃತ ದೇಹ ಹುಡುಕಿ ಕುಟುಂಬಸ್ಥರಿಗೆ ನೀಡುವ ಪಣತೊಟ್ಟ ಈಜು ತಜ್ಞ

ಅಂಕೋಲಾ(Ankola) ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾದ 11 ಜನರ ಪೈಕಿ ಉಳಿದ ಮೂವರಿಗಾಗಿ ಹುಡುಕಾಟ ನಡೆಯುತ್ತಿದೆ. ಅದರಂತೆ ಕಾರ್ಯಾಚರಣೆಯಲ್ಲಿ ತೊಡಗಿರುವ ಈಜು ತಜ್ಞ ಈಶ್ವರ ಮಲ್ಪೆ, ‘ಮೃತ ದೇಹ ಹುಡುಕಿ ಕುಟುಂಬಸ್ಥರಿಗೆ ನೀಡುವ ಪಣತೊಟ್ಟಿದ್ದಾರೆ.

ಶಿರೂರು ಗುಡ್ಡ ಕುಸಿತ: ಮೃತ ದೇಹ ಹುಡುಕಿ ಕುಟುಂಬಸ್ಥರಿಗೆ ನೀಡುವ ಪಣತೊಟ್ಟ ಈಜು ತಜ್ಞ
ಈಶ್ವರ ಮಲ್ಫೆ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Jul 30, 2024 | 6:20 PM

Share

ಉತ್ತರ ಕನ್ನಡ, ಜು.30: ಇದೇ ಜುಲೈ 16 ರ ಬೆಳಗ್ಗೆ ಅಂಕೋಲಾ(Ankola) ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿದು 11 ಜನ ಮಣ್ಣಿನಲ್ಲಿ ಕೊಚ್ಚಿ ಹೋದ ಘಟನೆ ನಡೆದಿತ್ತು. ಬಳಿಕ ಕಾರ್ಯಾಚರಣೆ ನಡೆಸಿ ಎಂಟು ಜನರ ಮೃತದೇಹವನ್ನು ಪತ್ತೆ ಮಾಡಲಾಗಿತ್ತು. ಇನ್ನುಳಿದಂತೆ ಮೂವರ ಮೃತದೇಹಕ್ಕಾಗಿ ಹುಡುಕಾಟ ನಡೆಯುತ್ತಿದೆ. ಅದರಂತೆ ಕಾರ್ಯಾಚರಣೆಯಲ್ಲಿ ತೊಡಗಿರುವ ಈಜು ತಜ್ಞ ಈಶ್ವರ ಮಲ್ಪೆ, ‘ಮೃತ ದೇಹ ಹುಡುಕಿ ಕುಟುಂಬಸ್ಥರಿಗೆ ನೀಡುವ ಪಣತೊಟ್ಟಿದ್ದಾರೆ.

ಕುಟುಂಬಸ್ಥರಿಗೆ ಮೃತ ದೇಹ ಹುಡುಕಿ ಕೊಡಲು ಪಣತೊಟ್ಟ ಈಜು ತಜ್ಞ ಈಶ್ವರ ಮಲ್ಪೆ

ಈ ಕುರಿತು ಈಜು ತಜ್ಞ ಈಶ್ವರ ಮಲ್ಪೆ ಮಾತನಾಡಿ, ‘ನದಿಯ ನೀರಿನ ಪ್ರಮಾಣ ಕಡಿಮೆ ಆಗುವ ನಿರೀಕ್ಷೆ ಇತ್ತು. ಯಲ್ಲಾಪುರ ಭಾಗದಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆ ಗಂಗಾವಳಿ ನದಿಯ ನೀರಿನ ರಭಸ ಹಾಗೂ ಪ್ರಮಾಣ ಹೆಚ್ಚಾಗಿದೆ. ಮೊನ್ನೆ ನಾನು ನದಿಗೆ ಇಳಿದಾಗ 8 ನಾಟ್ಸ್ ವೇಗ ಇತ್ತು. ಇಂದು 12 ನಾಟ್ಸ್ ವೇಗದಲ್ಲಿ ನದಿಯ ನೀರು ಹರಿಯುತ್ತಿದೆ. ಅಗಸ್ಟ್ 3 ರ ಬೆಳಗಿನ ಜಾವ 4 ಗಂಟೆಗೆ ಅಮವಾಸ್ಯೆ ಇದೆ. ಆ ಸಂದರ್ಭದಲ್ಲಿ ನದಿಯ ನೀರಿನ ಪ್ರಮಾಣ ಮತ್ತು ವೇಗ ಕಡಿಮೆ ಆಗುತ್ತದೆ. ಹಾಗಾಗಿ ಆ ದಿನ ಕಾರ್ಯಾಚರಣೆ ಮಾಡಲು ನಿರ್ಧಾರ ಮಾಡಲಾಗಿದೆ. ನಮ್ಮ ಕಾರ್ಯಾಚರಣೆಗೆ ಸಹಕಾರ ನೀಡಲು ಕೇರಳದಿಂದ ವಿಶೇಷ ಯಂತ್ರ ತರಲಾಗುತ್ತಿದೆ. ಆ ಯಂತ್ರ ಈ ನದಿಯಲ್ಲಿ ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ ನೋಡಬೇಕು. ಕಣ್ಮರೆ ಆದವರ ಕುಟುಂಬಸ್ಥರಿಗೆ ಮೃತ ದೇಹ ಹುಡುಕಿ ಕೊಡಲೆಬೇಕೆಂದು ಪಣತೊಟ್ಟಿದ್ದೆನೆ ಎಂದಿದ್ದಾರೆ.

ಇದನ್ನೂ ಓದಿ:ಶಿರೂರು ಗುಡ್ಡ ಕುಸಿತ: ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ತನ್ನಿಬ್ಬರು ಮಕ್ಕಳು ಸೇರಿದಂತೆ ಐವರನ್ನ ರಕ್ಷಿಸಿದ ಹುವಾ ಗೌಡ

ಕಾರ್ಯಾಚರಣೆ ಸಂಪೂರ್ಣ ಸ್ಥಗಿತಗೊಳಿಸಿದ ಜಿಲ್ಲಾಡಳಿತ

ಗಂಗಾವಳಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದ್ದು, ಇನ್ನು ಎರಡು ದಿನಗಳಿಂದ ಉತ್ತರ ಕನ್ನಡ ಜಿಲ್ಲಾಡಳಿತ ಕಾರ್ಯಾಚರಣೆ ಸಂಪೂರ್ಣ ಸ್ಥಗಿತಗೊಳಿಸಿದೆ. ಗುಡ್ಡ ಕುಸಿತ ಭೀತಿಯಿಂದ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿಲ್ಲ. ಗುಡ್ಡ ಕುಸಿತದಲ್ಲಿ ನಾಪತ್ತೆ ಆಗಿರುವ ಕೇರಳದ ಅರ್ಜುನ್, ಉತ್ತರ ಕನ್ನಡ ಜಿಲ್ಲೆಯ ಜಗನ್ನಾಥ್ ಹಾಗೂ ಲೋಕೇಶ್ ಅವರಿಗಾಗಿ ಹುಡುಕಾಟ ನಡೆಯುತ್ತಿದೆ. ಇನ್ನು ಕೇರಳದಿಂದ ಅಧಿಕಾರಿಗಳ ತಂಡ ಆಗಮಿಸಿದ್ದು, ಶಾಸಕ ಸತೀಶ್ ಸೈಲ್‌ ಜೊತೆ ಭೇಟಿ ಮಾಡಿ ಪರಿಶೀಲನೆ ನಡೆಸಯುತ್ತಿದೆ. ಅದರಂತೆ ಆಗಸ್ಟ್ 3ರ ನಂತರ ಕಾರ್ಯಾಚರಣೆ ಮಾಡಲು ಸಿದ್ಧತೆ ಮಾಡಿಕೊಂಡಿದೆ.

ಕೇರಳ ಸರ್ಕಾರದ ಅಧಿಕಾರಿ ವಿನ್ಸಿ

ಈ ಕುರಿತು ಕೇರಳ ಸರ್ಕಾರದ ಅಧಿಕಾರಿ ವಿನ್ಸಿ ಮಾತನಾಡಿ, ‘ಮಣ್ಣು ತೆರವು ಮಾಡುವ ಯಂತ್ರವೊಂದನ್ನ ಕೇರಳದಿಂದ ತರುವ ಚಿಂತನೆ ನಡೆದಿದೆ. ಈ ಬಗ್ಗೆ ಕೇರಳ ಸರ್ಕಾರದ ಅಧಿಕಾರಿಗಳ ಜೊತೆ ಉತ್ತರ ಕನ್ನಡ ಡಿಸಿ ಮಾತನಾಡಿದ್ದಾರೆ. ಆದ್ರೆ ಇಲ್ಲಿನ ನದಿಯ ನೀರಿನ ಪ್ರಮಾಣ ಹಾಗೂ ರಭಸ ನೋಡಿದ್ರೆ ಕಷ್ಟ ಅನಿಸುತ್ತದೆ. ಗರಿಷ್ಠ 4 ನಾಟ್ಸ್ ವೇಗದಲ್ಲಿ ಮಾತ್ರ ಆ ಯಂತ್ರ ವರ್ಕ್ ಮಾಡುತ್ತದೆ. ಆದ್ರೆ ಈಗ ನದಿಯ ನೀರಿನ ವೇಗ 12 ನಾಟ್ಸ್ ಇದೆ. ಅಮವಾಸ್ಯೆಯ ದಿನ ನೀರಿನ ಮಟ್ಟ ಕಡಿಮೆ ಆಗುವ ನಿರೀಕ್ಷೆಯಿದೆ. ಈ ಬಗ್ಗೆ ನಮ್ಮ ಹಿರಿಯ ಅಧಿಕಾರಿಗಳ ಜೊತೆ ಮಾತನಾಡುತ್ತೇವೆ. ಬಳಿಕ ಕಾರ್ಯಾಚರಣೆ ಹೇಗೆ ಮಾಡಬೇಕು ಎಂಬುವುದರ ಬಗ್ಗೆ ನಿರ್ಧರಿಸುತ್ತೇವೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್