AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರೂರು ಗುಡ್ಡ ಕುಸಿತ; ದಿನೇ ದಿನೆ ಹೆಚ್ಚುತ್ತಿದೆ ನಾಪತ್ತೆಯಾದವರ ಸಂಖ್ಯೆ

ಉತ್ತರಕನ್ನಡ ಜಿಲ್ಲೆಯ ಅಂಕೋಲ ದಲ್ಲಿನ ಶಿರೂರು ಗುಡ್ಡ ಕುಸಿತದ ನಂತರ ನಾಪತ್ತೆಯಾಗುವವರ ಹೆಸರು ಕೇಳಿ ಬರುತ್ತಿದೆ. ಕಳೆದ ಐದು ದಿನಗಳಿಂದ ಮಗ ಮನೆಗೆ ಬಂದಿಲ್ಲ ಎಂದು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಲೋಕೇಶ್ ತಾಯಿ ಮಾದೇವಿ ಅವರು ದೂರು ದಾಖಲಿಸಿದ್ದಾರೆ. ಲೋಕೇಶ್ ನಾಯ್ಕ್ ನಾಪತ್ತೆ ಇನ್ನಷ್ಟು ಆತಂಕಕ್ಕೆ ಎಡೆ ಮಾಡಿ ಕೊಟ್ಟಿದೆ.

ಶಿರೂರು ಗುಡ್ಡ ಕುಸಿತ; ದಿನೇ ದಿನೆ ಹೆಚ್ಚುತ್ತಿದೆ ನಾಪತ್ತೆಯಾದವರ ಸಂಖ್ಯೆ
ಶಿರೂರು ಗುಡ್ಡ ಕುಸಿತ
ವಿನಾಯಕ ಬಡಿಗೇರ್​
| Edited By: |

Updated on: Jul 21, 2024 | 10:35 AM

Share

ಕಾರವಾರ, ಜುಲೈ.21: ಅಂಕೋಲಾ(Ankola) ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತದ ನಂತರ ದಿನದಿಂದ ದಿನಕ್ಕೆ ನಾಪತ್ತೆಯಾದವರ (Missing) ಹೆಸರು ಹೊರಬರುತ್ತಿದೆ. ಈಗಾಗಲೇ 7 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ನಾಲ್ವರಿಗಾಗಿ ಶೋಧ ನಡೆಯುತ್ತಿದೆ. ಇದೀಗ ಗೋಕರ್ಣ ಬಳಿಯ ಗಂಗೆಕೊಳ್ಳದ ಯುವಕ ಲೋಕೇಶ್​ ಎಂಬುವವರು ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ. ನಾಪತ್ತೆ ಆದ ಮಗನನ್ನು ಹುಡುಕಿಕೊಡುವಂತೆ ಲೋಕೇಶ್ ತಾಯಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಕಳೆದ ಐದು ದಿನಗಳಿಂದ ಮಗ ಮನೆಗೆ ಬಂದಿಲ್ಲ ಎಂದು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಲೋಕೇಶ್ ತಾಯಿ ಮಾದೇವಿ ಅವರು ದೂರು ದಾಖಲಿಸಿದ್ದಾರೆ. ಗುಡ್ಡ ಕುಸಿತದ ದಿನ ಆ ಹೋಟೆಲ್​​ನಲ್ಲೆ ಲೋಕೆಶ್ ಇದ್ದ ಎಂಬ ಮಾಹಿತಿ ಸಿಕ್ಕಿದೆ. ಅದೇ ಹೋಟೆಲ್​ನಲ್ಲಿ ಇದ್ದಿದನ್ನು ಕೆ.ಎಸ್.ಆರ್.ಟಿ.ಸಿ ಚಾಲಕ ಕೂಡ ನೋಡಿದ್ದ. ಬಸ್ ಪಾಸ್ ಆಗಿ ಕೆಲವೇ ನಿಮಿಷಗಳಲ್ಲಿ ಗುಡ್ಡ ಕುಸಿತ ದುರಂತ ಸಂಭವಿಸಿದೆ. ಲೋಕೇಶ್ ನಾಯ್ಕ್ ನಾಪತ್ತೆ ಇನ್ನಷ್ಟು ಆತಂಕಕ್ಕೆ ಎಡೆ ಮಾಡಿ ಕೊಟ್ಟಿದೆ.

ಗೋವಾದಲ್ಲಿ ಬೋಟ್ ರಿಪೇರಿ ಕೆಲಸ ಮಾಡುತ್ತಿದ್ದ ಲೊಕೇಶ್, ಜ್ವರ ಬಂದಿದಕ್ಕೆ ರಜೆ ಪಡೆದು ಮನೆ ಕಡೆ ಬಂದಿದ್ದ. ಗುಡ್ಡ ಕುಸಿತದ ದಿನ ಶೃಂಗೇರಿಗೆ ಹೋಗಿ ಬರುವುದಾಗಿ ತೆರಳಿದ್ದ. ಅತ್ತ ಶೃಂಗೇರಿಗೂ ಹೋಗಿಲ್ಲ, ಗೋವಾ ಕೆಲಸಕ್ಕೂ ಹೋಗಿಲ್ಲ. ಕಳೆದ ಐದು ದಿನಗಳಿಂದ ಮನೆಗೆ ಬರದ ಹಿನ್ನೆಲೆ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಗುಡ್ಡ ಕುಸಿತ: ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಉತ್ತರಕನ್ನಡ ಜಿಲ್ಲೆಯ ಅಂಕೋಲ ದಲ್ಲಿನ ಶಿರೂರು ಗುಡ್ಡ ಕುಸಿತದ ಭೀಕರತೆಯ ಬಗ್ಗೆ ತಿಳಿದ ಮಾನ್ಯ ಮಿಲಿಟರಿ ಪಡೆ ಪ್ರಧಾನ ಮಂತ್ರಿಗಳ ಕಾರ್ಯಾಲಯವು , ಈ ಪ್ರದೇಶದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲು ಮಿಲಿಟರಿ ಪಡೆಯನ್ನು ಕಳುಹಿಸಿದ್ದು ಈ ಪಡೆಯು ಕೆಲವೇ ನಿಮಿಷಗಳಲ್ಲಿ ಶಿರೂರಿಗೆ ತಲುಪಲಿದೆ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?