AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರೂರು ಗುಡ್ಡ ಕುಸಿತ; ದಿನೇ ದಿನೆ ಹೆಚ್ಚುತ್ತಿದೆ ನಾಪತ್ತೆಯಾದವರ ಸಂಖ್ಯೆ

ಉತ್ತರಕನ್ನಡ ಜಿಲ್ಲೆಯ ಅಂಕೋಲ ದಲ್ಲಿನ ಶಿರೂರು ಗುಡ್ಡ ಕುಸಿತದ ನಂತರ ನಾಪತ್ತೆಯಾಗುವವರ ಹೆಸರು ಕೇಳಿ ಬರುತ್ತಿದೆ. ಕಳೆದ ಐದು ದಿನಗಳಿಂದ ಮಗ ಮನೆಗೆ ಬಂದಿಲ್ಲ ಎಂದು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಲೋಕೇಶ್ ತಾಯಿ ಮಾದೇವಿ ಅವರು ದೂರು ದಾಖಲಿಸಿದ್ದಾರೆ. ಲೋಕೇಶ್ ನಾಯ್ಕ್ ನಾಪತ್ತೆ ಇನ್ನಷ್ಟು ಆತಂಕಕ್ಕೆ ಎಡೆ ಮಾಡಿ ಕೊಟ್ಟಿದೆ.

ಶಿರೂರು ಗುಡ್ಡ ಕುಸಿತ; ದಿನೇ ದಿನೆ ಹೆಚ್ಚುತ್ತಿದೆ ನಾಪತ್ತೆಯಾದವರ ಸಂಖ್ಯೆ
ಶಿರೂರು ಗುಡ್ಡ ಕುಸಿತ
ವಿನಾಯಕ ಬಡಿಗೇರ್​
| Edited By: ಆಯೇಷಾ ಬಾನು|

Updated on: Jul 21, 2024 | 10:35 AM

Share

ಕಾರವಾರ, ಜುಲೈ.21: ಅಂಕೋಲಾ(Ankola) ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತದ ನಂತರ ದಿನದಿಂದ ದಿನಕ್ಕೆ ನಾಪತ್ತೆಯಾದವರ (Missing) ಹೆಸರು ಹೊರಬರುತ್ತಿದೆ. ಈಗಾಗಲೇ 7 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ನಾಲ್ವರಿಗಾಗಿ ಶೋಧ ನಡೆಯುತ್ತಿದೆ. ಇದೀಗ ಗೋಕರ್ಣ ಬಳಿಯ ಗಂಗೆಕೊಳ್ಳದ ಯುವಕ ಲೋಕೇಶ್​ ಎಂಬುವವರು ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ. ನಾಪತ್ತೆ ಆದ ಮಗನನ್ನು ಹುಡುಕಿಕೊಡುವಂತೆ ಲೋಕೇಶ್ ತಾಯಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಕಳೆದ ಐದು ದಿನಗಳಿಂದ ಮಗ ಮನೆಗೆ ಬಂದಿಲ್ಲ ಎಂದು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಲೋಕೇಶ್ ತಾಯಿ ಮಾದೇವಿ ಅವರು ದೂರು ದಾಖಲಿಸಿದ್ದಾರೆ. ಗುಡ್ಡ ಕುಸಿತದ ದಿನ ಆ ಹೋಟೆಲ್​​ನಲ್ಲೆ ಲೋಕೆಶ್ ಇದ್ದ ಎಂಬ ಮಾಹಿತಿ ಸಿಕ್ಕಿದೆ. ಅದೇ ಹೋಟೆಲ್​ನಲ್ಲಿ ಇದ್ದಿದನ್ನು ಕೆ.ಎಸ್.ಆರ್.ಟಿ.ಸಿ ಚಾಲಕ ಕೂಡ ನೋಡಿದ್ದ. ಬಸ್ ಪಾಸ್ ಆಗಿ ಕೆಲವೇ ನಿಮಿಷಗಳಲ್ಲಿ ಗುಡ್ಡ ಕುಸಿತ ದುರಂತ ಸಂಭವಿಸಿದೆ. ಲೋಕೇಶ್ ನಾಯ್ಕ್ ನಾಪತ್ತೆ ಇನ್ನಷ್ಟು ಆತಂಕಕ್ಕೆ ಎಡೆ ಮಾಡಿ ಕೊಟ್ಟಿದೆ.

ಗೋವಾದಲ್ಲಿ ಬೋಟ್ ರಿಪೇರಿ ಕೆಲಸ ಮಾಡುತ್ತಿದ್ದ ಲೊಕೇಶ್, ಜ್ವರ ಬಂದಿದಕ್ಕೆ ರಜೆ ಪಡೆದು ಮನೆ ಕಡೆ ಬಂದಿದ್ದ. ಗುಡ್ಡ ಕುಸಿತದ ದಿನ ಶೃಂಗೇರಿಗೆ ಹೋಗಿ ಬರುವುದಾಗಿ ತೆರಳಿದ್ದ. ಅತ್ತ ಶೃಂಗೇರಿಗೂ ಹೋಗಿಲ್ಲ, ಗೋವಾ ಕೆಲಸಕ್ಕೂ ಹೋಗಿಲ್ಲ. ಕಳೆದ ಐದು ದಿನಗಳಿಂದ ಮನೆಗೆ ಬರದ ಹಿನ್ನೆಲೆ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಗುಡ್ಡ ಕುಸಿತ: ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಉತ್ತರಕನ್ನಡ ಜಿಲ್ಲೆಯ ಅಂಕೋಲ ದಲ್ಲಿನ ಶಿರೂರು ಗುಡ್ಡ ಕುಸಿತದ ಭೀಕರತೆಯ ಬಗ್ಗೆ ತಿಳಿದ ಮಾನ್ಯ ಮಿಲಿಟರಿ ಪಡೆ ಪ್ರಧಾನ ಮಂತ್ರಿಗಳ ಕಾರ್ಯಾಲಯವು , ಈ ಪ್ರದೇಶದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲು ಮಿಲಿಟರಿ ಪಡೆಯನ್ನು ಕಳುಹಿಸಿದ್ದು ಈ ಪಡೆಯು ಕೆಲವೇ ನಿಮಿಷಗಳಲ್ಲಿ ಶಿರೂರಿಗೆ ತಲುಪಲಿದೆ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Vinayak Badiger
Vinayak Badiger
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ