AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರೂರು ಗುಡ್ಡ ಕುಸಿತ; ದಿನೇ ದಿನೆ ಹೆಚ್ಚುತ್ತಿದೆ ನಾಪತ್ತೆಯಾದವರ ಸಂಖ್ಯೆ

ಉತ್ತರಕನ್ನಡ ಜಿಲ್ಲೆಯ ಅಂಕೋಲ ದಲ್ಲಿನ ಶಿರೂರು ಗುಡ್ಡ ಕುಸಿತದ ನಂತರ ನಾಪತ್ತೆಯಾಗುವವರ ಹೆಸರು ಕೇಳಿ ಬರುತ್ತಿದೆ. ಕಳೆದ ಐದು ದಿನಗಳಿಂದ ಮಗ ಮನೆಗೆ ಬಂದಿಲ್ಲ ಎಂದು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಲೋಕೇಶ್ ತಾಯಿ ಮಾದೇವಿ ಅವರು ದೂರು ದಾಖಲಿಸಿದ್ದಾರೆ. ಲೋಕೇಶ್ ನಾಯ್ಕ್ ನಾಪತ್ತೆ ಇನ್ನಷ್ಟು ಆತಂಕಕ್ಕೆ ಎಡೆ ಮಾಡಿ ಕೊಟ್ಟಿದೆ.

ಶಿರೂರು ಗುಡ್ಡ ಕುಸಿತ; ದಿನೇ ದಿನೆ ಹೆಚ್ಚುತ್ತಿದೆ ನಾಪತ್ತೆಯಾದವರ ಸಂಖ್ಯೆ
ಶಿರೂರು ಗುಡ್ಡ ಕುಸಿತ
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಆಯೇಷಾ ಬಾನು|

Updated on: Jul 21, 2024 | 10:35 AM

Share

ಕಾರವಾರ, ಜುಲೈ.21: ಅಂಕೋಲಾ(Ankola) ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತದ ನಂತರ ದಿನದಿಂದ ದಿನಕ್ಕೆ ನಾಪತ್ತೆಯಾದವರ (Missing) ಹೆಸರು ಹೊರಬರುತ್ತಿದೆ. ಈಗಾಗಲೇ 7 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ನಾಲ್ವರಿಗಾಗಿ ಶೋಧ ನಡೆಯುತ್ತಿದೆ. ಇದೀಗ ಗೋಕರ್ಣ ಬಳಿಯ ಗಂಗೆಕೊಳ್ಳದ ಯುವಕ ಲೋಕೇಶ್​ ಎಂಬುವವರು ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ. ನಾಪತ್ತೆ ಆದ ಮಗನನ್ನು ಹುಡುಕಿಕೊಡುವಂತೆ ಲೋಕೇಶ್ ತಾಯಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಕಳೆದ ಐದು ದಿನಗಳಿಂದ ಮಗ ಮನೆಗೆ ಬಂದಿಲ್ಲ ಎಂದು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಲೋಕೇಶ್ ತಾಯಿ ಮಾದೇವಿ ಅವರು ದೂರು ದಾಖಲಿಸಿದ್ದಾರೆ. ಗುಡ್ಡ ಕುಸಿತದ ದಿನ ಆ ಹೋಟೆಲ್​​ನಲ್ಲೆ ಲೋಕೆಶ್ ಇದ್ದ ಎಂಬ ಮಾಹಿತಿ ಸಿಕ್ಕಿದೆ. ಅದೇ ಹೋಟೆಲ್​ನಲ್ಲಿ ಇದ್ದಿದನ್ನು ಕೆ.ಎಸ್.ಆರ್.ಟಿ.ಸಿ ಚಾಲಕ ಕೂಡ ನೋಡಿದ್ದ. ಬಸ್ ಪಾಸ್ ಆಗಿ ಕೆಲವೇ ನಿಮಿಷಗಳಲ್ಲಿ ಗುಡ್ಡ ಕುಸಿತ ದುರಂತ ಸಂಭವಿಸಿದೆ. ಲೋಕೇಶ್ ನಾಯ್ಕ್ ನಾಪತ್ತೆ ಇನ್ನಷ್ಟು ಆತಂಕಕ್ಕೆ ಎಡೆ ಮಾಡಿ ಕೊಟ್ಟಿದೆ.

ಗೋವಾದಲ್ಲಿ ಬೋಟ್ ರಿಪೇರಿ ಕೆಲಸ ಮಾಡುತ್ತಿದ್ದ ಲೊಕೇಶ್, ಜ್ವರ ಬಂದಿದಕ್ಕೆ ರಜೆ ಪಡೆದು ಮನೆ ಕಡೆ ಬಂದಿದ್ದ. ಗುಡ್ಡ ಕುಸಿತದ ದಿನ ಶೃಂಗೇರಿಗೆ ಹೋಗಿ ಬರುವುದಾಗಿ ತೆರಳಿದ್ದ. ಅತ್ತ ಶೃಂಗೇರಿಗೂ ಹೋಗಿಲ್ಲ, ಗೋವಾ ಕೆಲಸಕ್ಕೂ ಹೋಗಿಲ್ಲ. ಕಳೆದ ಐದು ದಿನಗಳಿಂದ ಮನೆಗೆ ಬರದ ಹಿನ್ನೆಲೆ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಗುಡ್ಡ ಕುಸಿತ: ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಉತ್ತರಕನ್ನಡ ಜಿಲ್ಲೆಯ ಅಂಕೋಲ ದಲ್ಲಿನ ಶಿರೂರು ಗುಡ್ಡ ಕುಸಿತದ ಭೀಕರತೆಯ ಬಗ್ಗೆ ತಿಳಿದ ಮಾನ್ಯ ಮಿಲಿಟರಿ ಪಡೆ ಪ್ರಧಾನ ಮಂತ್ರಿಗಳ ಕಾರ್ಯಾಲಯವು , ಈ ಪ್ರದೇಶದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲು ಮಿಲಿಟರಿ ಪಡೆಯನ್ನು ಕಳುಹಿಸಿದ್ದು ಈ ಪಡೆಯು ಕೆಲವೇ ನಿಮಿಷಗಳಲ್ಲಿ ಶಿರೂರಿಗೆ ತಲುಪಲಿದೆ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ