AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರೂರು ಗುಡ್ಡ ಕುಸಿತ; ದಿನೇ ದಿನೆ ಹೆಚ್ಚುತ್ತಿದೆ ನಾಪತ್ತೆಯಾದವರ ಸಂಖ್ಯೆ

ಉತ್ತರಕನ್ನಡ ಜಿಲ್ಲೆಯ ಅಂಕೋಲ ದಲ್ಲಿನ ಶಿರೂರು ಗುಡ್ಡ ಕುಸಿತದ ನಂತರ ನಾಪತ್ತೆಯಾಗುವವರ ಹೆಸರು ಕೇಳಿ ಬರುತ್ತಿದೆ. ಕಳೆದ ಐದು ದಿನಗಳಿಂದ ಮಗ ಮನೆಗೆ ಬಂದಿಲ್ಲ ಎಂದು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಲೋಕೇಶ್ ತಾಯಿ ಮಾದೇವಿ ಅವರು ದೂರು ದಾಖಲಿಸಿದ್ದಾರೆ. ಲೋಕೇಶ್ ನಾಯ್ಕ್ ನಾಪತ್ತೆ ಇನ್ನಷ್ಟು ಆತಂಕಕ್ಕೆ ಎಡೆ ಮಾಡಿ ಕೊಟ್ಟಿದೆ.

ಶಿರೂರು ಗುಡ್ಡ ಕುಸಿತ; ದಿನೇ ದಿನೆ ಹೆಚ್ಚುತ್ತಿದೆ ನಾಪತ್ತೆಯಾದವರ ಸಂಖ್ಯೆ
ಶಿರೂರು ಗುಡ್ಡ ಕುಸಿತ
ವಿನಾಯಕ ಬಡಿಗೇರ್​
| Edited By: ಆಯೇಷಾ ಬಾನು|

Updated on: Jul 21, 2024 | 10:35 AM

Share

ಕಾರವಾರ, ಜುಲೈ.21: ಅಂಕೋಲಾ(Ankola) ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತದ ನಂತರ ದಿನದಿಂದ ದಿನಕ್ಕೆ ನಾಪತ್ತೆಯಾದವರ (Missing) ಹೆಸರು ಹೊರಬರುತ್ತಿದೆ. ಈಗಾಗಲೇ 7 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ನಾಲ್ವರಿಗಾಗಿ ಶೋಧ ನಡೆಯುತ್ತಿದೆ. ಇದೀಗ ಗೋಕರ್ಣ ಬಳಿಯ ಗಂಗೆಕೊಳ್ಳದ ಯುವಕ ಲೋಕೇಶ್​ ಎಂಬುವವರು ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ. ನಾಪತ್ತೆ ಆದ ಮಗನನ್ನು ಹುಡುಕಿಕೊಡುವಂತೆ ಲೋಕೇಶ್ ತಾಯಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಕಳೆದ ಐದು ದಿನಗಳಿಂದ ಮಗ ಮನೆಗೆ ಬಂದಿಲ್ಲ ಎಂದು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಲೋಕೇಶ್ ತಾಯಿ ಮಾದೇವಿ ಅವರು ದೂರು ದಾಖಲಿಸಿದ್ದಾರೆ. ಗುಡ್ಡ ಕುಸಿತದ ದಿನ ಆ ಹೋಟೆಲ್​​ನಲ್ಲೆ ಲೋಕೆಶ್ ಇದ್ದ ಎಂಬ ಮಾಹಿತಿ ಸಿಕ್ಕಿದೆ. ಅದೇ ಹೋಟೆಲ್​ನಲ್ಲಿ ಇದ್ದಿದನ್ನು ಕೆ.ಎಸ್.ಆರ್.ಟಿ.ಸಿ ಚಾಲಕ ಕೂಡ ನೋಡಿದ್ದ. ಬಸ್ ಪಾಸ್ ಆಗಿ ಕೆಲವೇ ನಿಮಿಷಗಳಲ್ಲಿ ಗುಡ್ಡ ಕುಸಿತ ದುರಂತ ಸಂಭವಿಸಿದೆ. ಲೋಕೇಶ್ ನಾಯ್ಕ್ ನಾಪತ್ತೆ ಇನ್ನಷ್ಟು ಆತಂಕಕ್ಕೆ ಎಡೆ ಮಾಡಿ ಕೊಟ್ಟಿದೆ.

ಗೋವಾದಲ್ಲಿ ಬೋಟ್ ರಿಪೇರಿ ಕೆಲಸ ಮಾಡುತ್ತಿದ್ದ ಲೊಕೇಶ್, ಜ್ವರ ಬಂದಿದಕ್ಕೆ ರಜೆ ಪಡೆದು ಮನೆ ಕಡೆ ಬಂದಿದ್ದ. ಗುಡ್ಡ ಕುಸಿತದ ದಿನ ಶೃಂಗೇರಿಗೆ ಹೋಗಿ ಬರುವುದಾಗಿ ತೆರಳಿದ್ದ. ಅತ್ತ ಶೃಂಗೇರಿಗೂ ಹೋಗಿಲ್ಲ, ಗೋವಾ ಕೆಲಸಕ್ಕೂ ಹೋಗಿಲ್ಲ. ಕಳೆದ ಐದು ದಿನಗಳಿಂದ ಮನೆಗೆ ಬರದ ಹಿನ್ನೆಲೆ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಗುಡ್ಡ ಕುಸಿತ: ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಉತ್ತರಕನ್ನಡ ಜಿಲ್ಲೆಯ ಅಂಕೋಲ ದಲ್ಲಿನ ಶಿರೂರು ಗುಡ್ಡ ಕುಸಿತದ ಭೀಕರತೆಯ ಬಗ್ಗೆ ತಿಳಿದ ಮಾನ್ಯ ಮಿಲಿಟರಿ ಪಡೆ ಪ್ರಧಾನ ಮಂತ್ರಿಗಳ ಕಾರ್ಯಾಲಯವು , ಈ ಪ್ರದೇಶದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲು ಮಿಲಿಟರಿ ಪಡೆಯನ್ನು ಕಳುಹಿಸಿದ್ದು ಈ ಪಡೆಯು ಕೆಲವೇ ನಿಮಿಷಗಳಲ್ಲಿ ಶಿರೂರಿಗೆ ತಲುಪಲಿದೆ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ