ಶಿರೂರು ಗುಡ್ಡ ಕುಸಿತ: ನಾಪತ್ತೆಯಾದ ಮೂವರ ಮೃತ ದೇಹ ಪತ್ತೆಗೆ ‘ಪೊಕಲೇನ್’ಬಳಕೆ, ಏನಿದು ಯಂತ್ರ?

ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತ (Hill Collapse) ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಣ್ಣು ತೆರವು ಕಾರ್ಯಾಚರಣೆ ಮುಗಿದಿದೆ. ನದಿಯಲ್ಲಿ ಇನ್ನುಳಿದ ಮೃತ ದೇಹಗಳು ಇರುವ ಶಂಕೆ ವ್ಯಕ್ತವಾಗಿದ್ದು, ನಾಳೆ(ಜು.24)ಯಿಂದ ಗಂಗಾವಳಿ ನದಿಯಲ್ಲಿ ಪೊಕಲೇನ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಹೇಳಿದ್ದಾರೆ.

ಶಿರೂರು ಗುಡ್ಡ ಕುಸಿತ: ನಾಪತ್ತೆಯಾದ ಮೂವರ ಮೃತ ದೇಹ ಪತ್ತೆಗೆ ‘ಪೊಕಲೇನ್’ಬಳಕೆ, ಏನಿದು ಯಂತ್ರ?
ಶಿರೂರು ಗುಡ್ಡ ಕುಸಿತ: ನಾಪತ್ತೆಯಾದ ಮೂವರ ಮೃತ ದೇಹ ಪತ್ತೆಗೆ ‘ಪೊಕಲೇನ್’ಬಳಕೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Jul 23, 2024 | 9:32 PM

ಉತ್ತರ ಕನ್ನಡ, ಜು.23: ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತ (Hill Collapse) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಂಟು ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಇನ್ನುಳಿದಂತೆ ನಾಪತ್ತೆಯಾದ ಮೂವರ ಮೃತದೇಹ ಪತ್ತೆಗೆ ನಾಳೆ(ಜು.24)ಯಿಂದ ಗಂಗಾವಳಿ ನದಿಯಲ್ಲಿ ಪೊಕಲೇನ್ (poclain) ಮೂಲಕ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಹೇಳಿದ್ದಾರೆ.

ಇಂದು(ಮಂಗಳವಾರ) ಅಂಕೋಲಾದಲ್ಲಿ ಮಾತನಾಡಿದ ಅವರು, ಮಣ್ಣು ತೆರವು ಕಾರ್ಯಾಚರಣೆ ಇಂದು ಮುಗಿದಿದೆ. ಗುಡ್ಡದ ಪಕ್ಕ ಕೇರಳದ ಲಾರಿ ಸಿಕ್ಕಿಲ್ಲ. ನದಿ ಪಕ್ಕದಲ್ಲಿ ಲಾರಿ ಬಿದ್ದಿರುವ ಸಾಧ್ಯತೆಯಿದೆ. ನಾಳೆ ಗೋಕಾಕ್​ನಿಂದ ಪೋಕ್​ಲೇನ್ ವಾಹನ ಬರುತ್ತಿದೆ. ನದಿಯೊಳಗೆ ಮಣ್ಣು ತೆಗೆದು ಕಾರ್ಯಾಚರಣೆ ನಡೆಸಲಿದೆ. ನಾಳೆ ಬಹುತೇಕ ಕೇರಳದ ಲಾರಿ ಸಿಗುವ ಸಾಧ್ಯತೆಯಿದ್ದು,
ಕೇರಳದವರು ಕೇಸ್ ಮಾಡುವ ಬದಲು ನಮಗೆ ಸಹಕರಿಸಬೇಕು ಎಂದರು.

ಇದನ್ನೂ ಓದಿ:ಶಿರೂರು ಗುಡ್ಡ ಕುಸಿತ: ಸರ್ಕಾರದ ನಡೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಲಾರಿ ಚಾಲಕನ ಕುಟುಂಬ

ಏನಿದು ಪೊಕಲೇನ್ ಯಂತ್ರ?

ಈ ಪೊಕಲೇನ್ ವೆಹಿಕಲ್, ‘ನದಿಯ ಆಳದಲ್ಲಿರುವ ಮಣ್ಣನ್ನು ತೆರವು ಮಾಡುವ ಯಾಂತ್ರಿಕ ವಾಹನವಾಗಿದೆ. ನದಿಯಲ್ಲಿ ಇನ್ನುಳಿದ ಮೃತ ದೇಹಗಳು ಇರುವ ಶಂಕೆ ವ್ಯಕ್ತವಾಗಿದ್ದು, ಕರ್ನಾಟಕದ ಇರ್ವರು ಹಾಗೂ ಓರ್ವ ಕೇರಳ ಮೂಲದ ವ್ಯಕ್ತಿಯ  ಮೃತ ದೇಹಗಳನ್ನು ಪತ್ತೆ ಮಾಡಬೇಕಿರುವ ಹಿನ್ನಲೆ ಶಾಸಕ ಸತೀಶ್ ಸೈಲ್ ‘ಪೊಕಲೇನ್’ ವ್ಯವಸ್ಥೆ ಮಾಡಿದ್ದಾರೆ. ಇನ್ನು ಈ 60 ಅಡಿ ಉದ್ದವಾದ ಡೀಪ್ ಪೊಕಲೇನ್ ಗೋಕಾಕಲ್ಲಿತ್ತು. ರಾಷ್ಟ್ರೀಯ ಹೆದ್ದಾರಿಯ ಮೇಲಿನ ಮಣ್ಣನ್ನು ತೆರವು ಮಾಡಲಾಗಿದ್ದು, ದೊಡ್ಡ ವಾಹನ ಸಂಚಾರಕ್ಕೆ ಅನುವು ಮಾಡಲಾಗಿದೆ. ಹೀಗಾಗಿ  ಪೊಕಲೇನ್ ಮೂಲಕ ನಾಳೆಯಿಂದ ಕಾರ್ಯಚರಣೆ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
Follow Us