AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ರಾಷ್ಟ್ರೀಯ ಹೆದ್ದಾರಿಯೋ ಅಥವಾ ಕೆಸರು ಗದ್ದೆಯೋ? ಶಿರಸಿ-ಹಾವೇರಿ ರಸ್ತೆಯಲ್ಲಿ ನರಕಯಾತನೆ

ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿಯ ದಾರುಣ ಸ್ಥಿತಿ ಕರ್ನಾಟಕದ ಸಾರಿಗೆ ವ್ಯವಸ್ಥೆಯ ಅಸಮರ್ಥತೆಯನ್ನು ಎತ್ತಿ ತೋರಿಸಿದೆ. ಕೆಸರಿನಲ್ಲಿ ಸಿಲುಕಿದ ಕೆಎಸ್‌ಆರ್‌ಟಿಸಿ ಬಸ್ ದೃಶ್ಯ ವೈರಲ್ ಆಗಿದ್ದು, ರಸ್ತೆಯ ದುರಸ್ತಿ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಂಡ-ಗುಂಡಿಗಳಿಂದ ಕೂಡಿದ ಈ ರಸ್ತೆ ಅಪಘಾತಗಳಿಗೆ ಕಾರಣವಾಗುತ್ತಿದೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಜನ ಆಗ್ರಹಿಸಿದ್ದಾರೆ.

ಇದು ರಾಷ್ಟ್ರೀಯ ಹೆದ್ದಾರಿಯೋ ಅಥವಾ ಕೆಸರು ಗದ್ದೆಯೋ? ಶಿರಸಿ-ಹಾವೇರಿ ರಸ್ತೆಯಲ್ಲಿ ನರಕಯಾತನೆ
ಶಿರಸಿ-ಹಾವೇರಿ ರಸ್ತೆ
ಅಕ್ಷಯ್​ ಪಲ್ಲಮಜಲು​​
|

Updated on:Apr 28, 2026 | 8:27 PM

Share

ಶಿರಸಿ, ಏ.28: ಕರ್ನಾಟಕದ ಸರ್ಕಾರಿ ಸಾರಿಗೆ ವ್ಯವಸ್ಥೆ ಎಷ್ಟೊಂದು ಕೆಟ್ಟೋಗಿದೆ ಎಂದರೆ ಇದಕ್ಕೆ ಉತ್ತಮ ಉದಾಹರಣೆ ಇಲ್ಲಿದೆ ನೋಡಿ. ಸರ್ಕಾರಕ್ಕೆ ತೆರಿಗೆ ಪಾವತಿಸುವ ಸಾರ್ವಜನಿಕರಿಗೆ ಸಿಗುತ್ತಿರುವ ಪ್ರತಿಫಲ ಮಾತ್ರ ಶೂನ್ಯ ಎನ್ನುವುದಕ್ಕೆ ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿಯೇ ಸಾಕ್ಷಿ. ಈ ರಸ್ತೆಯ ಸ್ಥಿತಿ ಎಷ್ಟು ಭೀಕರವಾಗಿದೆಯೆಂದರೆ, ಇದು ಹೆದ್ದಾರಿಯೋ ಅಥವಾ ಆಫ್-ರೋಡ್ ರ‍್ಯಾಲಿ ನಡೆಯುವ ಕೆಸರು ಗದ್ದೆಯೋ ಎಂಬ ಅನುಮಾನ ಮೂಡುತ್ತಿದೆ.

ಇಲ್ಲಿ ವೈರಲ್ ಆಗಿರುವ ದೃಶ್ಯಗಳಲ್ಲಿ ಕೆಎಸ್‌ಆರ್‌ಟಿಸಿ (KSRTC) ಬಸ್‌ವೊಂದು ಕೆಸರಿನಲ್ಲಿ ಸಿಲುಕಿ ಮುಂದೆ ಸಾಗಲು ಹರಸಾಹಸ ಪಡುತ್ತಿರುವುದು ಕಂಡುಬಂದಿದೆ. ಬಲಿಷ್ಠವಾದ ಸರ್ಕಾರಿ ಬಸ್‌ಗಳೇ ಈ ರಸ್ತೆಯಲ್ಲಿ ಸಂಚರಿಸಲು ಅಸಹಾಯಕವಾಗಿರುವಾಗ, ದ್ವಿಚಕ್ರ ವಾಹನಗಳು ಮತ್ತು ಸಣ್ಣ ಕಾರುಗಳ ಪರಿಸ್ಥಿತಿ ಹೇಳತೀರದು. ತುರ್ತು ಚಿಕಿತ್ಸೆಗೆ ತೆರಳುವ ಆಂಬ್ಯುಲೆನ್ಸ್‌ಗಳೂ ಇಲ್ಲಿ ಗಂಟೆಗಟ್ಟಲೆ ಸಿಲುಕಿಕೊಳ್ಳುವ ಭೀತಿ ಎದುರಾಗಿದೆ. ಈ ಬಗ್ಗೆ ಪೋಸ್ಟ್​​ವೊಂದನ್ನು @KarnatakaPortfolio ತನ್ನ ಎಕ್ಸ್​​​ ಖಾತೆಯಲ್ಲಿ ಹಂಚಿಕೊಂಡಿದೆ.

ಇದನ್ನೂ ಓದಿ: ‘ಸೋಫಾ ಅಳತೆ ಮಾಡಿಕೊಡು ಬಾ’ ಎಂದು ಕರೆದು ಬರ್ಬರವಾಗಿ ಹತ್ಯೆ; ಬಾರ್ ಎದುರೇ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿದ ಆಟೋ ಚಾಲಕ!

ಇಲ್ಲಿದೆ ನೋಡಿ ವಿಡಿಯೋ:

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಈ ಮಾರ್ಗದ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ ಸಾರ್ವಜನಿಕರು ರಸ್ತೆ ತೆರಿಗೆಯನ್ನು ಸರಿಯಾದ ಸಮಯದಲ್ಲಿ ಪಾವತಿಸುತ್ತಿದ್ದರೂ, ಕನಿಷ್ಠ ಗುಣಮಟ್ಟದ ರಸ್ತೆಯನ್ನು ನೀಡಲು ಸರ್ಕಾರ ವಿಫಲವಾಗಿದೆ ಎಂದು ದೂರಿದ್ದಾರೆ. ಹೊಂಡ-ಗುಂಡಿಗಳು ಹಾಗೂ ಕೆಸರಿನಿಂದಾಗಿ ಈ ರಸ್ತೆಯು ಮೃತ್ಯುಪಂಜರವಾಗಿ ಮಾರ್ಪಟ್ಟಿದೆ ಎಂದು ಹಲವು ಜನ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಕೇವಲ ನೆಪಗಳನ್ನು ಹೇಳುವುದನ್ನು ಬಿಟ್ಟು ಕೂಡಲೇ ಈ ಹೆದ್ದಾರಿಯ ದುರಸ್ತಿಗೆ ಮುಂದಾಗಬೇಕಿದೆ. ಇಲ್ಲದಿದ್ದರೆ ದೊಡ್ಡ ಮಟ್ಟದ ಅಪಘಾತ ಸಂಭವಿಸುವ ಮುನ್ನವೇ ಎಚ್ಚೆತ್ತುಕೊಳ್ಳುವುದು ಒಳಿತು ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿನ

Published On - 8:26 pm, Tue, 28 April 26

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ