AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಟಾ- ಶಿರಸಿ ರಸ್ತೆ ಸಂಚಾರ ಡಿಸೆಂಬರ್ 2ರಿಂದ ಫೆಬ್ರವರಿ 25ರವರೆಗೆ ಬಂದ್

ಶಿರಸಿ ಮಾರ್ಗವಾಗಿ ಕುಮಟಾಗೆ ತೆರಳುವ ಪ್ರಯಾಣಿಕರೇ ಗಮನಿಸಿ. ಡಿಸೆಂಬರ್ 2ರಿಂದ ಫೆಬ್ರವರಿ 25ರವರೆಗೆ ಶಿರಸಿ- ಕುಮಟಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ (NH 766E) ಬಂದ್ ಮಾಡಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಪ್ರಕಟಣೆ ಹೊರಡಿಸಿದೆ.

ಕುಮಟಾ- ಶಿರಸಿ ರಸ್ತೆ ಸಂಚಾರ ಡಿಸೆಂಬರ್ 2ರಿಂದ ಫೆಬ್ರವರಿ 25ರವರೆಗೆ ಬಂದ್
ರಾಷ್ಟ್ರೀಯ ಹೆದ್ದಾರಿ
ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on:Nov 27, 2024 | 10:29 PM

Share

ಶಿರಸಿ: ಡಿಸೆಂಬರ್ 2ರಿಂದ ಫೆಬ್ರವರಿ 25ರವರೆಗೆ ರಾಷ್ಟ್ರೀಯ ಹೆದ್ದಾರಿ 766E ಬಂದ್ ಆಗಲಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಶಿರಸಿ ನಡುವಿನ NH 766E ಬಂದ್ ಆಗಲಿದೆ. ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಎಸ್​ಪಿ ಎಂ. ನಾರಾಯಣ ಪ್ರಕಟಣೆ ಹೊರಡಿಸಿದ್ದಾರೆ. ಹೀಗಾಗಿ, ಈ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಬೇರೆ ಮಾರ್ಗದಲ್ಲಿ ಸಂಚರಿಸುವುದು ಉತ್ತಮ.

ಉತ್ತರ ಕನ್ನಡ ಜಿಲ್ಲಾಧಿಕಾರಿಯಾದ ಲಕ್ಷ್ಮೀಪ್ರಿಯಾ ಅವರ ಸೂಚನೆ ಮೇರೆಗೆ ಎಸ್​ಪಿ ನಾರಾಯಣ ಈ ಕ್ರಮ ಕೈಗೊಂಡಿದ್ದಾರೆ. ಬದಲಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಸೂಚನೆ ನೀಡಿದೆ. ರಾಷ್ಟ್ರೀಯ ಹೆದ್ದಾರಿ 766Eನಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆಯನ್ನು ಬಂದ್ ಮಾಡಲಾಗುವುದು. ಶಿರಸಿ-ಕುಮಟಾ ಪ್ರಯಾಣಿಕರಿಗೆ ಸಿದ್ದಾಪುರ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು.

ಇದನ್ನೂ ಓದಿ: ಶಿರಸಿಯಲ್ಲಿ ಹಣ್ಣು ಮಾರುವ ಮೋಹಿನಿ ಗೌಡರನ್ನು ಭೇಟಿಯಾದ ಪ್ರಧಾನಿ ಮೋದಿ; ಈ ಮಹಿಳೆಯ ಸಾಧನೆ ಏನು?

ಹಾಗೇ, ಅಂಕೋಲಾ-ಶಿರಸಿ ಮೂಲಕ ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ 63ಯಲ್ಲಿ ಸಂಚರಿಸಬಹುದು. ಹಾಗೂ ರಾಜ್ಯ ಹೆದ್ದಾರಿ 93ರಲ್ಲಿ ಎಲ್ಲ ಮಾದರಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು. ಮಂಗಳೂರು-ಹೊನ್ನಾವರ-ಶಿರಸಿ ಮೂಲಕ ವಾಹನಗಳ ಸಂಚಾರಕ್ಕೆ ಅವಕಾಶವಿದೆ. ಸಿದ್ದಾಪುರ-ಮಾವಿನಗುಂಡಿ ಮಾರ್ಗವಾಗಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:28 pm, Wed, 27 November 24

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ