AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಸಿ ಮಾರಿಕಾಂಬಾ ದೇಗುಲದಲ್ಲಿ ಧಾರ್ಮಿಕ ಸೇವೆಗಳ ಶುಲ್ಕ ಹೆಚ್ಚಳ; ಆಕ್ಷೇಪಣೆಗೆ ಇದೆ ಅವಕಾಶ

ಹೊಸ ಸೇವಾ ಶುಲ್ಕಕ್ಕೆ ಆಕ್ಷೇಪಣೆಗಳಿದ್ದಲ್ಲಿ ಸೆಪ್ಟೆಂಬರ್ 5ರ ಒಳಗೆ ಸಲ್ಲಿಸಲು ಸಾರ್ವಜನಿಕರನ್ನು ಆಡಳಿತ ಮಂಡಳಿ ಕೋರಿದೆ.

ಶಿರಸಿ ಮಾರಿಕಾಂಬಾ ದೇಗುಲದಲ್ಲಿ ಧಾರ್ಮಿಕ ಸೇವೆಗಳ ಶುಲ್ಕ ಹೆಚ್ಚಳ; ಆಕ್ಷೇಪಣೆಗೆ ಇದೆ ಅವಕಾಶ
ಮಾರಿಕಾಂಬಾ ದೇವಸ್ಥಾನ,ಶಿರಸಿ
TV9 Web
| Edited By: |

Updated on: Sep 02, 2021 | 10:27 PM

Share

ಶಿರಸಿ: ಕರ್ನಾಟಕದ ಪ್ರಮುಖ ಶಕ್ತಿಪೀಠದಲ್ಲಿ ಒಂದೆನಿಸಿದ ಶಿರಸಿಯ ಮಾರಿಕಾಂಬಾ ದೇವಾಲಯದ ಧಾರ್ಮಿಕ ಸೇವೆಗಳ ಶುಲ್ಕವನ್ನು ಆಡಳಿತ ಮಂಡಳಿ ಹೆಚ್ಚಿಸಿದೆ. ಈ ಕುರಿತು ಸಭೆ ನಡೆಸಿದ ಆಡಳಿತ ಮಂಡಳಿ ಹೊಸ ಶುಲ್ಕದ ಪ್ರಕಟಣೆಯನ್ನು ದೇವಸ್ಥಾನದ ಸೂಚನಾ ಫಲಕಕ್ಕೆ ಅಳವಡಿಸಿದೆ. ಹೊಸ ಸೇವಾ ಶುಲ್ಕಕ್ಕೆ ಆಕ್ಷೇಪಣೆಗಳಿದ್ದಲ್ಲಿ ಸೆಪ್ಟೆಂಬರ್ 5ರ ಒಳಗೆ ಸಲ್ಲಿಸಲು ಸಾರ್ವಜನಿಕರನ್ನು ಆಡಳಿತ ಮಂಡಳಿ ಕೋರಿದೆ. ಬಹುತೇಕ ಎಲ್ಲ ಸೇವೆಗಳ ದರವನ್ನು ಪ್ರಸ್ತುತಕ್ಕಿಂತ ದುಪ್ಪಟ್ಟು ಹೆಚ್ಚಿಸಲಾಗಿದ್ದು, ದರ ಹೆಚ್ಚಳದ ಅಗತ್ಯವಿತ್ತೇ ಎಂಬ ಪ್ರಶ್ನೆ ಸಾರ್ವಜನಿಕ ಮತ್ತು ಭಕ್ತರ ವಲಯದಲ್ಲಿ ಕೇಳಿಬಂದಿದೆ.

ಹೊಸ ಸೇವಾಶುಲ್ಕದ ವಿವರ ದೇವಸ್ಥಾನದಲ್ಲಿ ರುದ್ರಾಭಿಷೇಕ ಸೇವೆಗೆ ₹ 10ರ ಬದಲು ₹100, ಮೃತ್ಯುಂಜಯ ಶಾಂತಿಗೆ ₹1001 ಬದಲು ₹3500, ಸತ್ಯನಾರಾಯಣ ಕಥೆಗೆ ₹325ರ ಬದಲು ₹1500ಕ್ಕೆ, ನಿರಂತರ ಪಲ್ಲಕ್ಕಿ ಸೇವೆ ದರ ₹6,001ರಿಂದ ₹25,000ಕ್ಕೆ ಏರಿಕೆ ಮಾಡಲಾಗಿದೆ. ಕಾರ್ತಿಕ ದೀಪೋತ್ಸವದ ಒಂದು ದಿನದ ಸೇವೆ ಮೊತ್ತವನ್ನು ₹ 650 ರಿಂದ ₹ 5,000, ಶಾಶ್ವತ ಸೇವೆಗೆ ₹6001ರ ಬದಲು ₹10,001, ನಿರಂತರ ಸೇವೆ ಪಾರಾಯಣ ₹2001ರ ಬದಲಾಗಿ ₹5,000, ಶಾಶ್ವತ ಸೇವೆಗೆ ₹6001ರ ಬದಲು ₹10,000ಕ್ಕೆ ಏರಿಕೆ ಮಾಡಿ ಕರಡು ಪಟ್ಟಿಯಲ್ಲಿ ಪ್ರಕಟಣೆ ಮಾಡಿದೆ.

ಭಕ್ತರ ಅಭಿಪ್ರಾಯವೇನು? ದೇವಸ್ಥಾನವು ವ್ಯಾಪಾರ ಕೇಂದ್ರವಲ್ಲ, ಶ್ರದ್ಧಾ ಕೇಂದ್ರ. ಹೀಗೆ ಭಕ್ತರ ನಂಬಿಕೆ ಮೇಲೆ ಹಣ ಹೊಂದಿಸುವ ಕೆಲಸ ಸರಿಯಲ್ಲ ಎಂಬ ಅಭಿಪ್ರಾಯ ಇದೀಗ ಭಕ್ತರ ವಲಯದಲ್ಲಿ ಕೇಳಿಬಂದಿದೆ. ಸದ್ಯ ನಿಗದಿ ಮಾಡಿರುವ ದರಕ್ಕೆ ಭಕ್ತರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಅವರ ಅಭಿಪ್ರಾಯ ಪಡೆದು ಅಂತಿಮ ನಿರ್ಣಯ ತೆಗೆದುಕೊಳ್ಳಲು ಆಡಳಿತ ಮಂಡಳಿ ಮುಂದಾಗಿದೆ. ಹೊಸ ಸೇವಾ ಶುಲ್ಕಕ್ಕೆ ಆಕ್ಷೇಪಣೆಗಳಿದ್ದಲ್ಲಿ ಸೆಪ್ಟೆಂಬರ್ 5ರ ಒಳಗೆ ಸಲ್ಲಿಸಲು ಸಾರ್ವಜನಿಕರನ್ನು ಆಡಳಿತ ಮಂಡಳಿ ಕೋರಿದೆ.

ಇದನ್ನೂ ಓದಿ: 

ಪಶ್ಚಿಮ ಕರಾವಳಿಯಲ್ಲಿ ಮೊದಲಬಾರಿಗೆ ಗಿಡುಗ ಆಮೆ ಕಳೆಬರ ಪತ್ತೆ

ಪ್ರಧಾನಿ ಮೋದಿಗೆ ಶಿರಸಿಯ ಕುಶಲಕರ್ಮಿಗಳು ರಚಿಸಿದ ಶ್ರೀಗಂಧದ ಹಾರ ಉಡುಗೊರೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

(Sirsi Marikamba Temple Increased religious services fees)

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ