AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಸಿಯಲ್ಲಿ ಭೀಕರ ಅಪಘಾತ; ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ರಸ್ತೆ ಕಾರ್ಮಿಕರ ಮೇಲೆ ಹರಿದ ಕಾರು

ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ರಸ್ತೆ ಕಾರ್ಮಿಕರ ಮೇಲೆ ಕಾರೊಂದು ಹರಿದ ಘಟನೆ ಜಿಲ್ಲೆಯ ಶಿರಸಿ-ಕುಮಟಾ(Sirsi-Kumta) ರಸ್ತೆಯಲ್ಲಿರುವ ಹಿಪ್ನಳ್ಳಿ ಕ್ರಾಸ್ ಬಳಿ ನಡೆದಿದೆ. ಗಾಯಗೊಂಡವರು ಹೈದರಾಬಾದ್ ಮೆಹಬೂಬ ನಗರದ ಕಾರ್ಮಿಕರು ಎಂದು ಗುರುತಿಸಲಾಗಿದ್ದು, ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಶಿರಸಿಯಲ್ಲಿ ಭೀಕರ ಅಪಘಾತ; ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ರಸ್ತೆ ಕಾರ್ಮಿಕರ ಮೇಲೆ ಹರಿದ ಕಾರು
ಶಿರಸಿ ಅಪಘಾತ
ಸೂರಜ್​, ಮಹಾವೀರ್​ ಉತ್ತರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 09, 2024 | 4:50 PM

Share

ಉತ್ತರ ಕನ್ನಡ, ಏ.09: ಜಿಲ್ಲೆಯ ಶಿರಸಿ-ಕುಮಟಾ(Sirsi-Kumta) ರಸ್ತೆಯಲ್ಲಿರುವ ಹಿಪ್ನಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ(Accident) ವಾಗಿದ್ದು, ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ರಸ್ತೆ ಕಾರ್ಮಿಕರ ಮೇಲೆ ಕಾರೊಂದು ಹರಿದಿದೆ. ಘಟನೆಯಲ್ಲಿ ಓರ್ವ ಮಗು ಸೇರಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಐವರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರು ಹೈದರಾಬಾದ್ ಮೆಹಬೂಬ ನಗರದ ಕಾರ್ಮಿಕರು ಎಂದು ಗುರುತಿಸಲಾಗಿದೆ. ಇನ್ನು ಗಾಯಾಳುಗಳನ್ನು ಶಿರಸಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕೆಕೆಆರ್​​​ಟಿಸಿ ಬಸ್​ ಹರಿದು ವ್ಯಕ್ತಿಯ ಕಾಲು ನಜ್ಜುಗುಜ್ಜು

ವಿಜಯನಗರ: ಜಿಲ್ಲೆಯ ಕೊಟ್ಟೂರು ಬಸ್ ನಿಲ್ದಾಣದಲ್ಲಿ ಕೆಕೆಆರ್​​​ಟಿಸಿ ಬಸ್​ ಹರಿದು ವ್ಯಕ್ತಿಯ ಕಾಲು ನಜ್ಜುಗುಜ್ಜಾಗಿದೆ. ಹರಪನಹಳ್ಳಿ ತಾಲೂಕಿನ ಆಲದಹಳ್ಳಿಯ ಓಂಕಾರಪ್ಪ(52) ಅವರ ಕಾಲು ಕಟ್​ ಆಗಿದೆ. ರೇಷನ್ ಖರೀದಿಸಲು ಕೊಟ್ಟೂರು ಪಟ್ಟಣಕ್ಕೆ ಆಗಮಿಸಿದ್ದರು. ಈ ವೇಳೆ ದುರ್ಘಟನೆ ನಡೆದಿದ್ದು, ಗಾಯಾಳುವಿಗೆ ಕೊಟ್ಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಓಂಕಾರಪ್ಪ ಅಣ್ಣನ ಮಗ ಅಶೋಕ್ ನೀಡಿದ ದೂರಿನ ಮೇರೆಗೆ ಬಸ್ ಚಾಲಕ ಚಂದ್ರಕಾಂತ್ ಎಂಬುವವರ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ:ಬೆಂಗಳೂರು: 2023ರಲ್ಲಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಪೈಕಿ ಪುರುಷರೇ ಅಧಿಕ

ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್​ನಲ್ಲಿದ್ದ ತಂದೆ, ಮಗ ದುರ್ಮರಣ

ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹುನೇಗಲ್ ಗ್ರಾಮದ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ. ತಂದೆ ಗಂಗಿರೆಡ್ಡಿ, ಮಗ ಆದರ್ಶ್​ ಮೃತರು. ಯುಗಾದಿ ಪ್ರಯುಕ್ತ ಬೆಂಗಳೂರಿನಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಚಿಕ್ಕಬಳ್ಳಾಪುರ ಡಿವೈಎಸ್​ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Tue, 9 April 24

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್