AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ಸಿಗುವವರೆಗೂ ಬಾವಿ ತೋಡುವೆ -ಅಂಗನವಾಡಿ ಮಕ್ಕಳ ದಣಿವು ತಣಿಸಲು ಮುಂದಾದ ಏಕಾಂಗಿ ಮಹಿಳೆ ಗೌರಿ

ಜನವರಿ 30 ನೇ ತಾರೀಕಿನಿಂದ ಗೌರಿ ನಾಯ್ಕ ಅವರು ಏಕಾಂಗಿ ಪ್ರಯತ್ನದಿಂದ ಇದೀಗ 15 ಅಡಿಗೂ ಹೆಚ್ಚು ಆಳ ಬಾವಿ ತೋಡಿದ್ದಾರೆ. ಎಲ್ಲಿಯವರೆಗೆ ಬಾವಿಯಲ್ಲಿ ಗಂಗೆ ಬರುವುದಿಲ್ಲವೂ ಅಲ್ಲಿಯವರೆಗೂ ಬಾವಿ ತೋಡುವ ಕೆಲಸ ಮಾಡಿ ಗಂಗೆ ತರಿಸುವ ಛಲದಲ್ಲಿದ್ದಾರೆ ಈ ಗೌರಿ.

ಸೂರಜ್​, ಮಹಾವೀರ್​ ಉತ್ತರೆ
| Edited By: ಸಾಧು ಶ್ರೀನಾಥ್​|

Updated on: Feb 08, 2024 | 6:02 PM

Share

ಆ ಮಹಿಳೆ (Sirsi woman) ಜಮೀನಿನಲ್ಲಿ ನೆಟ್ಟಿದ ಅಡಿಕೆ ಮರಕ್ಕೆ ನೀರು ಹಾಯಿಸಲು, ಏಕಾಂಗಿಯಾಗಿ ಬಾವಿ ತೊಡಿ ಅಡಿಕೆ ಮರಗಳನ್ನು ಉಳಿಸಿ, ಅನೇಕರು ನಿಬ್ಬೆರಗಿಸುವಂತೆ ಮಾಡಿದ್ದರು. ಸದ್ಯ ಶಿರಸಿ ನಗರದ ಅಂಗನವಾಡಿ ಕೇಂದ್ರದ ಮಕ್ಕಳ (anganwadi children) ಕುಡಿಯುವ ನೀರಿನ ಸಮಸ್ಯೆ (drinking water) ನೀಗಿಸಲು, ನಿಸ್ವಾರ್ಥದಿಂದ ಇನ್ನೊಂದು ಬಾವಿ ತೆಗೆಯತ್ತಿದ್ದಾಳೆ. ಅಷ್ಟಕ್ಕೂ ಆ ಮಹಿಳೆ ಯಾರು? ಬಾವಿ ಅಗಿಯೊದು ಹೇಗೆ ಎಂಬುದರ ವರದಿ ಇಲ್ಲಿದೆ ನೋಡಿ. ರಾಜ್ಯದಲ್ಲಿ ಈಗಾಗಲೇ ನೀರಿನ ಹಾಹಾಕರ ಶುರು ಆಗಿದೆ. ಈ ಮಧ್ಯೆ ಕುಡಿಯುವ ನೀರಿನ ಸಲುವಾಗಿ ಇಲ್ಲೊಬ್ಬ ಮಹಿಳೆ.. ಕೈಯಲ್ಲಿ ಗುದ್ದಲಿ ಹಾರೆ ಹಿಡಿದು ಎಕಾಂಗಿಯಾಗಿ ಬಾವಿ ತೋಡುತ್ತಿದ್ದಾಳೆ. ಹೌದು ಈ ದೃಶ್ಯ ಕಂಡು ಬಂದಿದ್ದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಗಣೇಶ ನಗರದ್ದು.

ಹೀಗೆ ಏಕಾಂಗಿಯಾಗಿ ಬಾವಿ ತೋಡುತ್ತಿರುವ ಮಹಿಳೆ ಗೌರಿ ನಾಯ್ಕ. ಗಣೇಶ ನಗರದ ಭಾಗದಲ್ಲಿ ಬೇಸಿಗೆ ಬಂತೆಂದರೇ ನೀರಿನ ಕೊರತೆಯಿಂದ ಸಮಸ್ಯೆ ಎದುರಾಗುತ್ತದೆ. ವಾರದಲ್ಲಿ ಎರಡು ದಿನ ಗ್ರಾಮಪಂಚಾಯ್ತಿ ಯಿಂದ ಬರುವ ನೀರು ಅಷ್ಟಕಷ್ಟೇ. ಇನ್ನು ನೀರು ಶುದ್ಧವಾಗಿರದ ಕಾರಣ ಅಂಗನವಾಡಿಯಲ್ಲಿ ಅಡುಗೆ ಮಾಡಲು ಹಾಗೂ ಮಕ್ಕಳಿಗೆ ಕುಡಿಯಲು ಹೊರಭಾಗದಿಂದ ಹೊತ್ತು ತರಬೇಕು. ಹೀಗಾಗಿ ಈ ಸಮಸ್ಯೆ ಅರಿತ ಗೌರಿ ನಾಯ್ಕ ಇದೀಗ ಅಂಗನವಾಡಿ ಆವರಣದಲ್ಲಿ ಏಕಾಂಗಿಯಾಗಿ ಬಾವಿ ತೋಡಲು ಪ್ರಾರಂಭಿಸಿದ್ದಾರೆ.

ಜನವರಿ 30 ನೇ ತಾರೀಕಿನಿಂದ ಗೌರಿನಾಯ್ಕ ಅವರು ಅಂಗನವಾಡಿಯ ಹಿಂಭಾಗದ ಜಾಗದಲ್ಲಿ ಯಾರ ಸಹಾಯವನ್ನೂ ಪಡೆಯದೇ ಬಾವಿ ತೋಡುತಿದ್ದಾರೆ. ಇವರ ಏಕಾಂಗಿ ಪ್ರಯತ್ನದಿಂದ ಇದೀಗ 15 ಅಡಿಗೂ ಹೆಚ್ಚು ಆಳ ಬಾವಿ ತೋಡಲಾಗಿದೆ. ಮಕ್ಕಳಿಗೆ, ಸ್ಥಳೀಯರಿಗೆ ಕುಡಿಯಲು ಶುದ್ಧ ನೀರು ಸಿಗಬೇಕು ಎಂಬ ಬಯಕೆ ಇವರದ್ದಾದರೇ ನೀರನ್ನು ಹಿತಮಿತವಾಗಿ ಬಳಸಿ ಎನ್ನುವ ಸಂದೇಶ ಸಹ ಇದರಲ್ಲಿ ಕೂಡಿದ್ದು ಎಲ್ಲಿಯವರೆಗೆ ಬಾವಿಯಲ್ಲಿ ಗಂಗೆ ಬರುವುದಿಲ್ಲವೂ ಅಲ್ಲಿಯವರೆಗೂ ಬಾವಿ ತೋಡುವ ಕೆಲಸ ಮಾಡಿ ಗಂಗೆ ತರಿಸುವ ಛಲದಲ್ಲಿದ್ದಾರೆ ಈ ಗೌರಿ.

55 ವರ್ಷದ ಆಸುಪಾಸಿನಲ್ಲಿ ಇರುವ ಈ ಮಹಿಳೆ ಈ ಹಿಂದೆ ಏಕಾಂಗಿಯಾಗಿ ಎರಡು ಬಾವಿಗಳನ್ನು ತೋಡಿ ಯಶಸ್ವಿಯಾಗಿದ್ದರು. ಹೀಗೆ ತಮ್ಮ ಜಮೀನಿನಲ್ಲಿ ತೋಡಿದ್ದ ಬಾವಿಯಲ್ಲಿ ಗಿಡಗಳಿಗೆ ನೀರುಣಿಸಲು ಬಳಸಿದ್ರೆ, ಉಳಿದ ನೀರು ಗ್ರಾಮದ ಜನರಿಗೆ ನೀಡುತ್ತಾರೆ. ಸದಾ ಸಮಾಜಕ್ಕೆ ಏನಾದರೂ ಮಾಡಬೇಕು ಎಂಬ ಹಂಬಲ ಹೊಂದಿದ ಈ ಮಹಿಳೆ ತಮ್ಮೂರಿನ ಮಕ್ಕಳ ನೀರಿನ ದಾಹ ನೀಗಿಸಲು ಪಣತೊಟ್ಟಿದ್ದಾರೆ.

ಸದ್ಯ ಪ್ರತಿ ದಿನ ತನ್ನೆಲ್ಲಾ ಕಾಯಕ ಬದಿಗೊತ್ತಿ ಮುಂಜಾನೆಯಿಂದ ಸಂಜೆಯವರೆಗೆ ಅಂಗನವಾಡಿ ಆವರಣದಲ್ಲಿ ಬಾವಿ ನಿರ್ಮಿಸುತಿದ್ದು ಈಕೆಯ ಭಗೀರಥ ಪ್ರಯತ್ನ ಯಶಸ್ಸು ಕಂಡು ಬಾವಿಯಲ್ಲಿ ಗಂಗೆ ಉತ್ಪತ್ತಿಯಾಗುವ ಮೂಲಕ ಇಲ್ಲಿನ ಮಕ್ಕಳಿಗೆ ನೀರಿನ ದಾಹ ತೀರುವಂತಾಗಲಿ ಎಂಬುದೇ ನಮ್ಮ ಆಶಯ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು