Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರೊಂದಿಗೆ ಬೆರೆತು ಕ್ರಿಕೆಟ್ ಆಡಿದ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ; ವಿಡಿಯೋ ವೈರಲ್

ಸದ್ಯ ಸ್ಪೀಕರ್​ ಕ್ರಿಕೆಟ್ ಆಡುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಶಿರಸಿ-ಸಿದ್ಧಾಪುರ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುತ್ತಿರುವ ಕಾಗೇರಿ, ಇಂದು ತಮ್ಮ ಕೆಲಸಗಳನ್ನು ಮುಗಿಸಿ ಬಿಡುವಾದ ವೇಳೆ ಜನರೊಂದಿಗೆ ಬೆರೆತು ಸ್ವಲ್ಪ ಸಮಯ ಕಾಲಕಳೆದಿದ್ದಾರೆ.

ಜನರೊಂದಿಗೆ ಬೆರೆತು ಕ್ರಿಕೆಟ್ ಆಡಿದ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ; ವಿಡಿಯೋ ವೈರಲ್
ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ
Follow us
TV9 Web
| Updated By: preethi shettigar

Updated on:Jan 18, 2022 | 6:58 PM

ಉತ್ತರ ಕನ್ನಡ: ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಜನರೊಂದಿಗೆ ಬೆರೆತು ಕ್ರಿಕೆಟ್ ಆಡಿದ್ದಾರೆ. ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಅವರು ಬಿಡುವಿನ ವೇಳೆ ತಮ್ಮ ಹುಟ್ಟೂರಾದ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕುಳವೆಯಲ್ಲಿ ಮಕ್ಕಳು ಮತ್ತು ಸ್ಥಳೀಯರೊಂದಿಗೆ ಸೇರಿ ಕ್ರಿಕೆಟ್ (Cricket) ಆಡಿದ್ದಾರೆ. ಸದ್ಯ ಸ್ಪೀಕರ್​ ಕ್ರಿಕೆಟ್ ಆಡುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ (Social media) ವೈರಲ್ ಆಗಿದೆ. ಶಿರಸಿ-ಸಿದ್ಧಾಪುರ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುತ್ತಿರುವ ಕಾಗೇರಿ, ಇಂದು ತಮ್ಮ ಕೆಲಸಗಳನ್ನು ಮುಗಿಸಿ ಬಿಡುವಾದ ವೇಳೆ ಜನರೊಂದಿಗೆ ಬೆರೆತು ಸ್ವಲ್ಪ ಸಮಯ ಕಾಲಕಳೆದಿದ್ದಾರೆ.

ಧಾರವಾಡ ಜಿಲ್ಲಾಡಳಿತದ ಜತೆ ಕೇಂದ್ರ ಸಚಿವ ಜೋಶಿ ಸಭೆ

ಕೊರೊನಾ 3ನೇ ಅಲೆ ನಿಯಂತ್ರಣಕ್ಕೆ ಧಾರವಾಡ ಜಿಲ್ಲಾಡಳಿತದ ಜತೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಸಭೆ ನಡೆಸಿದ್ದಾರೆ. ಹುಬ್ಬಳ್ಳಿಯ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ ಸಭೆ ನಡೆಸಿದ್ದು, ಸಭೆಯಲ್ಲಿ ಮಾಜಿ ಸಿಎಂ ಜಗದೀಶ್​ ಶೆಟ್ಟರ್, ಸಚಿವ ಮುನೇನಕೊಪ್ಪ, ಧಾರವಾಡ ಜಿಲ್ಲಾಧಿಕಾರಿ, ಡಿಹೆಚ್‌ಒ, ಕಿಮ್ಸ್ ಅಧೀಕ್ಷಕ, ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದಾರೆ. ಇನ್ನು ಪೊಲೀಸ್ ಆಯುಕ್ತ ಲಾಭೂರಾಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಕಾಂತ, ಹು-ಧಾ ಪಾಲಿಕೆ ಆಯುಕ್ತ ಗೋಪಾಲಕೃಷ್ಣ ಕೂಡ ಸಭೆಯಲ್ಲಿ ಭಾಗಿಯಾಗಿದ್ದಾರೆ.

ಬೆಂಗಳೂರು: ಸಚಿವಾಲಯ ಸೇವೆಯ ಅಧಿಕಾರಿಗಳಿಗೆ ಜನವರಿ 30ರವೆರೆಗೆ ಶೇ. 50ರಷ್ಟು ಹಾಜರಾತಿ ಅವಕಾಶ ವಿಸ್ತರಣೆ ಸಚಿವಾಲಯ ಸೇವೆಯ ಗ್ರೂಪ್ ಬಿ, ಸಿ, ಡಿ ವೃಂದದ ಅಧಿಕಾರಿ ಮತ್ತು ಸಿಬ್ಬಂದಿಗೆ ಜನವರಿ 30ರವರೆಗೆ ಶೇಕಡಾ 50ರಷ್ಟು ಹಾಜರಾತಿ ಅವಕಾಶ ವಿಸ್ತರಣೆ ಮಾಡಲಾಗಿದೆ. ಈ ಹಿಂದೆ ಕೂಡ ರಾಜ್ಯ ಸರ್ಕಾರ ಹೊಸ ಕಾರ್ಯಸೂಚಿಯನ್ನು ಬಿಡುಗಡೆ ಮಾಡಿತ್ತು. ಅದರಂತೆ ಸಚಿವಾಲಯದ ಅಧಿಕಾರಿಗಳು ಮುಂಚಿತವಾಗಿ ನಿಗದಿಪಡಿಸಲಾಗಿರುವ ಭೇಟಿಗೆ ಆಗಮಿಸುವ ಇಲಾಖೆಯ ಸಿಬ್ಬಂದಿಗಳಿಗೆ ಎರಡು ಡೋಸ್​ ಲಸಿಕೆಯಾಗಿರಬೇಕು ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿತ್ತು. ಇಂದು ಸಚಿವಾಲಯ ವೃಂದದ ಅಧಿಕಾರಿ ಮತ್ತು ಸಿಬ್ಬಂದಿಗೆ ಹಾಜರಾತಿ ವಿಸ್ತರಣೆಯ ಆದೇಶ ನೀಡಲಾಗಿದೆ.

ಇದನ್ನೂ ಓದಿ: ಜನಪ್ರತಿನಿಧಿಗಳೇ ಎಚ್ಚರವಿರಲಿ : ‘ಸಭಾಧ್ಯಕ್ಷರೂ ಸೇರಿದಂತೆ ಇಡೀ ಸದನ ರಾಜ್ಯದ ಜನರ ಕ್ಷಮೆ ಕೇಳಲಿ’ ವಿಮಲಾ ಕೆ. ಎಸ್.

Karnataka Assembly Session Highlights: ವಿಧಾನ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಚರ್ಚೆ: ಬಿಲ್​ ಕುರಿತ ಚರ್ಚೆಯನ್ನು ನಾಳೆಗೆ ಮುಂದೂಡಿದ ಸ್ಪೀಕರ್​

Published On - 6:56 pm, Tue, 18 January 22

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್