AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಟರಿ ಹೊಡೆಯುತ್ತಿದ್ದ ಸುಚಿತ್ರಾ ಜೀವನವನ್ನೇ ಬದಲಾಯಿಸಿದ್ದೇಗೆ ಕಮಲಾಕರ್​​ ಭಟ್​​ ಪರಿಚಯ? ಸತ್ಯ ಬಿಚ್ಚಿಟ್ಟ ಸ್ನೇಹಿತೆ

ಒಂದು ಕಾಲದಲ್ಲಿ 10 ರೂ. ಲಾಟರಿ ಹೊಡೆಯುತ್ತಿದ್ದ ಸುಚಿತ್ರಾ ಜೀವನ ಜ್ಯೋತಿಷಿ ಕಮಲಾಕರ ಭಟ್ ಪರಿಚಯದಿಂದ ಸಂಪೂರ್ಣ ಬದಲಾಗಿತ್ತು. ಹಣದ ಮೇಲಿನ ವ್ಯಾಮೋಹಕ್ಕೆ ಒಳಗಾಗಿದ್ದ ಈಕೆ ಪ್ರೀತಿಸಿ ಮದುವೆಯಾದವನಿಗೇ ಕೈಕೊಟ್ಟು ಬಂದಿದ್ದಳು. ಹೆತ್ತ ಮಕ್ಕಳ ಮೇಲೆಯೇ ದೌರ್ಜನ್ಯ ನಡೆಸುತ್ತಿದ್ದ ಸುಚಿತ್ರಾ, ಕಮಲಾಕರ್​​ ಭಟ್​​ನಿಂದ ಬೈಕ್​​ ಮತ್ತು ಕಾರುಗಳನ್ನು ಉಡುಗೊರೆಯಾಗಿ ಪಡೆದಿದ್ದಳು. ಆತನ ಆಶ್ರಮವನ್ನೂ ಈಕೆಯೇ ನೋಡಿಕೊಳ್ಳುತ್ತಿದ್ದಳು ಎಂಬ ವಿಚಾರವೀಗ ಬಯಲಾಗಿದೆ.

ಲಾಟರಿ ಹೊಡೆಯುತ್ತಿದ್ದ ಸುಚಿತ್ರಾ ಜೀವನವನ್ನೇ ಬದಲಾಯಿಸಿದ್ದೇಗೆ ಕಮಲಾಕರ್​​ ಭಟ್​​ ಪರಿಚಯ? ಸತ್ಯ ಬಿಚ್ಚಿಟ್ಟ ಸ್ನೇಹಿತೆ
ಕಮಲಾಕರ್​​ ಭಟ್​ ಮತ್ತು ಸುಚಿತ್ರಾ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Feb 10, 2026 | 6:29 PM

Share

ಕಾರವಾರ, ಫೆಬ್ರವರಿ 10: ಸಿದ್ದಾಪುರದ ವಸಂತ್​​ ನಾಯ್ಕ್​​ ಕೊಲೆ ಪ್ರಕರಣದಲ್ಲಿ ಜೈಲು ಸೇರಿರೋ ಸುಚಿತ್ರಾಳ ಕುರಿತ ಒಂದೊಂದೇ ಮಾಹಿತಿಯೀಗ ಬಯಲಾಗುತ್ತಿದೆ. ಜ್ಯೋತಿಷಿ ಕಮಲಾಕರ್​​ ಭಟ್​​ ಸೇರಿದಂತೆ ಸಿರಿವಂತರನ್ನು ಬುಟ್ಟಿಗೆ ಹಾಕಿಕೊಂಡು ಐಷಾರಾಮಿ ಜೀವನ ನಡೆಸುತ್ತಿದ್ದ ಇದೇ ಸುಚಿತ್ರಾ ಒಂದು ಕಾಲದಲ್ಲಿ 10 ರೂಪಾಯಿಗೂ ಲಾಟರಿ ಹೊಡೆಯುತ್ತಿದ್ದಳು. ಅಷ್ಟಕ್ಕೂ ಈಕೆ ಜ್ಯೋತಿಷಿ ಕಮಲಾಕರ್​​ ಭಟ್​​ಗೆ ಪರಿಚಯವಾಗಿದ್ದು ಹೇಗೆ ಎಂಬ ಮಾಹಿತಿಯೀಗ ಬಹಿರಂಗಗೊಂಡಿದೆ. ಸುಚಿತ್ರಾಳನ್ನು ಕಮಲಾಕರ ಭಟ್​ಗೆ ಪರಿಚಯಿಸಿದ್ದು ನಾನೇ ಎಂದು ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ಮೂಲದ ಸುಮಾ ಎಂಬವರು ಟಿವಿ9ಗೆ ತಿಳಿಸಿದ್ದಾರೆ.

ಕಮಲಾಕರ ಭಟ್ ಪರಿಚಯದ ಬಳಿಕ ಸುಚಿತ್ರಾ ಜೀವನವೇ ಬದಲು!

ಸಿದ್ದಾಪುರದಲ್ಲಿ ಕವಡೆ ಕಾಸಿಗೂ ಪರದಾಡುತ್ತಿದ್ದ ಸುಚಿತ್ರಾ ಕಮಲಾಕರ ಭಟ್ ಪರಿಚಯದ ನಂತರ ಹೈಫೈ ಆಗಿಬಿಟ್ಟಳು. ಒಮ್ಮೆ ಆಶ್ರಮಕ್ಕೆ ಹೋದಾಗ ನನ್ನನ್ನೇ ಯಾರೋ ಅನ್ನೋ ತರ ನೋಡಿದ್ಲು. ಕಮಲಾಕರ ಭಟ್​ನ ಆಶ್ರಮವನ್ನು ಮ್ಯಾನೇಜ್ ಮಾಡ್ತಿದ್ದ ಈಕೆ ಒಂದು ಹೋಮ ಕಾರ್ಯಕ್ರಮಕ್ಕೆ ಮದುವೆ ಹೆಣ್ಣಿನ ತರ ಬಂದಿದ್ಲು. ಹೊಸ ತಾಳಿ, ಕಾಲುಂಗುರ ಧರಿಸಿ ಕಮಲಾಕರ ಭಟ್ ಜೊತೆ ಹೋಮದಲ್ಲಿ ಭಾಗಿಯಾಗಿದ್ದಳು. ಹೀಗಾಗಿ ಸುಚಿತ್ರಾಳನ್ನು ಮದುವೆ ಆಗಿದ್ದೀರಾ ಎಂದು ಕಮಲಾಕರ ಭಟ್​ಗೆ ಕೇಳಿದ್ದೆ. ಧರ್ಮಸ್ಥಳದ ಅಣ್ಣಪ್ಪನ ಆಣೆಗೂ ಮದುವೆಯಾಗಿಲ್ಲವೆಂದು ಈ ವೇಳೆ ಅವರು ಹೇಳಿದ್ದರು. ಆರೋಗ್ಯ ಸರಿಯಿಲ್ಲ, ಅದೆಲ್ಲ ನಂಗ್ಯಾಕೆ ಎಂದು ನನಗೆ ತಿಳಿಸಿದ್ದರು. ನನ್ನನ್ನು ಮಗಳೇ ಎಂದು ಕರೆಯುತ್ತಿದ್ದ ಜ್ಯೋತಿಷಿ ಕಮಲಾಕರ ಭಟ್ ಮತ್ತು ಸುಚಿತ್ರಾಳ ಬಂಧನ ವಿಚಾರ ಕೇಳಿ ತನಗೆ ಶಾಕ್​​ ಆಗಿದೆ ಎಂದು ಸುಮಾ ಹೇಳಿದ್ದಾರೆ.

ಇದನ್ನೂ ಓದಿ: ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ ಬಹಿರಂಗ

ಹಣದ ದಾಹಕ್ಕೆ ಪ್ರೀತಿಸಿ ಮದುವೆ ಆಗಿದ್ದವನನ್ನೇ ತೊರೆದ ಸುಚಿತ್ರಾ

ಇನ್ನು ಐಷಾರಾಮಿ ಜೀವನದ ಕನಸು ಕಂಡಿದ್ದ ಸುಚಿತ್ರಾ ಅದನ್ನು ಪಡೆಯಲು ನಾನಾ ಸರ್ಕಸ್​​ ನಡೆಸಿದ್ದಳು. ಕಮಲಾಕರ್​​ ಭಟ್​​ ಮಾತ್ರವಲ್ಲದೆ ಕಲಬುರಗಿ ಜಿಲ್ಲೆಯ ಜಮೀನ್ದಾರನ ಜೊತೆ ಲವ್ ರಿಲೇಷನಲ್ಲಿದ್ದ ಈಕೆ ಆತನ ಹಣದಲ್ಲೇ ಆರ್ಕೆಸ್ಟ್ರಾ ಕೂಡ ನಡೆಸುತ್ತಿದ್ದಳು. ಸಾಲದ್ದಕ್ಕೆ ಆತನ ಹಣವನ್ನು ಸಿದ್ದಾಪುರದಲ್ಲಿ ಬಡ್ಡಿಗೆ ಬಿಡುತ್ತಿದ್ದಳು. ಬಳಿಕ ಕಮಲಾಕರ್​​ ಭಟ್​​ನಿಂದಲೂ ಸುಲಿಗೆಗೆ ಇಳಿದಿದ್ದ ಸುಚಿತ್ರಾ ಕಾರು, ಬೈಕ್​​ಗಳನ್ನ ಉಡುಗರೆಯಾಗಿ ಪಡೆದಿದ್ದಳು. ಈಕೆಗಾಗಿ ಜ್ಯೋತಿಷಿ ಜಮೀನು ಕೂಡ ಖರೀದಿಸಿದ್ದ ಎಂಬ ಸುದ್ದಿಯೂ ಇದೆ. ಹಣದ ಆಸೆಗೆ ಪ್ರೀತಿಸಿ ಮದುವೆಯಾಗಿದ್ದವನನ್ನೇ ತೊರೆದು ಹೋಗಿದ್ದ ಈಕೆ, ಹೆತ್ತ ಮಕ್ಕಳಿಗೂ ಹಿಂಸೆ ಕೊಡುತ್ತಿದ್ದಳು ಎಂಬ ವಿಚಾರವೀಗ ಬಯಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್
ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ