AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಗೆ ಮನೆಗೆ ಕಳಿಸಬೇಕು ಎಂದು ಆಸ್ಪತ್ರೆಯಲ್ಲಿ ಉಪವಾಸ ಕುಳಿತ ಸುಕ್ರಿ ಬೊಮ್ಮಗೌಡ; ಆಕ್ಸಿಜನ್ ಸಹಿತ ಮನೆಗೆ ಶಿಫ್ಟ್

ಸುಕ್ರಿ ಬೊಮ್ಮಗೌಡ ಕಳೆದ ಒಂದು ವಾರದಿಂದ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಶ್ವಾಸಕೋಶ, ಹೃದಯ ಸಂಬಂಧಿ ಕಾಯಿಲೆಯಿಂದ ಸುಕ್ರಜ್ಜಿ ಬಳಲಿದ್ದರು ಎಂದು ಮಾಹಿತಿ ಲಭ್ಯವಾಗಿದೆ.

ದೀಪಾವಳಿಗೆ ಮನೆಗೆ ಕಳಿಸಬೇಕು ಎಂದು ಆಸ್ಪತ್ರೆಯಲ್ಲಿ ಉಪವಾಸ ಕುಳಿತ ಸುಕ್ರಿ ಬೊಮ್ಮಗೌಡ; ಆಕ್ಸಿಜನ್ ಸಹಿತ ಮನೆಗೆ ಶಿಫ್ಟ್
ಸುಕ್ರಿ ಬೊಮ್ಮಗೌಡ
TV9 Web
| Edited By: |

Updated on: Nov 04, 2021 | 9:48 PM

Share

ಕಾರವಾರ: ದೀಪಾವಳಿ ಹಬ್ಬಕ್ಕೆ ಮನೆಗೆ ಕಳಿಸಬೇಕು ಎಂದು ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಉಪವಾಸ ಕುಳಿತ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಹಬ್ಬಕ್ಕೆ ಮನೆಗೆ ಕಳಿಸಬೇಕು ಎಂದು ಸುಕ್ರಜ್ಜಿ ಉಪವಾಸ ಕುಳಿತಿದ್ದಾರೆ. ಸುಕ್ರಿ ಬೊಮ್ಮಗೌಡ ಹಠದಿಂದ ವೈದ್ಯರು ಕಕ್ಕಾಬಿಕ್ಕಿಯಾಗಿದ್ದಾರೆ. ಸುಕ್ರಿ ಬೊಮ್ಮಗೌಡ ಉಪವಾಸ ಹಿನ್ನೆಲೆಯಲ್ಲಿ ಆಸ್ಪತ್ರೆಯ ವೈದ್ಯರು ಅವರನ್ನು ಮನೆಗೆ ಕರೆದೊಯ್ದಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿನ ಜಿಲ್ಲಾಸ್ಪತ್ರೆಯಿಂದ ಮನೆಗೆ ಶಿಫ್ಟ್‌ ಮಾಡಲಾಗಿದೆ. ಆಕ್ಸಿಜನ್ ಸಮೇತ ಅಂಕೋಲದ ಬಡಿಗೇರಿ ನಿವಾಸಕ್ಕೆ ಶಿಫ್ಟ್‌ ಮಾಡಲಾಗಿದೆ. ಸುಕ್ರಿ ಬೊಮ್ಮಗೌಡ ಕಳೆದ ಒಂದು ವಾರದಿಂದ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಶ್ವಾಸಕೋಶ, ಹೃದಯ ಸಂಬಂಧಿ ಕಾಯಿಲೆಯಿಂದ ಸುಕ್ರಜ್ಜಿ ಬಳಲಿದ್ದರು ಎಂದು ಮಾಹಿತಿ ಲಭ್ಯವಾಗಿದೆ.

ಸುಕ್ರಿ ಬೊಮ್ಮಗೌಡ ಯಾರು? ಸುಕ್ರಿ ಬೊಮ್ಮಗೌಡ ಉತ್ತರ ಕನ್ನಡ ಜಿಲ್ಲೆಯ ಬಡಿಗೇರಿ ಎಂಬಲ್ಲಿನವರು. ಅವರು ಬುಡಕಟ್ಟು ಸಮುದಾಯವಾದ ಹಾಲಕ್ಕಿ ಒಕ್ಕಲಿಗ ಪಂಗಡಕ್ಕೆ ಸೇರಿದವರು. ಸಾಂಪ್ರದಾಯಿಕ ಬುಡಕಟ್ಟು ಸಂಗೀತ ಕ್ಷೇತ್ರದಲ್ಲಿನ ಅವರ ಕೆಲಸಗಳಿಗೆ ಪದ್ಮಶ್ರೀ ಸಹಿತ ಹಲವು ಪ್ರಶಸ್ತಿ, ಪುರಸ್ಕಾರಗಳು ಅವರಿಗೆ ಲಭಿಸಿದೆ. ಅವರು ತಮ್ಮ ಸಮುದಾಯದ ಇತರರಿಗೆ ಸಾಂಪ್ರದಾಯಿಕ ಹಾಡುಗಳನ್ನು ಕಲಿಸಿ ಕೊಡುತ್ತಾರೆ. ಆ ಮೂಲಕ ಅದರ ಉಳಿವಿಗೆ ಶ್ರಮಿಸಿದ್ದಾರೆ. ಸುಕ್ರಿ ಬೊಮ್ಮಗೌಡ ಅವರು ಸುಕ್ರಜ್ಜಿ ಎಂದು ಮತ್ತು ಹಾಲಕ್ಕಿ ಕೋಗಿಲೆ/ ಜನಪದ ಕೋಗಿಲೆ ಎಂದೂ ಕರೆಯಲ್ಪಟ್ಟಿದ್ದಾರೆ.

ಹಾಲಕ್ಕಿ ಸಮುದಾಯ ಹಾಲಕ್ಕಿ ಸಮುದಾಯದವರು ಉತ್ತರ ಕನ್ನಡದ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಕಾಣಸಿಗುತ್ತಾರೆ. ಈ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎನ್ನುವ ಕೂಗು ಬಹಳ ಹಿಂದಿನಿಂದಲೂ ಇದೆ. ಈ ಸಮುದಾಯವನ್ನು ಆಫ್ರಿಕಾದ ಮಸಾಯಿ ಸಮುದಾಯಕ್ಕೆ ಹೋಲಿಸಲಾಗುತ್ತದೆ.

ಇದನ್ನೂ ಓದಿ: ದೀಪಾವಳಿ ಹಬ್ಬದ ಶುಭಾಶಯ ಕೋರಿದ ಜೋ ಬೈಡೆನ್; ವೈಟ್​ಹೌಸ್​ನಲ್ಲಿ ದೀಪಾವಳಿ ಆಚರಣೆ

ಇದನ್ನೂ ಓದಿ: ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ಪದ್ಮಶ್ರೀ ಪ್ರಶಸ್ತಿ ಮರಳಿ ನೀಡುವೆ: ಸುಕ್ರಿ ಬೊಮ್ಮಗೌಡ

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್