AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಬಾಚಣಕಿಯಲ್ಲಿ ಅನುಮಾನಸ್ಪದ ವಸ್ತು ಸ್ಫೋಟ, ಕುರಿಗಾಹಿಗೆ ಗಂಭೀರ ಗಾಯ

blast In Uttara Kannada : ಕುರಿಗಾಹಿಯೋರ್ವನಿಗೆ ವಸ್ತುವೊಂದು ಕೈಯಲ್ಲೇ ಸ್ಫೋಟವಾಗಿದೆ. ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಬಾಚಣಕಿಯಲ್ಲಿ ಸಿಕ್ಕ ಹೊಳಪಿರುವ ವಸ್ತು ಸ್ಫೋಟಗೊಂಡಿದ್ದು, ಕುರಿಗಾಯಿ ಭರಮಪ್ಪ ಕೈಗೆ ಗಂಭೀರ ಗಾಯವಾಗಿದೆ. ಕಾಡುಪ್ರಾಣಿಗಳ ಬೇಟೆಗೆ ನಾಡಬಾಂಬ್ ಇಟ್ಟಿರಬಹದು ಎನ್ನುವ ಅನುಮಾಗಳು ವ್ಯಕ್ತವಾಗಿವೆ.

ಉತ್ತರ ಕನ್ನಡ: ಬಾಚಣಕಿಯಲ್ಲಿ ಅನುಮಾನಸ್ಪದ ವಸ್ತು ಸ್ಫೋಟ, ಕುರಿಗಾಹಿಗೆ ಗಂಭೀರ ಗಾಯ
TV9 Web
| Edited By: |

Updated on:Feb 09, 2024 | 6:33 PM

Share

ಕಾರವಾರ, (ಫೆಬ್ರವರಿ 09): ಉತ್ತರ ಕನ್ನಡ ಜಿಲ್ಲೆ (Uttara Kannada) ಮುಂಡಗೋಡ ತಾಲೂಕಿನ ಬಾಚಣಕಿಯಲ್ಲಿ ಅನುಮಾನಾಸ್ಪದ ವಸ್ತುವೊಂದು ಸ್ಫೋಟವಾಗಿದೆ. (suspicious Thing blast). ಪರಿಣಾಯಮ ಕುರಿ ಕಾಯುತ್ತಿದ್ದ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ಭರಮಪ್ಪ ಎನ್ನುವ ವ್ಯಕ್ತಿ ಕುರಿ ಮೇಯಿಸಲು ಬಾಚಣಕಿಯ ಕೆರೆ ಬಳಿ ಹೋಗಿದ್ದ. ಆ ವೇಳೆ ಹೊಳಪಿರುವ ಒಂದು ವಸ್ತುವೊಂದು ಕಂಡಿದ್ದು,. ಕೂಡಲೇ ಭರಮಪ್ಪ, ಆ ಹೊಳಪಿನ ವಸ್ತುವನ್ನು ಕೈಯಿಂದ ಹಿಚುಕಿದ್ದಾನೆ. ಆ ವೇಳೆ ಏಕಾಏಕಿ  ವಸ್ತು ಸ್ಫೋಟಗೊಂಡಿದೆ. ಇದರಿಂದ ಭರಮಪ್ಪನ ಎಡಗೈನ 2 ಬೆರಳುಗಳು ಕಟ್​ ಆಗಿವೆ. ಕಾಡುಪ್ರಾಣಿಗಳ ಬೇಟೆಗೆ ನಾಡಬಾಂಬ್ ಇಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಳಪಿನ ವಸ್ತುವನ್ನು ನೋಡಿದ ಭರಮಪ್ಪ, ಅದನ್ನು ಕೈನಲ್ಲಿ ಹಿಡಿದು ಹಿಚುಕಿದ್ದಾರೆ. ಕೂಡಲೇ ಅದು ಭಯಾನಕವಾಗಿ ಸ್ಪೋಟಗೊಂಡಿದೆ. ಸ್ಫೋಟದ ಪರಿಣಾಮ ಭರಮಪ್ಪ ಎಡಗೈನ ಎರಡು ಬೆರಳು ತುಂಡಾಗಿ ಬಿದ್ದಿವೆ. ಸದ್ಯ ಭರಮಪ್ಪನನ್ನು ಮುಂಡಗೋಡಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ದುಷ್ಕರ್ಮಿಗಳು ಕಾಡುಪ್ರಾಣಿಗಳ ಬೇಟೆಗೆ ನಾಡಬಾಂಬ್ ಇಟ್ಟಿರಬಹುದು ಎನ್ನುವ ಸಂಶಯವಾಗಿದ್ದು, ಈ ಬಗ್ಗೆ ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:30 pm, Fri, 9 February 24

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ