AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕಿಗೆ ಲವ್ ಲೆಟರ್ ಕೊಟ್ಟ ಆರನೇ ತರಗತಿ ವಿದ್ಯಾರ್ಥಿ- ಬಾಸುಂಡೆ ಬರುವಂತೆ ಬಾರಿಸಿದ ಶಿಕ್ಷಕಿ

ಕಲ್ಪನಾ ಹೆಗಡೆ ಎಂಬ ಶಿಕ್ಷಕಿ ವಿದ್ಯಾರ್ಥಿಗೆ ಥಳಿಸಿದ್ದು ಬಾಸುಂಡೆ ಬಂದಿದೆ. ಹೊನ್ನಾವರದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶಿಕ್ಷಕಿಯ ನಡೆಗೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆ ಶಿಕ್ಷಕಿ ಕಲ್ಪನಾ ಕ್ಷಮೆಯಾಚಿಸಿದ್ದಾರೆ.

ಬಾಲಕಿಗೆ ಲವ್ ಲೆಟರ್ ಕೊಟ್ಟ ಆರನೇ ತರಗತಿ ವಿದ್ಯಾರ್ಥಿ- ಬಾಸುಂಡೆ ಬರುವಂತೆ ಬಾರಿಸಿದ ಶಿಕ್ಷಕಿ
ಬಾಲಕಿಗೆ ಲವ್ ಲೆಟರ್ ಕೊಟ್ಟ ಆರನೇ ತರಗತಿ ವಿದ್ಯಾರ್ಥಿ- ಬಾಸುಂಡೆ ಬರುವಂತೆ ಬಾರಿಸಿದ ಶಿಕ್ಷಕಿ
TV9 Web
| Edited By: |

Updated on:Jan 31, 2022 | 9:30 AM

Share

ಉತ್ತರ ಕನ್ನಡ: ಸಹಪಾಠಿಗೆ ಲವ್ ಲೆಟರ್ ಕೊಟ್ಟ 6ನೇ ತರಗತಿ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಶಿಕ್ಷಕಿ ಥಳಿಸಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಲ್ಲಿ ನಡೆದಿದೆ. ಕಲ್ಪನಾ ಹೆಗಡೆ ಎಂಬ ಶಿಕ್ಷಕಿ ವಿದ್ಯಾರ್ಥಿಗೆ ಥಳಿಸಿದ್ದು ಬಾಸುಂಡೆ ಬಂದಿದೆ. ಹೊನ್ನಾವರದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶಿಕ್ಷಕಿಯ ನಡೆಗೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆ ಶಿಕ್ಷಕಿ ಕಲ್ಪನಾ ಕ್ಷಮೆಯಾಚಿಸಿದ್ದಾರೆ. ಪ್ರಕರಣ ಇತ್ಯರ್ಥವಾಗಿದೆ.

ಸರಿಯಾಗಿ ಓದಲಿಲ್ಲ ಎಂದು ವಿದ್ಯಾರ್ಥಿನಿ ಕಣ್ಣಿಗೆ ಹೊಡೆದು ಗಾಯಗೊಳಿಸಿದ್ದ ಶಿಕ್ಷಕಿಗೆ ಶಿಕ್ಷೆ ತುಮಕೂರು: ವಿದ್ಯಾರ್ಥಿನಿಗೆ ಹೊಡೆದಿದ್ದ ಶಿಕ್ಷಕಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿ ತುಮಕೂರು ಹೆಚ್ಚುವರಿ ಸಿವಿಲ್, ಜೆಎಂಎಫ್‌ಸಿಯಿಂದ ಆದೇಶ ಹೊರಡಿಸಲಾಗಿದೆ. 2011ರ ಫೆ.17ರಂದು ಶಿಕ್ಷಕಿ ವಿದ್ಯಾರ್ಥಿನಿಗೆ ಹೊಡೆದಿದ್ದರು. ಸದ್ಯ ಈಗ ಇದರ ತೀರ್ಪು ಹೊರ ಬಿದ್ದಿದೆ.

ವಿದ್ಯಾರ್ಥಿನಿ ಸರಿಯಾಗಿ ಓದಲಿಲ್ಲ ಎಂದು ಆಕೆ ಕಣ್ಣಿಗೆ ಹೊಡೆದು ಗಾಯಗೊಳಿಸಿದ್ದ ಶಿಕ್ಷಕಿಗೆ ಶಿಕ್ಷೆ ನೀಡಿ ತುಮಕೂರಿನ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. 2011 ರ ಫೆಬ್ರವರಿ 17 ರಂದು ತಿಲಕ್ ಪಾರ್ಕ್ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿತ್ತು. ತುಮಕೂರು ನಗರದ ಭಾರತ್ ಮಾತಾ ಶಾಲೆಯ ಶಿಕ್ಷಕಿ ಫರಹತ್ ಫಾತಿಮಾ ವಿದ್ಯಾರ್ಥಿನಿಗೆ ಹೊಡೆದಿದ್ದರು. ಪಿಎಸ್ಐ ದಿನೇಶ್ ಪಾಟೀಲ್ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರಾದ ಶಾರದಾ ಕೊಪ್ಪದ ವಿಚಾರಣೆ ನಡೆಸಿ ಶಿಕ್ಷಕಿಗೆ ಕಲಂ 325 ರ ಅನ್ವಯ ಶಿಕ್ಷೆ ಪ್ರಕಟ ಮಾಡಿದ್ದಾರೆ. ಸರ್ಕಾರದ ಪರ ಜಿ ಬಸವರಾಜ್ ವಾದ ಮಂಡಿಸಿದ್ದರು.

ಒಂದೇ ಕುಟುಂಬದ ಮೂವರ ಮೇಲೆ ಹಲ್ಲೆ ಮೈಸೂರು: ವಿವಾಹಿತ ಮಹಿಳೆಯ ಜೊತೆ ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಬೈಕ್‌ನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಮೂವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ. ತಂದೆ, ಮಗನಿಗೆ ಗಾಯಗಳಾಗಿದ್ದು ಅದೃಷ್ಟವಶಾತ್ ಮಹಿಳೆ ಪಾರಾಗಿದ್ದಾರೆ. ಹಲ್ಲೆಯಲ್ಲಿ ಶಿವಪ್ಪ(45), ಮಗ ಶರತ್(20)ಗೆ ಗಾಯಗಳಾಗಿವೆ. ಲೋಹಿತ್‌ ಕುಮಾರ್, ಪರಶಿವಮೂರ್ತಿ ಎಂಬುವವರು ಹಲ್ಲೆ ನಡೆಸಿರುವುದಾಗಿ ತಿಳಿದು ಬಂದಿದೆ. ವಿವಾಹಿತ ಮಹಿಳೆ ಜೊತೆ ಹಲ್ಲೆಗೊಳಗಾದ ಶರತ್ಗೆ ಅಕ್ರಮ ಸಂಬಂಧವಿದೆ ಎಂದು ಹಲ್ಲೆ ನಡೆಸಿದ್ದಾರೆ.

ಹಲ್ಲೆಗೊಳಗಾದ ಶರತ್ಗೆ ಅದೇ ಗ್ರಾಮದ ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧವಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಹಲವು ಬಾರಿ ರಾಜಿ ಪಂಚಾಯಿತಿ ಆಗಿತ್ತು. ಆದ್ರೆ ತಂದೆ, ಮಗ, ಮಹಿಳೆ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದಾಗ ಲೋಹಿತ್‌ ಕುಮಾರ್, ಪರಶಿವಮೂರ್ತಿ ಎಂಬುವವರು ಹಲ್ಲೆ ನಡೆಸಿದ್ದಾರೆ. ಈ ವೇಳೆ ಮಚ್ಚಿನಿಂದ ಆರೋಪಿಗಳು ಹಲ್ಲೆ ಮಾಡಿರುವುದರಿಂದ ತಂದೆ, ಮಗನಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಹೆಚ್.ಡಿ.ಕೋಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ನಿಯಂತ್ರಣ ಕಳೆದುಕೊಂಡ ಚಾಲಕ; ಕಾರು, ಬೈಕು, ನಿಂತಿದ್ದ ಟ್ರಕ್, ಜನರಿಗೆ ಡಿಕ್ಕಿ ಹೊಡೆದ ಬಸ್​, 6 ಮಂದಿ ಸಾವು

Published On - 8:35 am, Mon, 31 January 22

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ