AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಜಲಪಾತಗಳ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ ಜಿಲ್ಲಾಡಳಿತ

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆಗೆ ಜಲಪಾತಗಳಿಗೆ ಜೀವ ಕಳೆಯೇನೋ ಬಂದಿದೆ. ಆದ್ರೆ, ಈ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರಿಗೆ ಮಾತ್ರ ಸಾಧ್ಯವಿಲ್ಲ. ಹೌದು ಜಿಲ್ಲಾಡಳಿತ ಜಲಪಾತಗಳ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಜಲಪಾತಗಳ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ ಜಿಲ್ಲಾಡಳಿತ
ಉತ್ತರ ಕನ್ನಡ ಜಿಲ್ಲೆಯ ಜಲಪಾತಗಳ ವೀಕ್ಷಣೆಗೆ ನಿರ್ಬಂಧ
ವಿನಾಯಕ ಬಡಿಗೇರ್​
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jul 29, 2023 | 6:53 AM

Share

ಉತ್ತರ ಕನ್ನಡ, ಜು.29: ನಿಸರ್ಗದ ಸೊಬಗನ್ನೇ ಮಡಿಲಲ್ಲಿ ಹೊತ್ತುಕೊಂಡಿರುವ ಉತ್ತರ ಕನ್ನಡ(Uttara Kannada) ಜಿಲ್ಲೆಯಲ್ಲಿ ಇದೀಗ ಜಲಪಾತಗಳಿಗೆ(Falls) ಜೀವ ಕಳೆ ಬಂದಿದೆ. ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾಗೋಡು ಜಲಪಾತ, ಸಾತೋಡಿ ಜಲಪಾತ ಅಂಕೋಲದ ವಿಭೂತಿ ಜಲಪಾತ, ದೊನ್ನೆ ಜಲಪಾತ, ಕಾರವಾರದ ಅಣಶಿ ಜಲಪಾತ, ಹೊನ್ನಾವರದ ಅಪ್ಸರಕೊಂಡ ಹಾಗೂ ಗಗನ ಕುಸುಮ ಜಲಪಾತಗಳು ಅಬ್ಬರದ ಮಳೆಗೆ ದುಮ್ಮಿಕ್ಕಿ ಹರಿಯುತಿದ್ದು, ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ಆದ್ರೆ, ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಬಳಿ ಭದ್ರಾವತಿಯ ಯುವಕ ಜಲಪಾತ ವೀಕ್ಷಣೆಗೆ ಬಂದು ನೀರಿನಲ್ಲಿ ಕೊಚ್ಚಿಹೋದ ಕಾರಣ ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲೂ ಪ್ರವಾಸಿಗರಿಗೆ ಜಿಲ್ಲೆಯ ಜಲಪಾತ ವೀಕ್ಷಣೆಗೆ ಜಿಲ್ಲಾಡಳಿತ ನಿಷೇಧ ಹೇರಿದೆ.

ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋಧ್ಯಮಕ್ಕೆ ವಿಶ್ವ ಮಟ್ಟದಲ್ಲಿ ಹೆಸರು ಮಾಡಿದೆ. ಒಂದೆಡೆ ಕರಾವಳಿ ಭಾಗದ ಕಡಲ ತೀರ ಮತ್ತೊಂದೆಡೆ ಪಶ್ಚಿಮ ಘಟ್ಟ ಪ್ರದೇಶದ ನಿಸರ್ಗದ ಜೊತೆ ಜಲಪಾತಗಳು ಪ್ರವಾಸಿಗರ ಮುಖ್ಯ ಆಕರ್ಷಣೆಯಾಗಿದೆ. ಜೊತೆಗೆ ಇಲ್ಲಿನ ಜನರ ಆದಾಯದ ಮೂಲ ಕೂಡ. ಆದ್ರೆ, ಬರುವ ಪ್ರವಾಸಿಗರು ಕರಾವಳಿ ಭಾಗದಲ್ಲಿ ಮೋಜು ಮಸ್ತಿಗೆ ತೆರಳಿ ಜೀವವನ್ನೇ ಕಳೆದುಕೊಂಡರೇ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರು ಸೆಲ್ಫಿ , ವಿಡಿಯೋ ಕ್ರೇಜ್​ಗೆ ಅಪಾಯ ತಂದೊಡ್ಡಿಕೊಳ್ಳುತಿದ್ದಾರೆ. ಇದರಿಂದಾಗಿ ಜೂನ್ ಮೊದಲ ವಾರದಲ್ಲೇ ಸಮುದ್ರಭಾಗಕ್ಕೆ ಪ್ರವಾಸಿಗರನ್ನು ನಿರ್ಬಂಧಿಸಲಾಗಿತ್ತು.

ಇದನ್ನೂ ಓದಿ:ಇಂದಿನಿಂದ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಇದೀಗ ಉಡುಪಿಯಲ್ಲಿ ಆದ ಘಟನೆಯಿಂದಾಗಿ ಜಲಪಾತಗಳ ವೀಕ್ಷಣೆಗೂ ನಿರ್ಬಂಧ ಹೇರಿದೆ. ಹೀಗಾಗಿ ಮಳೆಯ ಸವಿ ಉಂಡು ಜಲಪಾತ ವೀಕ್ಷಿಸಲು ಬರುತ್ತಿರುವ ಪ್ರವಾಸಿಗರಿಗೆ ಜಲಪಾತ ನೋಡಲಾಗದೇ ವಾಪಾಸ್​ ಮರಳುವಂತಾಗಿದೆ. ಇನ್ನು ಪ್ರವಾಸೋಧ್ಯಮ ಮುಖ್ಯವಾಗಿರುವ ಜಿಲ್ಲೆಯಲ್ಲಿ ಹೀಗೆ ನಿಷೇಧ ಹೇರುವುದು ಬೇಸರ ತಂದಿದೆ. ದೂರದ ಊರಿನಿಂದ ಜಲಪಾತಗಳ ವೀಕ್ಷಣೆಗೆಂದು ಸ್ನೇಹಿತರು, ಪ್ಯಾಮಿಲಿ ಜೊತೆಗೆ ಬಂದಿರುತ್ತೇವೆ. ಈ ರೀತಿ ನಿಷೇಧ ಇದೆಯೆಂದು ನಮ್ಮನ್ನ ವಾಪಾಸ್ ಕಳಿಸುತ್ತಾರೆ ಎಂದು ಪ್ರವಾಸಿಗರು ಬೇಸರ ವ್ಯಕ್ತಪಡಿಸಿದ್ದಾರೆ.

ಎತ್ತಿಗೆ ಜ್ವರ ಬಂದರೇ ಬೆಕ್ಕಿಗೆ ಬರೆ ಎಳೆದರು ಎಂಬುವಂತೆ ಉಡುಪಿಯಲ್ಲಿ ಆದ ಘಟನೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ತೆಗೆದುಕೊಳ್ಳುತ್ತಿರುವ ಕ್ರಮಕ್ಕೆ ಪ್ರವಾಸಿಗರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಿನಲ್ಲಿ ಜಿಲ್ಲಾಡಳಿತದ ಕ್ರಮದಿಂದ ದೂರದೂರಿನಿಂದ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ನಿರಾಸೆ ಮೂಡಿಸುತ್ತಿರುವುದು ಮಾತ್ರ ಸತ್ಯ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ