AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುತ್ತಿದ್ದವರಲ್ಲಿ ದುರಂತ ಅಂತ್ಯಕಂಡ ಮೂವರು ಮಹಿಳೆಯರು

ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಉತ್ತರ ಕನ್ನಡ: ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುತ್ತಿದ್ದವರಲ್ಲಿ ದುರಂತ ಅಂತ್ಯಕಂಡ ಮೂವರು ಮಹಿಳೆಯರು
ಬೊಲೆರೊ ಡಿಕ್ಕಿ, ಕ್ರೂಸರ್‌ ವಾಹನದಲ್ಲಿದ್ದ 3 ಮಹಿಳೆಯರು ಸಾವು
TV9 Web
| Edited By: |

Updated on:Jan 20, 2023 | 11:01 PM

Share

ಉತ್ತರಕನ್ನಡ: ಅಂತ್ಯಕ್ರಿಯೆಗೆ ಹೋಗುತ್ತಿದ್ದವರು ದುರಂತ ಅಂತ್ಯಕಂಡಿದ್ದಾರೆ. ಬೊಲೆರೊ ಡಿಕ್ಕಿಯಾಗಿ ಕ್ರೂಸರ್‌ ವಾಹನದಲ್ಲಿದ್ದ 3 ಮಹಿಳೆಯರು ಮೃತಪಟ್ಟಿದ್ದು, ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು( ಜನವರಿ20) ಉತ್ತರಕನ್ನಡ (Uttara Kannada)ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರ ಗ್ರಾಮದ ಬಳಿ ನಡೆದಿದೆ. ಬೆಳಗಾವಿ ಜಿಲ್ಲೆ ಖಾನಾಪುರದ ಫಾರ್ಲಿ ಗ್ರಾಮದ ನಿವಾಸಿಗಳಾದ ಪಾರ್ವತಿ ಗಾವಡ, ದುರ್ಗೆ ಕೋಲ್ಸೇಕರ್, ತುಳಸಿ ಗಾವಡ ಮೃತಪಟ್ಟಿದ್ದು, ವಿಪಿನ ತಾಳ್ವೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇವರು ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುತಿದ್ದಾಗ ಈ ಅಪಘಾತ ಸಂಭವಿಸಿದೆ. ಮಿಳುನಾಡಿನಿಂದ ಗೋವಾಕ್ಕೆ ಮಹಿಂದ್ರ ಬೊಲೆರೊ ವೇಗವಾಗಿ ಬಂದು ಕ್ರೂಸರ್​ಗೆ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಕೇರಳ ಮೂಲದ ಬೊಲೆರೊ ವಾಹನದ ಇಬ್ಬರನ್ನು ಪೊಲೀರು ವಶಕ್ಕೆ ಪಡೆದುಕೊಂಡಿದ್ದಾರೆ.

ಮುಳಗುತ್ತಿದ್ದ ಬೋಟ್‌ನಿಂದ 17 ಜನ ಮೀನುಗಾರರ ರಕ್ಷಣೆ

ಉತ್ತರ ಕನ್ನಡ: ಮುಳಗುತ್ತಿದ್ದ ಬೋಟ್‌ನಿಂದ 17 ಜನ ಮೀನುಗಾರರ ರಕ್ಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಕುಮಟಾ ಸಮೀಪದ ಕಡ್ಲೆ ಬಳಿ ಆಳ ಸಮುದ್ರದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರ ಶ್ರೀದೇವಿ ಅನುಗ್ರಹ ಹೆಸರಿನ ಬೋಟ್ ಬಂಡೆಗೆ ತಾಗಿ ಮುಳುಗಡೆಯಾಗಿದೆ. ಈ ವೇಳೆ ಅಕ್ಕಪಕ್ಕದ ಬೋಟ್‌ನಲ್ಲಿದ್ದವರು ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ.

ಮೀನು ಹಿಡಿದುಕೊಂಡು ವಾಪಾಸ್ಸಾಗುವಾಗ ಈ ಘಟನೆ ನಡೆದಿದೆ. ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಕರಾವಳಿ ಕಾವಲು ಪಡೆ ಆಗಮಿಸಿದ್ದು,17 ಜನ ಮೀನುಗಾರರನ್ನ ರಕ್ಷಿಸಿ ದಡಕ್ಕೆ ತಂದಿದೆ. ಆದ್ರೆ, ಸುಧಾಕರ್ ಕಾರ್ವಿ ಎಂಬುವವರ ಮಾಲಿಕತ್ವದ ಶ್ರೀದೇವಿ ಅನುಗ್ರಹ ಹೆಸರಿನ ಪರ್ಶಿಯನ್ ಬೋಟ್ ಸಮುದ್ರದಲ್ಲಿ ಮುಳುಗಡೆಯಾಗಿದೆ.

Published On - 10:56 pm, Fri, 20 January 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?