AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವ್ಯವಸ್ಥೆಯ ತಾಣವಾದ ಉತ್ತರ ಕನ್ನಡ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳು; ಕ್ಯಾರೆ ಎನ್ನದ ಪ್ರವಾಸೋಧ್ಯಮ ಇಲಾಖೆ

ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ರಾಜ್ಯದಲ್ಲಿ ದೇವಸ್ಥಾನ ಹಾಗೂ ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರವಾಸಿಗರ ಸಂಖ್ಯೆಗೆ ಅನಗುಣವಾಗಿ ಮೂಲಭೂತ ಸೌಕರ್ಯ ಮಾಡದೆ ಇರುವುದರಿಂದ ಸುಸಜ್ಜಿತ ಪ್ರೇಕ್ಷಣೀಯ ಸ್ಥಳಗಳು ಅವ್ಯವಸ್ಥೆಯ ತಾಣವಾಗಿದೆ. 

ಅವ್ಯವಸ್ಥೆಯ ತಾಣವಾದ ಉತ್ತರ ಕನ್ನಡ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳು; ಕ್ಯಾರೆ ಎನ್ನದ ಪ್ರವಾಸೋಧ್ಯಮ ಇಲಾಖೆ
ಉತ್ತರ ಕನ್ನಡ ಪ್ರವಾಸಿ ತಾಣಗಳು
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Jan 06, 2024 | 7:19 PM

Share

ಉತ್ತರ ಕನ್ನಡ, ಜ.06: ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ರಾಜ್ಯದ ಪ್ರವಾಸಿ ಹಾಗೂ ದೇವಸ್ಥಾನಗಳಿಗೆ ಭೇಟಿ ಕೊಡುವವರ ಸಂಖ್ಯೆ ಹೆಚ್ಚಾಗಿದೆ. ಅಷ್ಟೆ ಅಲ್ಲದೆ ಕೋವಿಡ್ ಹಾಗೂ ನೈಸರ್ಗಿಕ ವಿಪತ್ತು ಯಾವುದೇ ಆಗದೆ ಇರುವುದರಿಂದ, ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ ಇಲಾಖೆಗೆ ಹೆಚ್ಚಿನ ಉತ್ತೆಜನ ಸಿಕ್ಕಿದೆ. ಆದ್ರೆ ಪ್ರವಾಸಿಗರ(Tourists) ಸಂಖ್ಯೆಗೆ ತಕ್ಕಂತೆ ಉತ್ತರ ಕನ್ನಡ(Uttara Kannada) ಪ್ರವಾಸೊದ್ಯಮ ಇಲಾಖೆ ಕೆಲಸ ಮಾಡುತ್ತಿಲ್ಲ. ರಾಜ್ಯದಲ್ಲಿ ಅತಿ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 40 ಪ್ರೆಕ್ಷಣೀಯ ಸ್ಥಳಗಳಿವೆ. ಒಂದೊಂದು ಪ್ರೆಕ್ಷಣೀಯ ಸ್ಥಳದ್ದು ಒಂದೊಂದು ಸಮಸ್ಯೆ ಆಗಿದೆ.

ಮಾಗೋಡಿ ಫಾಲ್ಸ್

ಯಲ್ಲಾಪುರದಿಂದ ಸರಿ ಸುಮಾರು 20 ಕಿಮೀ ದೂರದಲ್ಲಿರುವ ಮಾಗೊಡ್​ ಫಾಲ್ಸ್, ಪ್ರವಾಸಿಗರ ಪ್ರೀತಿಯ ತಾಣ. ಇಲ್ಲಿ ಒಮ್ಮೆ ಬಂದರೆ, ಮತ್ತೆ ಬರಬೇಕು ಎಂದು ಅನಿಸುತ್ತದೆ. ಆದ್ರೆ, ಇಲ್ಲಿಗೆ ಬರಲು ಸುಸಜ್ಜಿತ ರಸ್ತೆ ಇರದೆ ಇರುವುದರಿಂದ. ಇಲ್ಲಿಗೆ ಬರುವ ವಾಹನಗಳು ಯಾವಾಗ ಕೈ ಕೊಡುತ್ತೊ ಗೊತ್ತಿಲ್ಲ. ಹಾಗಾಗಿ ಆತಂಕದಲ್ಲಿ ಗಾಡಿ ಓಡಿಸುತ್ತಾ ಈ ಸ್ಥಳಕ್ಕೆ ಬರುವ ಪರಿಸ್ಥಿತಿ ಉಂಟಾಗಿದೆ.

ಗೋಕರ್ಣ

ಶಿವನ ಆತ್ಮಲಿಂಗದ ಒಂದು ಭಾಗ ಹೊಂದಿರುವ ಗೋಕರ್ಣ ಈಗ ಆಶುಚಿತ್ವದ ತಾಣವಾಗಿದೆ. ಆತ್ಮಲಿಂಗ ದರ್ಶನಕ್ಕೆ ಸ್ನಾನ ಮಾಡಿ ಹೋಗಲಾಗುತ್ತದೆ. ಆದ್ರೆ, ಸುಸಜ್ಜಿತ ಸ್ನಾನ ಗೃಹಗಳು ಇಲ್ಲದ ಕಾರಣ ಜನ ಎಲ್ಲೆಂದರಲ್ಲಿ ಸ್ನಾನ ಮಾಡುತ್ತಿದ್ದಾರೆ. ಅಷ್ಟೆ ಅಲ್ಲದೆ, ಸುಸಜ್ಜಿತ ಒಳಚರಂಡಿ ವ್ಯವಸ್ಥೆ ಇಲ್ಲದ ಪರಿಣಾಮ ದುರ್ವಾಸನೆ ಬರುತ್ತಿದೆ.

ಇದನ್ನೂ ಓದಿ:Tourists: ಅಪಾಯಕಾರಿ ಸ್ಥಳದಲ್ಲಿ ರೀಲ್ಸ್​, ಪ್ರವಾಸಿಗರ ಹುಚ್ಚಾಟವನ್ನು ವಿಡಿಯೋನಲ್ಲಿ ನೋಡಿ

ಮುರ್ಡೆಶ್ವರ

ಕಡಲ ತೀರದಲ್ಲಿ ಅತ್ಯಂತ ದೊಡ್ಡ ಶಿವನ ಮೂರ್ತಿ ಹಾಗೂ ಸ್ಕೂಬಾ ಡೈವ್ ಮೂಲಕ ಎಲ್ಲಾ ವರ್ಗದ ಪ್ರವಾಸಿಗರನ್ನು ಆಕರ್ಷಿಸುವ ಮುರ್ಡೆಶ್ವರದಲ್ಲಿ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಬಿಚ್​ನಲ್ಲಿ ಪಾರ್ಕಿಂಗ್ ಮಾಡುವ ಪರಿಸ್ಥಿತಿ ಇದೆ. ಇನ್ನು ಜಿಲ್ಲೆಯ 30ಕ್ಕೂ ಹೆಚ್ಚು ಕಡಲ ತೀರದಲ್ಲಿ ಪ್ಲಾಸ್ಟಿಕ್ ಹಾಗೂ ಮಧ್ಯದ ಬಾಟಲ್​ಗಳು ಎತ್ತೇಚ್ಛವಾಗಿ ಕಂಡುಬರುತ್ತಿದ್ದು, ಬರುವ ಪ್ರವಾಸಿಗರು ಮುಜುಗರಕ್ಕೆ ಒಳಗಾಗುತ್ತಿದ್ದಾರೆ.

ಇಷ್ಟೆಲ್ಲಾ ಸಮಸ್ಯೆ ಹೊಂದಿರುವ ಉತ್ತರ ಕನ್ನಡ ಜಿಲ್ಲೆಗೆ, ಈ ಹಿಂದೆ ಯಾವತ್ತೂ ಭೇಟಿ ಕೊಡದಷ್ಟು ಜನ ಈ ವರ್ಷ ಭೇಟಿ ಕೊಟ್ಟಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಬರೊಬ್ಬರಿ 1 ಕೋಟಿಗೂ ಅಧಿಕ ಜನ ಭೇಟಿ ನೀಡಿದ್ದು, ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದರೆ, ಪ್ರವಾಸೋದ್ಯಮ ಇಲಾಖೆ ಮಾತ್ರ ಇದಕ್ಕೆ ತಕ್ಕಂತೆ ಕೆಲಸ ಮಾಡಲು ಆರಂಭ ಮಾಡಿಲ್ಲ. ಒಟ್ಟಾರೆಯಾಗಿ ಪ್ರವಾಸೊದ್ಯಮ ಇಲಾಖೆಗೆ ಉತ್ತೇಜನ ಸಿಗುವ ಸಂದರ್ಭದಲ್ಲಿ. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸ ಪ್ರವಾಸೊದ್ಯಮ ಹಾಗೂ ಜಿಲ್ಲಾಡಲಿತ ಮಾಡಿದರೆ, ಪ್ರವಾಸಿಗರನ್ನು ಇನ್ನಷ್ಟು ಆಕರ್ಷಿಸಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?