ಹೊನ್ನಾವರ: ಅಝಾನ್ ಮೊಳಗಿಸುತ್ತಿದ್ದ ಪವಿತ್ರ ಕ್ಷಣದಲ್ಲೇ ಇಹಲೋಕ ತ್ಯಜಿಸಿದ ಮೌಲ್ವಿ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕಾಸರಕೋಡ ಮಸೀದಿಯಲ್ಲಿ ಅಸರ್ ನಮಾಜ್‌ಗಾಗಿ ಅಝಾನ್ ಕೂಗುತ್ತಿದ್ದ ಮಂಗಳೂರು ಮೂಲದ ಮೌಲ್ವಿ ಅಬ್ದುಲ್ ಲತೀಫ್ ಮದನಿ ಅವರು ತೀವ್ರ ಹೃದಯಾಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರು 6 ತಿಂಗಳ ಹಿಂದೆ ಮಂಗಳೂರಿನಿಂದ ಹೊನ್ನಾವರಕ್ಕೆ ಮದರಸಾದಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲು ಆಗಮಿಸಿದ್ದರು.

ಹೊನ್ನಾವರ: ಅಝಾನ್ ಮೊಳಗಿಸುತ್ತಿದ್ದ ಪವಿತ್ರ ಕ್ಷಣದಲ್ಲೇ ಇಹಲೋಕ ತ್ಯಜಿಸಿದ ಮೌಲ್ವಿ
ಕಾಸರಕೋಡ ಟೊಂಕಾದ ಎಮ್.ಜೆ.ಎಮ್ ಮಸೀದಿ ಹಾಗೂ ಮೌಲ್ವಿ ಅಬ್ದುಲ್ ಲತೀಫ್ ಮದನಿ
Image Credit source: tv9
Edited By:

Updated on: Jun 10, 2026 | 2:07 PM

ಹೊನ್ನಾವರ, ಜೂನ್ 10: ಮಸೀದಿಯಲ್ಲಿ ಅತ್ಯಂತ ಭಕ್ತಿಭಾವದಿಂದ ಅಸರ್ ನಮಾಜ್‌ಗಾಗಿ ಅಝಾನ್ (ಪ್ರಾರ್ಥನೆಯ ಕರೆ) ಮೊಳಗಿಸುತ್ತಿದ್ದ (Azan) ಪವಿತ್ರ ಕ್ಷಣದಲ್ಲೇ ಮೌಲ್ವಿಯೊಬ್ಬರು ಹೃದಯಾಘಾತದಿಂದ ಕೊನೆಯುಸಿರೆಳೆದಿರುವ ಕರುಣಾಜನಕ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ. ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕಾದ ಎಮ್.ಜೆ.ಎಮ್ (MJM) ಮಸೀದಿಯಲ್ಲಿ ಮಂಗಳವಾರ ಸಂಜೆ ಈ ಘಟನೆ ಸಂಭವಿಸಿದೆ.

ಮುಖ್ಯಾಂಶಗಳು

  • ಅಝಾನ್ ಕೂಗುತ್ತಿದ್ದಾಗಲೇ ಮೌಲ್ವಿ ಸಾವು.
  • ನಮಾಜ್ ವೇಳೆ ತೀವ್ರ ಹೃದಯಾಘಾತ.
  • ಸಾವಿನ ಕೊನೆಕ್ಷಣ ಸಿಸಿಟಿವಿಯಲ್ಲಿ ಸೆರೆ.

ಮಕ್ಕಳಿಗೆ ಶಿಕ್ಷಣ ನೀಡಲು ಬಂದಿದ್ದ ಲತೀಫ್ ಮದನಿ

ಮೃತರನ್ನು ಮಂಗಳೂರು ಮೂಲದ ಕುಕ್ಕಾಜೆಯ ಅಬ್ದುಲ್ ಲತೀಫ್ ಮದನಿ (53) ಎಂದು ಗುರುತಿಸಲಾಗಿದೆ. ಇವರು ಇಸ್ಲಾಮಿಕ್ ಧಾರ್ಮಿಕ ಹಾಗೂ ಮದರಸಾ ಶಿಕ್ಷಣವನ್ನು ಮಕ್ಕಳಿಗೆ ನೀಡುವ ಸಲುವಾಗಿ ಆರು ತಿಂಗಳ ಹಿಂದೆಯಷ್ಟೇ ಮಂಗಳೂರಿನಿಂದ ಹೊನ್ನಾವರದ ಕಾಸರಕೋಡ ಟೊಂಕಾ ಮಸೀದಿಗೆ ಆಗಮಿಸಿದ್ದರು. ಮಂಗಳವಾರ ಸಂಜೆ ವಾಡಿಕೆಯಂತೆ ಮಸೀದಿಯಲ್ಲಿ ಅಸರ್ ನಮಾಜ್ ಪ್ರಾರ್ಥನೆಗೆ ಮುನ್ನ ಮೌಲ್ವಿ ಅಬ್ದುಲ್ ಲತೀಫ್ ಅವರು ಮೈಕ್ ಹಿಡಿದು ಅಝಾನ್ ಕೂಗುತ್ತಿದ್ದರು. ಈ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಮೈಕ್ ಹಿಡಿದುಕೊಂಡೇ ಕುಸಿದು ಬಿದ್ದಿದ್ದಾರೆ.

ಆಸ್ಪತ್ರೆಗೆ ತಲುಪುವ ಮುನ್ನವೇ ಹಾರಿಹೋದ ಪ್ರಾಣ

ಮೌಲ್ವಿ ಹಠಾತ್ ಕುಸಿದು ಬೀಳುತ್ತಿರುವುದನ್ನು ಗಮನಿಸಿದ ಮಸೀದಿಯಲ್ಲಿದ್ದ ಇತರರು ತಕ್ಷಣವೇ ಅವರನ್ನು ಹೊನ್ನಾವರದ ಸೆಂಟ್ ಇಗ್ನೇಶಿಯಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವ ಮುನ್ನವೇ ಮೌಲ್ವಿ ಅಬ್ದುಲ್ ಲತೀಫ್ ಮೃತಪಟ್ಟಿದ್ದಾರೆ ಎಂದು ವೈದ್ಯರು ಧೃಢಪಡಿಸಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡದ 439 ಪ್ರದೇಶಗಳಲ್ಲಿ ಗುಡ್ಡ ಕುಸಿತದ ಭೀತಿ: 100 ಕೋಟಿ ರೂ. ಬಿಡುಗಡೆಯಾದ್ರೂ ಕಾಮಗಾರಿ ನಡೆಸಲಾಗದೆ ಸಂಕಷ್ಟ!

ಅತ್ಯಂತ ಪವಿತ್ರವಾದ ಪ್ರಾರ್ಥನೆಯ ಸಮಯದಲ್ಲಿ, ಅಲ್ಲಾಹನ ನಾಮಸ್ಮರಣೆ ಮಾಡುತ್ತಿರುವಾಗಲೇ ಮೌಲ್ವಿ ಪ್ರಾಣ ಬಿಟ್ಟಿರುವುದು ಅತ್ಯಂತ ಪುಣ್ಯದ ಸಾವು ಎಂದು ಸ್ಥಳೀಯರು ಹೇಳಿದ್ದು, ಕಂಬನಿ ಮಿಡಿದಿದ್ದಾರೆ. ಮೌಲ್ವಿಯ ಕೊನೆಯ ಕ್ಷಣದ ಭೀಕರ ದೃಶ್ಯಗಳು ಮಸೀದಿಯ ಒಳಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲೂ ಸರೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:47 pm, Wed, 10 June 26

ಸೂರಜ್​, ಮಹಾವೀರ್​ ಉತ್ತರೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
Follow Us