AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕಚೇರಿಯಲ್ಲೇ ಬೆಡ್ ರೂಂ; ಕಾರವಾರದ ಪ್ರವಾಸೋದ್ಯಮ ಅಧಿಕಾರಿ ಅಮಾನತು

ಸರ್ಕಾರಿ ಕಚೇರಿಯಲ್ಲೇ ಬೆಡ್ ರೂಮ್ ಮಾಡಿಕೊಂಡ ಘಟನೆ ಕಾರವಾರದ ಪ್ರವಾಸೋದ್ಯಮ ಅಧಿಕಾರಿ ಕಚೇರಿಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಜಯಂತ್ ಅವರನ್ನು ಅಮಾನತು ಮಾಡಲಾಗಿದೆ. ಸರ್ಕಾರಿ ಅಧಿಕಾರಿ ಜಯಂತ್ ಅಮಾನತುಗೊಳಿಸುವಂತೆ ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ. ಪಾಟೀಲ್ ಸೂಚನೆ ನೀಡಿದ್ದಾರೆ. ಇಂತಹ ಅಶಿಸ್ತನ್ನು ಸಹಿಸಲು ಸಾಧ್ಯವಿಲ್ಲವೆಂದು ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ. ಈ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರವಾಗಿತ್ತು. ಆ ವರದಿಯ ಬೆನ್ನಲ್ಲೇ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

ಸರ್ಕಾರಿ ಕಚೇರಿಯಲ್ಲೇ ಬೆಡ್ ರೂಂ; ಕಾರವಾರದ ಪ್ರವಾಸೋದ್ಯಮ ಅಧಿಕಾರಿ ಅಮಾನತು
Hk Patil
ಪ್ರಸನ್ನ ಗಾಂವ್ಕರ್​
| Edited By: |

Updated on: Feb 20, 2025 | 9:42 PM

Share

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಪ್ರವಾಸೋದ್ಯಮ ಅಧಿಕಾರಿಯಿಂದ ಕಚೇರಿಯಲ್ಲೇ ಬೆಡ್ ರೂಂ ಮಾಡಿಕೊಂಡ ಆರೋಪ ಕೇಳಿಬಂದಿತ್ತು. ಈ ಘಟನೆಯ ಬಗ್ಗೆ ಟಿವಿ9 ವರದಿಯನ್ನೂ ಮಾಡಿತ್ತು. ಟಿವಿ9 ವರದಿ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಉತ್ತರ ಕನ್ನಡ ಪ್ರವಾಸೋದ್ಯಮ ಉಪ ನಿರ್ದೇಶಕ ಜಯಂತ್ ತಮ್ಮ ಕಚೇರಿಯಲ್ಲೇ ಬೆಡ್ ರೂಂ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಶಿಸ್ತುಕ್ರಮ ಕೈಗೊಳ್ಳಲಾಗಿದೆ.

ನನಗೂ ಜಯಂತ್ ಎಂಬ ಅಧಿಕಾರಿ ಬಗ್ಗೆ ಮಾಹಿತಿ ಬಂದಿದೆ. ಇಂಥ ಅಶಿಸ್ತನ್ನು ಸಹಿಸಲು ಸಾಧ್ಯವಿಲ್ಲ. ಹೀಗಾಗಿ, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರ ಜೊತೆ ಮಾತಾಡಿದ್ದೇನೆ. ಕಾರವಾರದ ಅಧಿಕಾರಿ ಜಯಂತ್ ಅವರನ್ನು ಅಮಾನತು ಮಾಡುವಂತೆ ಸೂಚಿಸಿದ್ದೇನೆ ಎಂದು ವಿಧಾನಸೌಧದಲ್ಲಿ ಪ್ರವಾಸೋದ್ಯಮ ಸಚಿವ ಹೆಚ್​.ಕೆ. ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: ಮಾರ್ಚ್ 3ರಿಂದ ವಿಧಾನಮಂಡಲ ಅಧಿವೇಶನ; ಸಂಪುಟ ಸಭೆಯಲ್ಲಿ ನಿರ್ಧಾರ

ಕಾರವಾರ ಪ್ರವಾಸೋದ್ಯಮ ಇಲಾಖೆಯ ಕಚೇರಿಯಲ್ಲಿ ಶಿಫ್ಟಿಂಗ್ ವೇಳೆ ಕಚೇರಿಯ ಒಂದು ಕೋಣೆಯಲ್ಲಿ ಬೆಡ್ ರೂಂನಲ್ಲಿರುವ ರೀತಿಯ ಮಂಚ, ಹಾಸಿಗೆ ಪತ್ತೆ ಆಗಿತ್ತು. ಈ ಕುರಿತು ವಿಡಿಯೋ ಸಮೇತ ಟಿವಿ9 ಸುದ್ದಿ ಪ್ರಸಾರ ಮಾಡಿತ್ತು. ಟಿವಿ9ನಲ್ಲಿ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಈ ಬಗ್ಗೆ ವಿವರವಾದ ಮಾಹಿತಿ ಪಡೆದಿರುವ ಸಚಿವ ಹೆಚ್​.ಕೆ. ಪಾಟೀಲ್ ಆ ಅಧಿಕಾರಿಯನ್ನು ತಕ್ಷಣ ಅಮಾನತು ಮಾಡುವಂತೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಿಗೆ ಸೂಚಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಕಿ ಹಣಕ್ಕಾಗಿ ಮಹಿಳೆಯ ಕಪಾಳಕ್ಕೆ ಬಾರಿಸಿದ ಅಂಗಡಿ ಓನರ್
ಬಾಕಿ ಹಣಕ್ಕಾಗಿ ಮಹಿಳೆಯ ಕಪಾಳಕ್ಕೆ ಬಾರಿಸಿದ ಅಂಗಡಿ ಓನರ್
ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ವೈದ್ಯನಿಗೆ ಸಾರ್ವಜನಿಕರಿಂದ ಧರ್ಮದೇಟು
ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ವೈದ್ಯನಿಗೆ ಸಾರ್ವಜನಿಕರಿಂದ ಧರ್ಮದೇಟು
ಟಿಟಿಡಿಗೆ ಬಮುಲ್ ಪ್ರತಿನಿತ್ಯ ಎಷ್ಟು ತುಪ್ಪ ಕೊಡುತ್ತೆ ಗೊತ್ತಾ?
ಟಿಟಿಡಿಗೆ ಬಮುಲ್ ಪ್ರತಿನಿತ್ಯ ಎಷ್ಟು ತುಪ್ಪ ಕೊಡುತ್ತೆ ಗೊತ್ತಾ?
‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ದರ್ಶನ್ ಅರ್ಜಿ
‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ದರ್ಶನ್ ಅರ್ಜಿ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು