ಉಮಳೆಜೂಗ್ ದ್ವೀಪ ಗ್ರಾಮ: ಮೃತದೇಹವನ್ನು ದೋಣಿಯಲ್ಲಿ ಕೊಂಡೊಯ್ದು ಅಂತ್ಯಕ್ರಿಯೆ

ಸ್ವಾತಂತ್ರ್ಯ ಬಂದು 78 ವರ್ಷಗಳಾದರೂ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮೂಲಭೂತ ಸೌಕರ್ಯದಿಂದ ವಂಚಿತವಾದ ಗ್ರಾಮಗಳು ಇರುವುದು ದುರಂತವೇ ಸರಿ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಕಾರವಾರದ ಉಮಳೆಜೂಗ್ ದ್ವೀಪ ಗ್ರಾಮದಲ್ಲಿ ಸಾವನ್ನಪ್ಪಿದ ವ್ಯಕ್ತಿಯೊಬ್ಬರ ಮೃತದೇಹವನ್ನು ಸಾಗಿಸಲು ರಸ್ತೆಯಿಲ್ಲದೇ ದೋಣಿ ಮೂಲಕ ಸಾಗಿಸಿ ಅಂತ್ಯಕ್ರಿಯೆ ಮಾಡಲಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ.

ಉಮಳೆಜೂಗ್ ದ್ವೀಪ ಗ್ರಾಮ: ಮೃತದೇಹವನ್ನು ದೋಣಿಯಲ್ಲಿ ಕೊಂಡೊಯ್ದು ಅಂತ್ಯಕ್ರಿಯೆ
ಉಮಳೆಜೂಗ್ ದ್ವೀಪ ಗ್ರಾಮ: ಮೃತದೇಹವನ್ನು ದೋಣಿಯಲ್ಲಿ ಕೊಂಡೊಯ್ದು ಅಂತ್ಯಕ್ರಿಯೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 10, 2024 | 6:47 PM

ಉತ್ತರ ಕನ್ನಡ, ಅ.10:  ಉತ್ತರ ಕನ್ನಡ(Uttara Kannada) ಜಿಲ್ಲೆಯ ಒಟ್ಟಾರೆ ಭೂ ಭಾಗದಲ್ಲಿ ಅಂದಾಜು ಶೇ. 80 ರಷ್ಟು ಅರಣ್ಯ ಭಾಗದಿಂದ ಕೂಡಿದೆ. ಹೀಗಾಗಿ ಪ್ರವಾಸಿಗರ ನೆಚ್ಚಿನ ತಾಣವೂ ಆಗಿದೆ. ಆದರೆ, ದುರಾದೃಷ್ಟವಶಾತ್​ ಇದೇ ಪ್ರಕೃತಿ ಮಡಿಲಲ್ಲಿ ಬದುಕುತ್ತಿರುವ ಜನರು ಮಾತ್ರ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಇದಕ್ಕೆ ತಾಜಾ ಉದಾಹರಣೆಯಂತೆ ಇಂದು(ಗುರುವಾರ) ಕಾರವಾರದ ಉಮಳೆಜೂಗ್ ದ್ವೀಪ ಗ್ರಾಮದಲ್ಲಿ ಸಾವನ್ನಪ್ಪಿದ ವ್ಯಕ್ತಿಯೊಬ್ಬರ ಶವವನ್ನು ಸಾಗಿಸಲು ರಸ್ತೆಯಿಲ್ಲದೇ ದೋಣಿ ಮೂಲಕ ಸಾಗಿಸಿ ಅಂತ್ಯಕ್ರಿಯೆ ಮಾಡಲಾಗಿದೆ.

ದೋಣಿ ಮೂಲಕ ಶವ ರವಾನೆ

ಹೌದು, ಗ್ರಾಮದಲ್ಲಿ ಗುಲ್ಬಾ ಕೋಳಮಕರ್ ಹೆಸರಿನ ವ್ಯಕ್ತಿ ಇಂದು ಸಾವನಪ್ಪಿದ್ದರು. ಉಮಳೆಜೂಗ್ ದ್ವೀಪ ಗ್ರಾಮದಲ್ಲಿ ರುದ್ರಭೂಮಿ ಇಲ್ಲದ ಹಿನ್ನೆಲೆ ಶವ ಸಂಸ್ಕಾರಕ್ಕೆ ನದಿ ದಾಟಿ ಹೋಗಬೇಕಾದ ಅನಿವಾರ್ಯತೆಯಿದೆ. ಹೀಗಾಗಿ ರಸ್ತೆಯಿಲ್ಲದೆ ಶವ ಸಾಗಿಸಲು ಪರದಾಡಿದ ಉಮಳೆಜೂಗ್ ದ್ವೀಪ ಗ್ರಾಮದ ಜನ, ಬಳಿಕ ಶವ ಸಂಸ್ಕಾರಕ್ಕೆ ಕೊಂಡೊಯ್ಯಲು ದೋಣಿ ಬಳಸಿಕೊಂಡು ಹೋಗಿದ್ದಾರೆ.

ಇದನ್ನೂ ಓದಿ:ಬೆಳಗಾವಿ: ಕೃಷ್ಣಾಪುರದಲ್ಲಿ ರಸ್ತೆ ಸಂಪರ್ಕ ಇಲ್ಲದೆ ಶವವನ್ನು 6 ಕಿಮೀ ಹೊತ್ತುಕೊಂಡೇ ಸಾಗಿದ ಗ್ರಾಮಸ್ಥರು

ಸೇತುವೆ ನಿರ್ಮಾಣವಾದರೂ ರಸ್ತೆ ನಿರ್ಮಾಣವಾಗದೇ ದ್ವೀಪವಾದ ಉಮಳೆಜೂಗ್ ಗ್ರಾಮ

ಸೇತುವೆ ನಿರ್ಮಾಣವಾದರೂ ರಸ್ತೆ ನಿರ್ಮಾಣವಾಗದೇ ಉಮಳೆಜೂಗ್ ಗ್ರಾಮ ದ್ವೀಪವಾಗಿದ್ದು, ಕಾಳಿ ನದಿಯನ್ನು ಬೋಟ್‌ನಲ್ಲಿ ದಾಟಿ ಹೋಗಬೇಕಾದ ಅನಿವಾರ್ಯತೆಯಿದೆ. ನದಿಗೆ ಸೇತುವೆ ಇದ್ದರೂ ರಸ್ತೆ ನಿರ್ಮಾಣವಾಗದೇ ಸೇತುವೆ ಪ್ರಯೋಜನಕ್ಕೆ ಇಲ್ಲದಂತಾಗಿದೆ. ಇದರಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಇಂದು ದೋಣಿಯಲ್ಲೇ ಶವ ಸಾಗಿಸಿ ಸಂಸ್ಕಾರ ನಡೆಸಿ ಬಂದಿದ್ದಾರೆ. ಸೇತುವೆ ಬಳಕೆಗೆ ಸಿಗದಿರುವುದರಿಂದ ಇಲ್ಲಿನ ಗ್ರಾಮಸ್ಥರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು
ಪುತ್ತಿಗೆ ಮಠದ ಹಳೆಯ ಅನುಯಾಯಿಯೇನೋ ಎಂಬಂತಿತ್ತು ರತನ್ ಟಾಟಾರ ವರ್ತನೆ!
ಪುತ್ತಿಗೆ ಮಠದ ಹಳೆಯ ಅನುಯಾಯಿಯೇನೋ ಎಂಬಂತಿತ್ತು ರತನ್ ಟಾಟಾರ ವರ್ತನೆ!
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!