Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಮಳೆಜೂಗ್ ದ್ವೀಪ ಗ್ರಾಮ: ಮೃತದೇಹವನ್ನು ದೋಣಿಯಲ್ಲಿ ಕೊಂಡೊಯ್ದು ಅಂತ್ಯಕ್ರಿಯೆ

ಸ್ವಾತಂತ್ರ್ಯ ಬಂದು 78 ವರ್ಷಗಳಾದರೂ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮೂಲಭೂತ ಸೌಕರ್ಯದಿಂದ ವಂಚಿತವಾದ ಗ್ರಾಮಗಳು ಇರುವುದು ದುರಂತವೇ ಸರಿ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಕಾರವಾರದ ಉಮಳೆಜೂಗ್ ದ್ವೀಪ ಗ್ರಾಮದಲ್ಲಿ ಸಾವನ್ನಪ್ಪಿದ ವ್ಯಕ್ತಿಯೊಬ್ಬರ ಮೃತದೇಹವನ್ನು ಸಾಗಿಸಲು ರಸ್ತೆಯಿಲ್ಲದೇ ದೋಣಿ ಮೂಲಕ ಸಾಗಿಸಿ ಅಂತ್ಯಕ್ರಿಯೆ ಮಾಡಲಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ.

ಉಮಳೆಜೂಗ್ ದ್ವೀಪ ಗ್ರಾಮ: ಮೃತದೇಹವನ್ನು ದೋಣಿಯಲ್ಲಿ ಕೊಂಡೊಯ್ದು ಅಂತ್ಯಕ್ರಿಯೆ
ಉಮಳೆಜೂಗ್ ದ್ವೀಪ ಗ್ರಾಮ: ಮೃತದೇಹವನ್ನು ದೋಣಿಯಲ್ಲಿ ಕೊಂಡೊಯ್ದು ಅಂತ್ಯಕ್ರಿಯೆ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 10, 2024 | 6:47 PM

ಉತ್ತರ ಕನ್ನಡ, ಅ.10:  ಉತ್ತರ ಕನ್ನಡ(Uttara Kannada) ಜಿಲ್ಲೆಯ ಒಟ್ಟಾರೆ ಭೂ ಭಾಗದಲ್ಲಿ ಅಂದಾಜು ಶೇ. 80 ರಷ್ಟು ಅರಣ್ಯ ಭಾಗದಿಂದ ಕೂಡಿದೆ. ಹೀಗಾಗಿ ಪ್ರವಾಸಿಗರ ನೆಚ್ಚಿನ ತಾಣವೂ ಆಗಿದೆ. ಆದರೆ, ದುರಾದೃಷ್ಟವಶಾತ್​ ಇದೇ ಪ್ರಕೃತಿ ಮಡಿಲಲ್ಲಿ ಬದುಕುತ್ತಿರುವ ಜನರು ಮಾತ್ರ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಇದಕ್ಕೆ ತಾಜಾ ಉದಾಹರಣೆಯಂತೆ ಇಂದು(ಗುರುವಾರ) ಕಾರವಾರದ ಉಮಳೆಜೂಗ್ ದ್ವೀಪ ಗ್ರಾಮದಲ್ಲಿ ಸಾವನ್ನಪ್ಪಿದ ವ್ಯಕ್ತಿಯೊಬ್ಬರ ಶವವನ್ನು ಸಾಗಿಸಲು ರಸ್ತೆಯಿಲ್ಲದೇ ದೋಣಿ ಮೂಲಕ ಸಾಗಿಸಿ ಅಂತ್ಯಕ್ರಿಯೆ ಮಾಡಲಾಗಿದೆ.

ದೋಣಿ ಮೂಲಕ ಶವ ರವಾನೆ

ಹೌದು, ಗ್ರಾಮದಲ್ಲಿ ಗುಲ್ಬಾ ಕೋಳಮಕರ್ ಹೆಸರಿನ ವ್ಯಕ್ತಿ ಇಂದು ಸಾವನಪ್ಪಿದ್ದರು. ಉಮಳೆಜೂಗ್ ದ್ವೀಪ ಗ್ರಾಮದಲ್ಲಿ ರುದ್ರಭೂಮಿ ಇಲ್ಲದ ಹಿನ್ನೆಲೆ ಶವ ಸಂಸ್ಕಾರಕ್ಕೆ ನದಿ ದಾಟಿ ಹೋಗಬೇಕಾದ ಅನಿವಾರ್ಯತೆಯಿದೆ. ಹೀಗಾಗಿ ರಸ್ತೆಯಿಲ್ಲದೆ ಶವ ಸಾಗಿಸಲು ಪರದಾಡಿದ ಉಮಳೆಜೂಗ್ ದ್ವೀಪ ಗ್ರಾಮದ ಜನ, ಬಳಿಕ ಶವ ಸಂಸ್ಕಾರಕ್ಕೆ ಕೊಂಡೊಯ್ಯಲು ದೋಣಿ ಬಳಸಿಕೊಂಡು ಹೋಗಿದ್ದಾರೆ.

ಇದನ್ನೂ ಓದಿ:ಬೆಳಗಾವಿ: ಕೃಷ್ಣಾಪುರದಲ್ಲಿ ರಸ್ತೆ ಸಂಪರ್ಕ ಇಲ್ಲದೆ ಶವವನ್ನು 6 ಕಿಮೀ ಹೊತ್ತುಕೊಂಡೇ ಸಾಗಿದ ಗ್ರಾಮಸ್ಥರು

ಸೇತುವೆ ನಿರ್ಮಾಣವಾದರೂ ರಸ್ತೆ ನಿರ್ಮಾಣವಾಗದೇ ದ್ವೀಪವಾದ ಉಮಳೆಜೂಗ್ ಗ್ರಾಮ

ಸೇತುವೆ ನಿರ್ಮಾಣವಾದರೂ ರಸ್ತೆ ನಿರ್ಮಾಣವಾಗದೇ ಉಮಳೆಜೂಗ್ ಗ್ರಾಮ ದ್ವೀಪವಾಗಿದ್ದು, ಕಾಳಿ ನದಿಯನ್ನು ಬೋಟ್‌ನಲ್ಲಿ ದಾಟಿ ಹೋಗಬೇಕಾದ ಅನಿವಾರ್ಯತೆಯಿದೆ. ನದಿಗೆ ಸೇತುವೆ ಇದ್ದರೂ ರಸ್ತೆ ನಿರ್ಮಾಣವಾಗದೇ ಸೇತುವೆ ಪ್ರಯೋಜನಕ್ಕೆ ಇಲ್ಲದಂತಾಗಿದೆ. ಇದರಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಇಂದು ದೋಣಿಯಲ್ಲೇ ಶವ ಸಾಗಿಸಿ ಸಂಸ್ಕಾರ ನಡೆಸಿ ಬಂದಿದ್ದಾರೆ. ಸೇತುವೆ ಬಳಕೆಗೆ ಸಿಗದಿರುವುದರಿಂದ ಇಲ್ಲಿನ ಗ್ರಾಮಸ್ಥರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ