AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಕಾಡುಹಂದಿ ಮಾಂಸವೆಂದು ನಂಬಿಸಿ ಜನರಿಗೆ ಬೌ ಬೌ ಮಾಂಸ ಮಾರಾಟ

ಕಾಡುಹಂದಿ ಮಾಂಸವೆಂದು ನಂಬಿಸಿ ನಾಯಿ ಮಾಂಸ ಮಾರಾಟ ಮಾಡುತ್ತಿದ್ದ ಯುವಕರ ತಂಡವೊಂದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು ಗೂಸಾ ತಿನ್ನುವಂತಾಗಿದೆ. ಈ ಘಟನೆ ಉತ್ತರ ಕನ್ನಡದ ಅಂಕೋಲಾ ತಾಲೂಕಿನಲ್ಲಿ ನಡೆದಿದೆ.

ಉತ್ತರ ಕನ್ನಡ: ಕಾಡುಹಂದಿ ಮಾಂಸವೆಂದು ನಂಬಿಸಿ ಜನರಿಗೆ ಬೌ ಬೌ ಮಾಂಸ ಮಾರಾಟ
ನಾಯಿ ಮಾಂಸ ಮಾರಾಟ ಮಾಡಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಇಬ್ಬರು ಯುವಕರು (ಎಡಚಿತ್ರ)
TV9 Web
| Edited By: Rakesh Nayak Manchi|

Updated on: Jan 30, 2023 | 7:30 PM

Share

ಕಾರವಾರ: ಮಾಂಸ ಮಾರಾಟದಲ್ಲಿ ಮಾಂಸ ಪ್ರಿಯರನ್ನು ಮೋಸ ಮಾಡುತ್ತಿರುವುದು ಹೊಸದೇನಲ್ಲ, ಕೋಳಿ ಮಾಂಸವೆಂದು ಇನ್ನೇನೋ ಮಾಂಸ ನೀಡಿದ ಪ್ರಕರಣ ಈ ಹಿಂದೆ ಕೇಳಿರುತ್ತೀರಿ. ಅಂತಹದ್ದೇ ಪ್ರಕರಣವೊಂದು ಉತ್ತರಕನ್ನಡ (Uttara Kannada) ಜಿಲ್ಲೆಯಲ್ಲಿ ನಡೆದಿದೆ. ಕಾಡುಹಂದಿ ಮಾಂಸವೆಂದು (Wild boar meat) ಜನರನ್ನು ನಂಬಿಸಿ ಅವರಿಗೆ ನಾಯಿ ಮಾಂಸ ಮಾರಾಟ ಮಾಡುತ್ತಿದ್ದ ಪ್ರಕರಣ ಅಂಕೋಲಾ ತಾಲೂಕಿನ ಮೊಗಟಾ, ಹಿಲ್ಲೂರು ಭಾಗದಲ್ಲಿ ಬೆಳಕಿಗೆ ಬಂದಿದೆ. ಇನ್ನು ನಿಜಾಂಶ ತಿಳಿದ ನಂತರ ಸಾರ್ವಜನಿಕರು ಸುಮ್ಮನೆ ಬಿಡುತ್ತಾರಾ? ನಾಯಿ ಮಾಂಸ ತಿನ್ನಿಸಿದ ಯುವಕರನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿದ್ದಾರೆ.

ಮೊಗಟಾ ಹಾಗೂ ಹಿಲ್ಲೂರು ಭಾಗದಲ್ಲಿ ಅಲೆಮಾರಿ ಜನಾಂಗದ ಯುವಕರಿಬ್ಬರು ಕಾಡುಹಂದಿ ಮಾಂಸ ಎಂದು ಜನರನ್ನು ನಂಬಿಸಿ ನಾಯಿ ಮಾಂಸ ಮಾರಾಟದಲ್ಲಿ ತೊಡಗಿದ್ದರು. ಹೀಗೆ ನಂಬಿಸಿ ಹತ್ತಾರು ಮನೆಗಳಿಗೆ ನಾಯಿ ಮಾಂಸವನ್ನು ತಿನ್ನಿಸಿ ಭರ್ಜರಿ ಹಣ ಮಾಡಿದ್ದಾರೆ. ಆದೇನಾಯ್ತು ಗೊತ್ತಿಲ್ಲ, ಯುವಕರು ನೀಡಿದ ಮಾಂಸ ಕಾಡು ಹಂದಿ ಮಾಂಸವಲ್ಲ, ನಾಯಿ ಮಾಂಸ ಎಂದು ತಿಳಿದುಬಂದಿದೆ. ಹೀಗಾಗಿ ತಕ್ಕ ಶಾಸ್ತಿ ಮಾಡಲು ಸಾರ್ವಜನಿಕರು ಪ್ಲಾನ್ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ವಿಜಯ್ ಮಲ್ಯ ಸಾವಿರಾರು ಕೋಟಿ ವಂಚನೆ ಮಾಡಿದ್ರು ಕೇಳಲ್ಲ, ನಾನ್ ಮಾಡಿರೊ ಮೂರ್ನಾಲ್ಕು ಕೋಟಿ ಕೇಳೋಕೆ ಬರ್ತಿರಾ‌‌‌‌ ಎಂದು ಪೊಲೀಸರಿಗೆ ಅವಾಜ್ ಹಾಕಿದ ಆರೋಪಿ

ನಾಯಿ ಮಾಂಸ ತಿನ್ನಿಸಿದ ಯುವಕರಿಗೆ ಬುದ್ಧಿ ಕಲಿಸಲು ಸಾರ್ವಜನಿಕರು ಮಾಂಸ ಖರೀದಿಸುವ ನೆಪದಲ್ಲಿ ಯುವಕರನ್ನು ಕರೆಸಿದ್ದಾರೆ. ಅದರಂತೆ ಯುವಕರು ಮಾಂಸ ಹಿಡಿದುಕೊಂಡು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಯುವಕರಿಬ್ಬರನ್ನು ಲಾಕ್ ಮಾಡಿದ ಸಾರ್ವಜನಿಕರು ಪ್ರಶ್ನಿಸಿ ಹಿಗ್ಗಾಮುಗ್ಗ ಥಳಿಸಿದ್ದಾರೆ. ನಂತರ ಸಾರ್ವಜನಿಕರು ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಯುವಕರು ಬೇರೆಡೆ ನಾಯಿಗಳನ್ನ ಹಿಡಿದು ಕೊಂದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದರು. ಮಾಂಸದ ವಿಚಾರವಾಗಿ ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದ ವೇಳೆ ನಾಯಿ ಹಿಡಿಯುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು