AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಟೋಲ್ ಸಿಬ್ಬಂದಿಯಿಂದ ಪ್ರಯಾಣಿಕರ ಮೇಲೆ ಹಲ್ಲೆ ಪ್ರಕರಣ; ಕೇಸ್​ ದಾಖಲಿಸಿಕೊಳ್ಳಲು ಕುಮಟಾ ಪೊಲೀಸರ ಮಿನಾಮೇಷ ಆರೋಪ

ಫೆ.16 ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ಹೊಳೆಗದ್ದೆ ಟೋಲ್ನಲ್ಲಿ ಟೋಲ್ ಸಿಬ್ಬಂದಿ ಸೇರಿಕೊಂಡು ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ಮಾಡಿದ್ದು 20 ಕ್ಕೂ ಹೆಚ್ಚು ಜನ. ಆದರೆ, ಪ್ರಕರಣ ದಾಖಲಾಗಿದ್ದು ಮಾತ್ರ ಕೇವಲ ನಾಲ್ಕು ಜನರ ಮೇಲೆ, ಹೀಗಾಗಿ ಪೊಲೀಸರಿಂದ ಅಪರಾಧಿಗಳ ರಕ್ಷಣೆ ಆಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಪ್ರವಿತಾ ಆಚಾರ್ಯ ಗಂಭೀರ ಆರೋಪ ಮಾಡಿದ್ದಾರೆ.

ಉತ್ತರ ಕನ್ನಡ: ಟೋಲ್ ಸಿಬ್ಬಂದಿಯಿಂದ ಪ್ರಯಾಣಿಕರ ಮೇಲೆ ಹಲ್ಲೆ ಪ್ರಕರಣ; ಕೇಸ್​ ದಾಖಲಿಸಿಕೊಳ್ಳಲು ಕುಮಟಾ ಪೊಲೀಸರ ಮಿನಾಮೇಷ ಆರೋಪ
ಕುಮಟಾ ಹೊಳೆಗದ್ದೆ ಟೋಲ್ ಸಿಬ್ಬಂದಿಯಿಂದ ಪ್ರಯಾಣಿಕರ ಮೇಲೆ ಹಲ್ಲೆ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Mar 01, 2024 | 3:22 PM

Share

ಉತ್ತರ ಕನ್ನಡ, ಮಾ.01: ಕುಮಟಾ ಹೊಳಗದ್ದೆ ಟೋಲ್‌ಗೇಟ್‌​(Kumata Holegadde toll)ನಲ್ಲಿ ಮಂಗಳೂರಿನ ಕುಟುಂಬದ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹಿಳೆಯರ ಬಟ್ಟೆ ಹರಿದು ಹಲ್ಲೆ ಮಾಡಿದ್ರೂ, ಪ್ರಕರಣ ದಾಖಲಿಸಿಕೊಳ್ಳಲು ಕುಮಟಾ(Kumta) ಪೊಲೀಸರು ಮಿನಾಮೇಷ ಮಾಡುತ್ತಿದ್ದಾರೆ. ಹಲ್ಲೆ ಮಾಡಿದ್ದು 20 ಕ್ಕೂ ಹೆಚ್ಚು ಜನ, ಆದರೆ, ಪ್ರಕರಣ ದಾಖಲಾಗಿದ್ದು ಮಾತ್ರ ಕೇವಲ ನಾಲ್ಕು ಜನರ ಮೇಲೆ, ಹೀಗಾಗಿ ಪೊಲೀಸರಿಂದ ಅಪರಾಧಿಗಳ ರಕ್ಷಣೆ ಆಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಪ್ರವಿತಾ ಆಚಾರ್ಯ ಗಂಭೀರ ಆರೋಪ ಮಾಡಿದ್ದಾರೆ.

ಅಪರಾಧಿಗಳನ್ನ ಪೊಲೀಸ್ರೆ ರಕ್ಷಿಸಿದ್ರೆ, ನ್ಯಾಯಕ್ಕಾಗಿ ಎಲ್ಲಿ ಹೋಗೊದು-ಸಂತ್ರಸ್ಥ ಮುಜೀಬ್​

ಪೊಲೀಸರೇ ಅಪರಾಧಿಗಳ‌ನ್ನು ರಕ್ಷಿಸಿದ್ರೆ ನ್ಯಾಯಕ್ಕಾಗಿ ಎಲ್ಲಿ ಹೋಗೊದೆಂದು ಸಂತ್ರಸ್ತ ಮುಜೀಬ್ ಅಳಲು ತೊಡಿಕೊಂಡಿದ್ದಾರೆ. ಹಲ್ಲೆ ನಡೆಸಿದ ಟೋಲ್ ಗೇಟ್ ಸಿಬ್ಬಂದಿ ಹಾಗೂ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಂತ್ರಸ್ತ ಮುಜೀಬ್ ಹಾಗೂ ಸಾಮಾಜಿಕ‌ ಹೋರಾಟಗಾರರು ಆಗ್ರಹಿಸಿದ್ದಾರೆ. ಹೊಳೆಗದ್ದೆ ಟೋಲ್‌ಗೇಟ್‌ನವರು, ಮಹಿಳೆಯರು, ಪುರುಷರೆನ್ನದೇ ಹಲ್ಲೆ ನಡೆಸಿದ್ದಾರೆ. ಅಪ್ರಾಪ್ತ ಬಾಲಕಿಯ ಬಟ್ಟೆ ಎಳೆದು, ದೌರ್ಜನ್ಯ ನಡೆಸಿ ಆಕೆಯ ಮೈಮೇಲೆ ಇದ್ದ ಚಿನ್ನದ ಆಭರಣಗಳನ್ನು ಕೂಡ ಎಳೆದಾಡಿದ್ದರು.

ಇದನ್ನೂ ಓದಿ:ಉತ್ತರ ಕನ್ನಡ: ಟೋಲ್ ಸಿಬ್ಬಂದಿಯಿಂದ ಪ್ರಯಾಣಿಕರ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಘಟನೆ ವಿವರ

ಕಳೆದ ತಿಂಗಳ ಫೆ.16 ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ಹೊಳೆಗದ್ದೆ ಟೋಲ್ನಲ್ಲಿ ಟೋಲ್ ಸಿಬ್ಬಂದಿ ಸೇರಿಕೊಂಡು ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿತ್ತು.ಮಂಗಳೂರು ನಗರದ ಪಲ್ನೀರಿನ ಮುಜೀಜ್ ಎಂಬಾತನ ಕುಟುಂಬ, ಮಂಗಳೂರಿನಿಂದ ಕುಮಟಾ ಮಾರ್ಗವಾಗಿ ಗದಗದ ಲಕ್ಷ್ಮೀಶ್ವರಕ್ಕೆ ಹೋಗುತಿದ್ದರು. ಈ ವೇಳೆ ಕುಮಟಾ ಟೋಲ್ ಗೇಟ್​ನಲ್ಲಿ ಫಾಸ್ಟ್ ಟ್ಯಾಗ್​ನಿಂದ ಹಣ ಕಡಿತವಾಗದೇ ಸಮಸ್ಯೆಯಾದಾಗ, ಟೋಲ್ ಸಿಬ್ಬಂದಿಗಳಾದ ಕಿರಣ್, ಸತೀಶ್ ಹಾಗೂ ಮಂಜುನಾಥ್ ಎಂಬುವವರಿಂದ ಗಲಾಟೆಯಾಗಿದ್ದು, ಮಾತಿಗೆ ಮಾತು ಬೆಳೆದು ಸಹ ಸಿಬ್ಬಂದಿ ಮಜೀಜ್ ಸೈಯದ್ ರವರ ಕಾರಿನ ಗಾಜು ಪುಡಿ ಮಾಡಿದ್ದಲ್ಲದೆ, ಮಹಿಳೆಯರ ಮೇಲೆ ಸಹ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಆಯಿಷಾ, ಫಾತೀಮಾ, ಮಜೀಜ್ ಸೈಯದ್ ಅವರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು, ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?