AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವತಃ ಕೆಸರು ಗದ್ದೆಗಿಳಿದು ಭತ್ತ ನಾಟಿ ಮಾಡಿದ ಉತ್ತರಕನ್ನಡ ಜಿಲ್ಲಾಧಿಕಾರಿ

ನಾಟಿ ಕಾರ್ಯಕ್ಕೆ ಪಂಚೆ- ಶಲ್ಯದೊಂದಿಗೆ ಆಗಮಿಸಿದ ಜಿಲ್ಲಾಧಿಕಾರಿ, ಶಾಸ್ತ್ರೋಕ್ತವಾಗಿ ಧಾರ್ಮಿಕ ವಿಧಿವಿಧಾನ ಕೈಗೊಂಡರು. ನಂತರ ಕೆಸರಿನ ಗದ್ದೆಗಿಳಿದು, ಸಸಿ ಮಡಿಗಳನ್ನು ಹಿಡಿದು ನಾಟಿ‌ ಕಾರ್ಯ ಮಾಡಿದರು.

ಸ್ವತಃ ಕೆಸರು ಗದ್ದೆಗಿಳಿದು ಭತ್ತ ನಾಟಿ ಮಾಡಿದ ಉತ್ತರಕನ್ನಡ ಜಿಲ್ಲಾಧಿಕಾರಿ
ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಗದ್ದೆ ನಾಟಿ ಮಾಡಿದ ದೃಶ್ಯ
TV9 Web
| Edited By: |

Updated on:Aug 01, 2021 | 11:50 PM

Share

ಕಾರವಾರ: ಪ್ರವಾಹ, ಭೂಕುಸಿತಗಳ ನಡುವೆ ಸದ್ಯ ಕಂಗಾಲಾಗಿರುವ ಉತ್ತರ ಕನ್ನಡದ (Uttara Kannada) ಕೃಷಿಕ ಸಮುದಾಯದ ನಡುವೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಗದ್ದೆಗಿಳಿದು ನಾಟಿ ಮಾಡಿದ್ದಾರೆ. ಈಮೂಲಕ ಕೃಷಿಕರ ಕಷ್ಟ ಸುಖಗಳನ್ನು ಅರಿಯುವ ಯತ್ನ ನಡೆಸಿದ್ದಾರೆ. ಜತೆಗೆ ಕೃಷಿಯೆಡೆಗೆ ಹೆಚ್ಚಿನ ಜನರು ಆಕರ್ಷಿತರಾಗುವಂತೆ ಪ್ರೇರೇಪಿಸುವ ಪ್ರಯತ್ನ ಮಾಡಿದ್ದಾರೆ. ಬಿಳಿ ಲುಂಗಿ, ಕೇಸರಿ ಅಂಗಿ, ಶಲ್ಯ ಧರಿಸಿ ಪಕ್ಕಾ ಗ್ರಾಮೀಣ ಶೈಲಿಯಲ್ಲಿ ಕೆಸರು ಗದ್ದೆಗಿಳಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ಇತರ ಅಧಿಕಾರಿಗಳು ಭಾನುವಾರ ಭತ್ತದ ಸಸಿಗಳನ್ನು ನಾಟಿ ಮಾಡಿದರು. ಜಿಲ್ಲಾ ಪತ್ರಿಕಾ ಭವನ ನಿರ್ವಹಣಾ ಸಮಿತಿಯಿಂದ ಪತ್ರಿಕಾ ದಿನಾಚರಣೆಯ ಅಂಗವಾಗಿ ಸಿದ್ದರದಲ್ಲಿ ವಿಭಿನ್ನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೆ.ಡಿ.ಪೆಡ್ನೇಕರ್ ಅವರ ಜಮೀನಿನಲ್ಲಿ ಸುಮಾರು ಒಂದು ಗಂಟೆಗಳ ಕಾಲ ಡಿಸಿ ಮುಲ್ಲೈ ಮುಗಿಲನ್, ಎಡಿಸಿ ಕೃಷ್ಣಮೂರ್ತಿ ಎಚ್.ಕೆ., ಎಸಿ ವಿದ್ಯಾಶ್ರೀ ಚಂದರಗಿ, ತಹಸೀಲ್ದಾರ್ ನಿಶ್ಚಲ ನರೋನಾ ಭಾಗವಹಿಸಿ, ಕೃಷಿ ಕಾರ್ಯದ ಅನುಭವ ಪಡೆದರು. ಸಸಿಮಡಿಗೆ ಪೂಜೆ ಮಾಡಿ ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಸಸಿ ನಾಟಿ ಮಾಡಿದರು.

ಜಿಲ್ಲಾ ಕೇಂದ್ರದ ಪತ್ರಕರ್ತರು ಪತ್ರಿಕಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ನಾಟಿ ಕಾರ್ಯಕ್ಕೆ ಪಂಚೆ- ಶಲ್ಯದೊಂದಿಗೆ ಆಗಮಿಸಿದ ಜಿಲ್ಲಾಧಿಕಾರಿ, ಶಾಸ್ತ್ರೋಕ್ತವಾಗಿ ಧಾರ್ಮಿಕ ವಿಧಿವಿಧಾನ ಕೈಗೊಂಡರು. ನಂತರ ಕೆಸರಿನ ಗದ್ದೆಗಿಳಿದು, ಸಸಿ ಮಡಿಗಳನ್ನು ಹಿಡಿದು ನಾಟಿ‌ ಕಾರ್ಯ ಮಾಡಿದರು. ಕೃಷಿ, ಗದ್ದೆ ಕೆಲಸಗಳಿಗೆ ಹಿಂದೇಟು ಹಾಕುವ ಅಧಿಕಾರಿಗಳ ವರ್ಗದ ಸ್ಥಾಪಿನ ಮನಸ್ಥಿತಿಯನ್ನು ತೊಡೆದುಹಾಕುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಹಾಗೂ ಇತರ ಅಧಿಕಾರಿಗಳು ಗದ್ದೆಗಿಳಿದು ನಾಟಿ ಕಾರ್ಯ ಮಾಡುವ‌ ಮೂಲಕ ಮಾದರಿಯಾದರು. ಪತ್ರಿಕಾ ದಿನಾಚರಣೆಯನ್ನೂ ಈ ರೀತಿ ಆಯೋಜಿಸಿ ಜಿಲ್ಲಾ ಕೇಂದ್ರದ ಪತ್ರಕರ್ತರು ಆದರ್ಶವೆನಿಸಿಕೊಂಡರು.

Uttara Kannada DC

ಕೃಷಿ ಚಟುವಟಿಕೆಯಲ್ಲಿ ಭಾಗವಹಿಸಿದ ಅಧಿಕಾರಿಗಳ ತಂಡ

ಹಲವು ಸವಾಲುಗಳ ನಡುವೆ 50 ಎಕರೆ ಭತ್ತದ ಕೃಷಿ ಮಾಡಿ ಸಾಧನೆ ಮಾಡಿದ ಹಳಗಾದ ಧೋಲ ಗ್ರಾಮದ ಪ್ರಗತಿಪರ ರೈತ ಯಶವಂತ ಉಂಡೇಕರ್ ಹಾಗೂ ಸಿದ್ದರ ಗ್ರಾಮದ ಹಿರಿಯ ಕೃಷಿಕ, ನಿವೃತ್ತ ಶಿಕ್ಷಕ ಅನಂತ ಶಾಬು ನಾಯ್ಕ ದಂಪತಿಯನ್ನು ಸಂಘದಿಂದ ಸನ್ಮಾನಿಸಲಾಯಿತು. ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪತ್ರಕರ್ತರು ಸಮಾಜಕ್ಕೆ ಅಂಟಿದ ರೋಗಗಳಿಗೆ ಚಿಕಿತ್ಸೆ ಕೊಡುವ ವೈದ್ಯರಿದ್ದಂತೆ. ಸಮಾಜದ ಕೆಲ ಕೆಡುಕುಗಳ ಮೂಲ ಅರಿತು ಜನರಿಗೆ ನೋವೂ ಆಗದಂತೆ, ಕಾಯಿಲೆಯೂ ಗುಣವಾಗುವಂತೆ ಚುಚ್ಚುಮದ್ದು ನೀಡುವ ಸವಾಲಿನ ಜವಾಬ್ದಾರಿ ಮಾಧ್ಯಮಗಳ ಮೇಲಿದೆ. ಉತ್ತರ ಕನ್ನಡ ಜಿಲ್ಲೆಯ ಮಾಧ್ಯಮಗಳು ಅದನ್ನು ಯಶಸ್ವಿಯಾಗಿ ನಿಭಾಯಿಸುತ್ತಿವೆ ಎಂದರು. ಇದೇ ವೇಳೆ ಸಾಧನೆಗೈದ ಪತ್ರಕರ್ತರಿಗೆ ಟ್ಯಾಗೋರ್ ಪ್ರಶಸ್ತಿಯನ್ನು ವಿತರಿಸಲಾಯಿತು.

ಇದನ್ನೂ ಓದಿ:  

Uttara Kannada Flood: ಚಿತ್ರನೋಟ: ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಕೊಟ್ಟ ಭೂಕುಸಿತಕ್ಕೊಳಗಾದ ಕಳಚೆ ಗ್ರಾಮ ಹೇಗಿದೆ?

Uttara Kannada Flood: ಕಳಚೆಯ ಕೂಸುಗಳ ಪುನರ್ವಸತಿ: ಆಡಳಿತದ ಮುಂದಿದೆ ಕಳಚೆ ಕಲ್ಲಿನಷ್ಟೇ ಬೃಹತ್ ಸವಾಲು

(Uttara Kannada DC himself planted paddy in the mud)

Published On - 11:35 pm, Sun, 1 August 21

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?