AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಾಚರಣೆಗೆ ಉತ್ತರ ಕನ್ನಡ ಜಿಲ್ಲೆಗೆ ಯಾವುದೇ ನಿರ್ಬಂಧ ಹೇರಿಲ್ಲ-ಜಿಲ್ಲಾ ಆರೋಗ್ಯಾಧಿಕಾರಿ

ಉತ್ತರ ಕನ್ನಡ(Uttara Kannada) ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ(DHO) ಡಾ.ನೀರಜ್ ಅವರು ಹೇಳಿದ್ದಾರೆ. ಕೊರೊನಾ ಎದುರಿಸಲು ನಮ್ಮ ಜಿಲ್ಲಾ ಆರೋಗ್ಯ ಇಲಾಖೆ ರೆಡಿಯಾಗಿದ್ದು, ಕೊವಿಡ್ ಸೆಂಟರ್ ಹಾಗೂ ಆಕ್ಸಿಜನ್ ಪ್ಲ್ಯಾಂಟ್ ಸೇರಿದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದೆವೆ. ಕೊರೊನಾ ಹೆಚ್ಚಾದ್ರೆ ಗೋವಾ ಗಡಿಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತೇವೆ ಎಂದರು.

ಹೊಸ ವರ್ಷಾಚರಣೆಗೆ ಉತ್ತರ ಕನ್ನಡ ಜಿಲ್ಲೆಗೆ ಯಾವುದೇ ನಿರ್ಬಂಧ ಹೇರಿಲ್ಲ-ಜಿಲ್ಲಾ ಆರೋಗ್ಯಾಧಿಕಾರಿ
ಉತ್ತರ ಕನ್ನಡ ಹೊಸವರ್ಷಾಚರಣೆಗೆ ನಿರ್ಬಂಧವಿಲ್ಲ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Dec 20, 2023 | 6:52 PM

Share

ಉತ್ತರ ಕನ್ನಡ, ಡಿ.20: ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಿಲ್ಲ ಎಂದು ಟಿವಿ9ಗೆ ಉತ್ತರ ಕನ್ನಡ(Uttara Kannada) ಜಿಲ್ಲಾ ಆರೋಗ್ಯಾಧಿಕಾರಿ(DHO) ಡಾ.ನೀರಜ್​ ಮಾಹಿತಿ ನೀಡಿದ್ದಾರೆ. ಇಂದು(ಡಿ.20) ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು ‘ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಯಾವುದೇ ನಿರ್ಬಂಧ ಇಲ್ಲ. ಕೊವಿಡ್ ಬಗ್ಗೆ ಪ್ರವಾಸಿಗರಿಗೆ ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ. ಅಸ್ತಮಾ, ಹೃದಯ ಸಮಸ್ಯೆ ಇರುವವರು ಬರದಿದ್ದರೆ ಒಳ್ಳೆಯದು. ವೈರಸ್ ತೀವ್ರತೆ ಹೆಚ್ಚಾದರೆ ನಿರ್ಬಂಧ ಹೇರಬೇಕಾಗುತ್ತೆ ಎಂದರು.

ಕೊರೊನಾ ಎದುರಿಸಲು ನಮ್ಮ ಜಿಲ್ಲಾ ಆರೋಗ್ಯ ಇಲಾಖೆ ರೆಡಿ

ಕೊರೊನಾ ಎದುರಿಸಲು ನಮ್ಮ ಜಿಲ್ಲಾ ಆರೋಗ್ಯ ಇಲಾಖೆ ರೆಡಿಯಾಗಿದ್ದು, ಕೊವಿಡ್ ಸೆಂಟರ್ ಹಾಗೂ ಆಕ್ಸಿಜನ್ ಪ್ಲ್ಯಾಂಟ್ ಸೇರಿದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದೆವೆ. ಕೊರೊನಾ ಹೆಚ್ಚಾದ್ರೆ ಗೋವಾ ಗಡಿಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತೇವೆ. ಡಿಸೆಂಬರ್​ 10ರಂದು ಜಿಲ್ಲೆಯಲ್ಲಿ ಒಂದು ಕೊವಿಡ್ ಪ್ರಕರಣ ಪತ್ತೆಯಾಗಿತ್ತು. ಗೋವಾಕ್ಕೆ ಹೋಗಿ ಬಂದ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಸದ್ಯ ಆ ವ್ಯಕ್ತಿ ಸಂಪೂರ್ಣ ಗುಣಮುಖನಾಗಿದ್ದಾನೆ ಎಂದು ತಿಳಿಸಿದರು.

ಇದನ್ನೂ ಓದಿ:New Year 2024: ಹೊಸ ವರ್ಷಕ್ಕೆ ಗೈಡ್ ಲೈನ್ಸ್ ರೆಡಿ: ಡಿ. 31ರ ಮಧ್ಯರಾತ್ರಿಯಿಂದಲೇ ಅನ್ವಯ

ಚಿಕ್ಕಮಗಳೂರು: ನಾಲ್ವರಲ್ಲಿ ಕೊರೊನಾ ಪಾಸಿಟಿವ್ ಧೃಡ

ಚಿಕ್ಕಮಗಳೂರು: ಜಿಲ್ಲೆಯ ನಾಲ್ವರಲ್ಲಿ ಇಂದು(ಡಿ.20) ಕೊರೊನಾ ಪಾಸಿಟಿವ್ ಧೃಡವಾಗಿದೆ. ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರಲ್ಲಿ ಕೊರೊನಾ ಪಾಸಿಟಿವ್ ಆಗಿದ್ದು, ಹೋಂ ಐಸೂಲೇಷನ್ ಮಾಡಲಾಗಿದೆ. ಮೂವರಲ್ಲಿ ಓರ್ವರಿಗೆ ಮಾತ್ರ ಟ್ರಾವೆಲ್ ಹಿಸ್ಟರಿ ಇದೆ. ಪಾಸಿಟಿವ್ ಒಂದಿರುವ ಒಬ್ಬರು ಶಿವಮೊಗ್ಗದ ತೀರ್ಥಹಳ್ಳಿ ಹೋಗಿ ಬಂದಿದ್ದರು. ಆ ಕುರಿತು ಸರ್ಕಾರದ ಸೂಚನೆಯಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಟಿವಿ9 ಗೆ ಚಿಕ್ಕಮಗಳೂರು DHO ಅಶ್ವಥ್ ಬಾಬಾ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:47 pm, Wed, 20 December 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್