AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಕರ್ಣ ಸಮುದ್ರ ತೀರದಲ್ಲಿ ಪ್ರವಾಸಿಗನ ರಕ್ಷಣೆ

ಅಸ್ವಸ್ಥರಾಗಿ ಮುಳುಗುತ್ತಿದ್ದ ಅವರನ್ನು ಅವರ ಸ್ನೇಹಿತರೇ ರಕ್ಷಿಸಿದ್ದಾರೆ.

ಗೋಕರ್ಣ ಸಮುದ್ರ ತೀರದಲ್ಲಿ ಪ್ರವಾಸಿಗನ ರಕ್ಷಣೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 25, 2021 | 8:19 PM

Share

ಕಾರವಾರ: ಜಿಲ್ಲೆಯ ಕುಮಟಾ ತಾಲ್ಲೂಕಿನ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ಸಮುದ್ರದಲ್ಲಿ ಮುಳುಗುತ್ತಿದ್ದ ಪ್ರವಾಸಿಗನೋರ್ವನನ್ನು ರಕ್ಷಿಸಲಾಗಿದೆ. ಡಾ. ಸುರೇಶ(36) ರಕ್ಷಣೆಗೊಳಗಾದ ಪ್ರವಾಸಿಗ. ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ. ಸುರೇಶ ಅವರು ಈಜಲು ನೀರಿಗಿಳಿದಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿದ್ದರು. ಈವೇಳೆ ಅಸ್ವಸ್ಥರಾಗಿ ಮುಳುಗುತ್ತಿದ್ದ ಅವರನ್ನು ಅವರ ಸ್ನೇಹಿತರೇ ರಕ್ಷಿಸಿದ್ದಾರೆ.

ಪ್ರವಾಸಿಗರೇ ಗಮನಿಸಿ, ಗೋಕರ್ಣ ಸಮುದ್ರ ತೀರದಲ್ಲಿ 144 ಸೆಕ್ಷನ್ ಜಾರಿ ಉತ್ತರಕನ್ನಡ ಜಿಲ್ಲೆಯ ಗೋಕರ್ಣದ ಎಲ್ಲಾ ಬೀಚ್​ಗಳ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 13ರಂದು 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಸೆಪ್ಟೆಂಬರ್ 13ರಿಂದ ಒಂದು ತಿಂಗಳ ಕಾಲ ಗೋಕರ್ಣದ ಎಲ್ಲಾ ಸಮುದ್ರ ತೀರಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿಲಾಗಿದ್ದು, ಪ್ರವಾಸಿಗರು ಮುಂದಿನ ಒಂದು ತಿಂಗಳ ಕಾಲ ಸಮುದ್ರ ತೀರಗಳನ್ನು ಪ್ರವೇಶಿಸುವಂತಿಲ್ಲ ಎಂದು ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಆದೇಶ ಹೊರಡಿಸಿದ್ದಾರೆ.

ಗೋಕರ್ಣ ಬೀಚ್‌ಗಳಲ್ಲಿ ಪ್ರವಾಸಿಗರು ಸಾವನ್ನಪ್ಪುವುದನ್ನು ತಪ್ಪಿಸಲು 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಅನುಮತಿ ಪಡೆಯದೇ ಇನ್ನು ಮುಂದೆ ಯಾರೂ ಗೋಕರ್ಣ ಬೀಚ್‌ಗೆ ತೆರಳುವಂತಿಲ್ಲ. ಈಗಾಗಲೇ ರಾಜ್ಯ ಹಾಗೂ ಹೊರ ರಾಜ್ಯದ ಹಲವು ಪ್ರವಾಸಿಗರು ಗೋಕರ್ಣದಲ್ಲಿ ಸಮುದ್ರಕ್ಕಿಳಿದು ಜೀವ ಕಳೆದುಕೊಂಡಿದ್ದರು. ಪೊಲೀಸರು ಹಾಗೂ ಲೈಫ್‌ ಗಾರ್ಡ್ಸ್ ಸಿಬ್ಬಂದಿ ತಡೆದರೂ ಬೇರೆಡೆಯಿಂದ ಕಣ್ಣು ತಪ್ಪಿಸಿ ಸಮುದ್ರಕ್ಕಿಳಿದು ನೀರು ಪಾಲಾಗುತ್ತಿದ್ದರು. ಈ ಕಾರಣದಿಂದ ಸೇಫ್ ಬೀಚ್ ಹಾಗೂ ಡೇಂಜರ್ ಬೀಚ್ ಎಂದು ಎರಡು ವಿಭಾಗವನ್ನಾಗಿ ಪೊಲೀಸರು ಸಮುದ್ರ ತೀರವನ್ನು ವಿಂಗಡಿಸಿದ್ದಾರೆ. ಆದರೂ ಸದ್ಯದ ಮಟ್ಟಿಗೆ ಯಾರೂ ಸಮುದ್ರಕ್ಕಿಳಿಯದಂತೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

ವಾರಾಂತ್ಯಗಳಂದು ಬೆಂಗಳೂರು ಮತ್ತಿತರ ನಗರಗಳು ಮತ್ತು ಉತ್ತರ ಕರ್ನಾಟಕದ ಭಾಗದಿಂದ ನೂರಾರು ಪ್ರವಾಸಿಗರು ಗೋಕರ್ಣಕ್ಕೆ ಆಗಮಿಸುತ್ತಾರೆ. ಇತ್ತೀಚಿನ ಕೆಲವು ದಿನಗಳಲ್ಲಿ ಹಲವು ಪ್ರವಾಸಿಗರು ಸಮುದ್ರ ಪಾಲಾದ ಘಟನೆ ನಡೆದಿದೆ. ಅಲ್ಲದೇ ಇತ್ತೀಚಿಗಷ್ಟೇ ಸೆಲ್ಪಿ ತೆಗೆಯಲು ಹೋದ ಪ್ರವಾಸಿಗನೋರ್ವ ಸಮುದ್ರದಲ್ಲಿ ಎಲ್ಲರ ಎದುರೇ ಕೊಚ್ಚಿಕೊಂಡು ಹೋದ ಘಟನೆಯೂ ನಡೆದಿತ್ತು.

ಇದನ್ನೂ ಓದಿ: 

ಬೆಂಗಳೂರಿನಿಂದ ವಾರಾಂತ್ಯ ಪ್ರವಾಸಕ್ಕೆ ಬಂದಿದ್ದ 8 ಸ್ನೇಹಿತರು: ಗೋಕರ್ಣ ಕಡಲ ತೀರದಲ್ಲಿ ಯುವಕ ನೀರುಪಾಲು

Sneha Dubey: ಕಾಶ್ಮೀರದ ಪ್ರಸ್ತಾಪವೆತ್ತಿದ ಪಾಕ್​ ಪ್ರಧಾನಿಗೆ ಕಟು ಉತ್ತರ ಕೊಟ್ಟ ಸ್ನೇಹಾ ದುಬೆ ಯಾರು? ಚಿಕ್ಕವಯಸ್ಸಿನ ಅಧಿಕಾರಿ ಬಗ್ಗೆ ಇಲ್ಲಿದೆ ಮಾಹಿತಿ

(Uttara Kannada Gokarna Beach rescue of the traveler)

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!