AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಮನವಿಗೆ ಸ್ಪಂದಿಸದ ಆಡಳಿತ, ಹಾರವಾಡ ಗ್ರಾಮದಲ್ಲಿ ಮಹಿಳೆಯರಿಂದಲೇ ನಿರ್ಮಾಣವಾಯ್ತು ತಾತ್ಕಾಲಿಕ ಬಸ್ ನಿಲ್ದಾಣ

ಬಸ್ ನಿಲ್ದಾಣ ಕೆಡವಿ ಹಾಕಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಮಾಡಿ ಮಾಡಿ ಸಾಕಾಗಿ ಹೋದ ಅಂಕೋಲಾ ತಾಲೂಕಿನ ಹಾರವಾಡದ ಮಹಿಳೆಯರು ತಾವೇ ಸ್ವತಃ ತಾತ್ಕಾಲಿಕ ಬಸ್ ನಿಲ್ದಾಣ ನಿರ್ಮಾಣ ಮಾಡಿ ಆಡಳಿತಕ್ಕೆ ಚಾಟಿ ಬೀಸಿದ್ದಾರೆ. ವಿದ್ಯಾರ್ಥಿಗಳು, ಮಹಿಳೆಯರು ಬಸ್​​​ಗಾಗಿ ತಾಸುಗಟ್ಟಲೇ ಬಿಸಿಲಿನಲ್ಲಿ ಕಾಯಬೇಕಾದ ಪರಿಸ್ಥಿತಿ ಹಾರವಾಡ ಕ್ರಾಸ್​​ನಲ್ಲಿತ್ತು. ಇದಕ್ಕೀಗ ತಾತ್ಕಾಲಿಕ ಮುಕ್ತಿ ದೊರೆತಿದೆ.

ಉತ್ತರ ಕನ್ನಡ: ಮನವಿಗೆ ಸ್ಪಂದಿಸದ ಆಡಳಿತ, ಹಾರವಾಡ ಗ್ರಾಮದಲ್ಲಿ ಮಹಿಳೆಯರಿಂದಲೇ ನಿರ್ಮಾಣವಾಯ್ತು ತಾತ್ಕಾಲಿಕ ಬಸ್ ನಿಲ್ದಾಣ
ಹಾರವಾಡ ಗ್ರಾಮದಲ್ಲಿ ಮಹಿಳೆಯರಿಂದಲೇ ನಿರ್ಮಾಣವಾಯ್ತು ತಾತ್ಕಾಲಿಕ ಬಸ್ ನಿಲ್ದಾಣ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: Ganapathi Sharma

Updated on: May 17, 2024 | 9:13 AM

ಕಾರವಾರ, ಮೇ 17: ಒಂದೆಡೆ ರಾಷ್ಟ್ರೀಯ ಹೆದ್ದಾರಿಯಲ್ಲಿ (National Higway) ಉರಿಬಿಸಿಲಿನಲ್ಲಿ ಬಸ್​​​ಗಾಗಿ ಕಾಯುತ್ತಿರುವ ಮಹಿಳೆಯರು. ಇನ್ನೊಂದೆಡೆ ನಾರಿಯರೇ ಒಗ್ಗಟ್ಟಾಗಿ ತಾತ್ಕಾಲಿಕ ಬಸ್ ತಂಗುದಾಣ ನಿರ್ಮಿಸುತ್ತಿರುವ ದೃಶ್ಯ. ಇದು ಕಂಡುಬಂದದ್ದು ಉತ್ತರಕನ್ನಡ ಜಿಲ್ಲೆಯ (Uttara Kannada District) ಅಂಕೋಲಾ ತಾಲೂಕಿನ ಹಾರವಾಡ (Harwada) ಕ್ರಾಸ್ ಬಳಿ. ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಳೆದ 10 ವರ್ಷಗಳಿಂದ ನಡೆಯುತ್ತಿದೆ. ಹೈವೆಗಾಗಿ ಸಂಬಂಧಪಟ್ಟ ಐಆರ್​​ಬಿ ಕಂಪನಿ ಅಕ್ಕಪಕ್ಕದ ಜಮೀನನ್ನು ಸ್ವಾಧಿನಪಡಿಸಿಕೊಂಡಿತ್ತು. ಆಗ ಇದ್ದ ಬಸ್ ತಂಗುದಾಣಗಳನ್ನೆಲ್ಲ ನೆಲಸಮ ಮಾಡಿತ್ತು. ಆದರೆ ಈವರೆಗೂ ಆಯಾ ಗ್ರಾಮದ ನಾಗರಿಕರಿಗೆ ಮಾಡಬೇಕಾದ ಬಸ್ ತಂಗುದಾಣ ಮಾಡಿಲ್ಲ.

ಹೀಗಾಗಿ ಗ್ರಾಮೀಣ ಪ್ರದೇಶದ ನಾಗರಿಕರು ಉರಿಬಿಸಿಲಿನಲ್ಲಿ ನಿಂತು ಬಸ್​​ಗಾಗಿ ಕಾಯಬೇಕಾಗಿದೆ. ಹಾರವಾಡ ಕ್ರಾಸ್​​​ನಲ್ಲಿದ್ದ ಬಸ್ ನಿಲ್ದಾಣ ಮಾಡದೇ ನಿರ್ಲಕ್ಷ ತೋರಿದ್ದರಿಂದ ಬಿಸಲ ಬೇಗೆಗೆ ಪ್ರತಿ ದಿನ ಸಂಚಾರ ಮಾಡುವ ಗ್ರಾಮದ ಮಹಿಳೆಯರೇ ಒಟ್ಟಾಗಿ ತೆಂಗಿನ ಸೋಗೆಯಿಂದ ತಂಗುದಾಣ ನಿರ್ಮಿಸುವ ಮೂಲಕ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಾಚಿಕೆ ಪಡುವಂತೆ ಮಾಡಿದ್ದಾರೆ.

ಹಾರವಾಡ ಗ್ರಾಮದಲ್ಲಿ ನೂರಕ್ಕೂ ಹೆಚ್ಚು ಮನೆಗಳಿವೆ. ಈ ಭಾಗದಿಂದ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಬಸ್​​​ಗಾಗಿ ತಾಸುಗಟ್ಟಲೇ ಕಾಯಬೇಕು. ಪ್ರತಿ ದಿನ ಇಲ್ಲಿನ ಮಹಿಳೆಯರು ಉದ್ಯೋಗಕ್ಕಾಗಿ ಕಾರವಾರಕ್ಕೆ ತೆರಳುತ್ತಾರೆ. ಇನ್ನು ಇರುವ ಬಸ್ ನಿಲ್ದಾಣ ಕೆಡವಿದ್ದರಿಂದ ಬಸ್​​ಗಳನ್ನು ಸಹ ನಿಲ್ಲಿಸುವುದಿಲ್ಲ. ಹೀಗಾಗಿ ವಿದ್ಯಾರ್ಥಿಗಳು, ಮಹಿಳೆಯರು ಬಸ್​​​ಗಾಗಿ ತಾಸುಗಟ್ಟಲೇ ಬಿಸಿಲಿನಲ್ಲಿ ಕಾಯಬೇಕಾಗುತ್ತದೆ.

ಕ್ಯಾರೇ ಅನ್ನದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಜಿಲ್ಲಾಡಳಿತ

ಬಸ್​​ ನಿಲ್ದಾಣ ನಿರ್ಮಾಣಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಹ ನೀಡಲಾಗಿತ್ತು. ಆದರೆ ಕಣ್ಣು ಕಿವಿ ಮುಚ್ಚಿಕೊಂಡಿದ್ದ ಆಡಳಿತ ಮಾತ್ರ ಮನವಿಗೆ ಹತ್ತು ವರ್ಷಗಳಿಂದ ಸ್ಪಂದಿಸಲೇ ಇಲ್ಲ. ಹೀಗಾಗಿ ಇಲ್ಲಿ ಪ್ರಯಾಣಿಸುವ ಮಹಿಳೆಯರೇ, ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಲು ಹಣವಿಲ್ಲದಿದ್ದರೂ ಊರಿನಲ್ಲಿ ಬಿದ್ದ ತೆಂಗಿನ ಸೋಗೆಯನ್ನು ತಂದು ತಂಪಿನ ತಾತ್ಕಾಲಿಕ ನಿಲ್ದಾಣ ನಿರ್ಮಿಸಿ ಬೋರ್ಡ ಸಹ ತೂಗುಹಾಕಿದ್ದಾರೆ. ಮುಂದೆ ಮಳೆ ಬಂದರೆ ಈ ತಾತ್ಕಾಲಿಕ ನಿಲ್ದಾಣವೂ ಬಿದ್ದು ಹೋಗುವುದರಿಂದ ಶೀಘ್ರದಲ್ಲೇ ಬಸ್ ನಿಲ್ದಾಣ ನಿರ್ಮಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ನೀರಿನ ಅಭಾವ; 45 ಗ್ರಾಮಗಳಲ್ಲಿ ವಾರಕ್ಕೊಮ್ಮೆಯೂ ಸಿಗ್ತಿಲ್ಲ ಕುಡಿಯುವ ನೀರು

ಜಿಲ್ಲೆಯ ಕರಾವಳಿಯಲ್ಲಿ ಚತುಷ್ಪತ ಹೆದ್ದಾರಿ ಅಗಲೀಕರಣದಿಂದಾಗಿ ಕರಾವಳಿ ಹೆದ್ದಾರಿ ಭಾಗದಲ್ಲಿ ಬರುವ ಗ್ರಾಮಗಳಿಗೆ ಈವರೆಗೂ ನಿಯಮದ ಪ್ರಕಾರ ನಿರ್ಮಾಣವಾಗಬೇಕಾದ ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡುವಲ್ಲಿ ಐಆರ್​ಬಿ ಕಂಪನಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಲಕ್ಷ್ಯ ವಹಿಸಿವೆ. ಹೀಗಿರುವಾಗ ಮನವಿ ಕೊಟ್ಟು ಹತ್ತು ವರ್ಷದಿಂದ ಕಾದು ಸುಸ್ತಾದ ಹಾರವಾಡದ ಗ್ರಾಮದ ಬಡ ಮಹಿಳೆಯರು ತಾತ್ಕಾಲಿಕ ಬಸ್ ನಿಲ್ದಾಣ ನಿರ್ಮಿಸುವ ಮೂಲಕ ನಿರ್ಲಕ್ಷ್ಯ ತೋರಿದ ಅಧಿಕಾರಿಗಳಿಗೆ ಚಾಟಿ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: ರೂಟ್ ಅತ್ಯುತ್ತಮ ಫೀಲ್ಡಿಂಗ್: ಭಾರತಕ್ಕೆ ಬಿಟ್ಟಿಯಾಗಿ ಸಿಕ್ತು 5 ರನ್
VIDEO: ರೂಟ್ ಅತ್ಯುತ್ತಮ ಫೀಲ್ಡಿಂಗ್: ಭಾರತಕ್ಕೆ ಬಿಟ್ಟಿಯಾಗಿ ಸಿಕ್ತು 5 ರನ್
ಹೆಣ್ಮಕ್ಕಳಲ್ಲಿ ಕಾಡುವ ಈ ಎರಡು ರೋಗಕ್ಕೆ ಯೋಗವೇ ಮುಕ್ತಿ, ಅದು ಹೇಗೆ?
ಹೆಣ್ಮಕ್ಕಳಲ್ಲಿ ಕಾಡುವ ಈ ಎರಡು ರೋಗಕ್ಕೆ ಯೋಗವೇ ಮುಕ್ತಿ, ಅದು ಹೇಗೆ?
ಕಷ್ಟಗಳನ್ನ ದೇವರೇ ಕಲ್ಪಿಸುವುದಾ ಅಥವಾ ಸ್ವಯಂಕೃತ ತಪ್ಪಾ?
ಕಷ್ಟಗಳನ್ನ ದೇವರೇ ಕಲ್ಪಿಸುವುದಾ ಅಥವಾ ಸ್ವಯಂಕೃತ ತಪ್ಪಾ?
Daily horoscope: ಇಂದು ಯಾವೆಲ್ಲಾ ರಾಶಿಗಳ ‘ಯೋಗ’ಬಲ ಹೇಗಿದೆ ತಿಳಿಯಿರಿ
Daily horoscope: ಇಂದು ಯಾವೆಲ್ಲಾ ರಾಶಿಗಳ ‘ಯೋಗ’ಬಲ ಹೇಗಿದೆ ತಿಳಿಯಿರಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ