AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡದಲ್ಲಿ ಬಯಲಾಯ್ತು ನಾಡಬಾಂಬ್, ಕಳ್ಳಬಂದೂಕು ತಯಾರಿಕೆಯ ಬೃಹತ್ ಜಾಲ: ಪ್ರಾಣಿ ಬೇಟೆಯ ಕರಾಳ ದಂಧೆಗೆ ತುಮಕೂರು ಬ್ಲಾಸ್ಟ್ ಲಿಂಕ್!

ತುಮಕೂರು ಕಾರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ವೇಳೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕ್ರಮ ನಾಡಬಾಂಬ್ ಹಾಗೂ ಕಳ್ಳಬಂದೂಕು ತಯಾರಿಸುವ ಬೃಹತ್ ಜಾಲ ಪತ್ತೆಯಾಗಿದೆ. ಅಂಕೋಲಾ ಮತ್ತು ಹೊನ್ನಾವರ ಮೂಲದ ಮೂವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಾಣಿ ಬೇಟೆಗಾಗಿ ಕೇವಲ 100 ರಿಂದ 300 ರೂಪಾಯಿಗೆ ಬಾಂಬ್ ಮಾರಾಟ ಮಾಡುತ್ತಿದ್ದ ದಂಧೆಯ ಕರಾಳ ಮುಖ ಬಯಲಾಗಿದ್ದು, ಮೂರು ವಿಶೇಷ ತಂಡಗಳು ತನಿಖೆ ನಡೆಸುತ್ತಿವೆ.

ಉತ್ತರ ಕನ್ನಡದಲ್ಲಿ ಬಯಲಾಯ್ತು ನಾಡಬಾಂಬ್, ಕಳ್ಳಬಂದೂಕು ತಯಾರಿಕೆಯ ಬೃಹತ್ ಜಾಲ: ಪ್ರಾಣಿ ಬೇಟೆಯ ಕರಾಳ ದಂಧೆಗೆ ತುಮಕೂರು ಬ್ಲಾಸ್ಟ್ ಲಿಂಕ್!
ಉತ್ತರ ಕನ್ನಡದಲ್ಲಿ ಬಯಲಾಯ್ತು ನಾಡಬಾಂಬ್, ಕಳ್ಳಬಂದೂಕು ತಯಾರಿಕೆಯ ಬೃಹತ್ ಜಾಲ
ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on: Jun 30, 2026 | 10:37 AM

Share

ಮುಖ್ಯಾಂಶಗಳು

  • ಕಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
  • ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಡಬಾಂಬ್ ತಯಾರಿಕೆಯ ಬೃಹತ್ ಜಾಲ ಬಯಲಾಗಿದೆ.
  • ಕಾಡುಹಂದಿ ಹಾಗೂ ಮೀನುಗಳ ಬೇಟೆಗಾಗಿ ಅಗ್ಗದ ಬೆಲೆಗೆ ಬಾಂಬ್ ಮಾರಾಟ.

ಕಾರವಾರ, ಜೂನ್ 30: ದೇಶದ ಹಲವೆಡೆ ಹಲವು ಉದ್ದೇಶಕ್ಕಾಗಿ ನಾಡಬಾಂಬ್​ಗಳನ್ನು ಬಳಸುತ್ತಾರೆ. ಆದರೆ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ನಾಡಬಾಂಬ್ ತಯಾರಿಕೆ ಮತ್ತು ವಿಭಿನ್ನ ಬಳಕೆಯ ಸ್ಫೋಟಕ ಮಾಹಿತಿ ಸಿಕ್ಕಿದೆ. ಇತ್ತಿಚೆಗೆ ಉತ್ತರ ಕನ್ನಡ ಮೂಲದ ಪಾಗಲ್ ಪ್ರೇಮಿ ನಾಗೇಂದ್ರ ಪ್ರೇಯಸಿಗೆ ಚಾಕುವಿನಿಂದ ಇರಿದು, ತುಮಕೂರು ಬಳಿ ಕಾರಿನಲ್ಲಿ ಬಾಂಬ್ ಸ್ಫೋಟಿಸಿಕೊಂಡ ಘಟನೆಯ ಜಾಡು ಹಿಡಿದು ಹೊರಟ ಎಸ್​ಐಟಿ ತಂಡ, ಮಲೆನಾಡು ಹಾಗೂ ಕರಾವಳಿಯ ದಟ್ಟ ಅರಣ್ಯದ ಒಳಗೆ ಅಡಗಿದ್ದ ನಾಡಬಾಂಬ್ , ಪೆಟ್ರೋಲ್ ಬಾಂಬ್ ಹಾಗೂ ಕಳ್ಳಬಂದೂಕು ತಯಾರಿಸುವ ಬೃಹತ್ ಜಾಲವನ್ನು ಪತ್ತೆಹಚ್ಚಿದ್ದು, ಇಡೀ ಪೊಲೀಸ್ ಇಲಾಖೆಯೇ ಬೆಚ್ಚಿಬಿದ್ದಿದೆ.

60 ಜನರ ವಿಚಾರಣೆ; ಮೂವರು ಪೊಲೀಸ್ ವಶಕ್ಕೆ!

ಬಾಂಬ್ ಸ್ಫೋಟದ ತನಿಖೆ ತೀವ್ರಗೊಳಿಸಿರುವ ಪೊಲೀಸರು ಈವರೆಗೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸುಮಾರು 60ಕ್ಕೂ ಹೆಚ್ಚು ಜನರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಪೈಕಿ ಸ್ಫೋಟದ ಪ್ರಮುಖ ಸೂತ್ರಧಾರಿ ನಾಗೇಂದ್ರಗೌಡನಿಗೆ ಸಹಕರಿಸಿದ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದವರಲ್ಲಿ ಇಬ್ಬರು ಅಂಕೋಲಾ ತಾಲೂಕಿನ ಸರಳಬೈಲ್ ಗ್ರಾಮದವರಾಗಿದ್ದು, ಒಬ್ಬ ನಾಗೇಂದ್ರಗೌಡನ ನಿಕಟ ಸಂಬಂಧಿ ಹಾಗೂ ಇನ್ನೊಬ್ಬ ಆತನ ಆಪ್ತ ಸ್ನೇಹಿತ ಎಂದು ಗುರುತಿಸಲಾಗಿದೆ. ಮೂರನೇ ವ್ಯಕ್ತಿಯನ್ನು ಹೊನ್ನಾವರ ತಾಲೂಕಿನ ಚಂದಾವರ ಮೂಲದವನೆಂದು ಗುರುತಿಸಲಾಗಿದ್ದು, ಸದ್ಯ ಇವರನ್ನು ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ತನಿಖೆಗೆ ಮೂರು ಪ್ರತ್ಯೇಕ ತಂಡಗಳ ರಚನೆ

ಬಾಂಬ್ ಪೂರೈಕೆಯ ಮೂಲ ಹಾಗೂ ಇದರ ಹಿಂದಿರುವ ಕಿಂಗ್‌ಪಿನ್‌ಗಳನ್ನು ಪತ್ತೆಹಚ್ಚಲು ಒಟ್ಟು ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ತುಮಕೂರು ಪೊಲೀಸ್ ತಂಡ, ಅಂಕೋಲಾ ಸಿಪಿಐ ತಂಡ ಹಾಗೂ ಗೋಕರ್ಣ ಸಿಪಿಐ ತಂಡಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಕಾಡಿನ ಪ್ರದೇಶಗಳು ಹಾಗೂ ಸಂಶಯಾಸ್ಪದ ಸ್ಥಳಗಳ ಮೇಲೆ ನಿಗಾ ಇಟ್ಟಿವೆ.

ಡಿಜಿಟಲ್ ಸಾಕ್ಷಿ ಸಿಗದಂತೆ ನಾಗೇಂದ್ರನ ಸಖತ್ ಪ್ಲಾನ್!

ಪ್ರಾಥಮಿಕ ತನಿಖೆಯಲ್ಲಿ ಆರೋಪಿ ನಾಗೇಂದ್ರಗೌಡ ಬಾಂಬ್ ಖರೀದಿ ಮತ್ತು ಡೀಲಿಂಗ್ ವೇಳೆ ಅತ್ಯಂತ ಚಾಣಾಕ್ಷತನ ಪ್ರದರ್ಶಿಸಿರುವುದು ಬೆಳಕಿಗೆ ಬಂದಿದೆ. ಈತ ಬಾಂಬ್ ಖರೀದಿಸಿದವರೊಂದಿಗೆ ಎಲ್ಲೂ ಮೊಬೈಲ್ ಮೂಲಕ ಸಂಪರ್ಕ ಸಾಧಿಸಿಲ್ಲ. ಪೊಲೀಸರಿಗೆ ಕಾಲ್ ಲಿಸ್ಟ್ ಸಿಗದಂತೆ ಮಾಡಲು ಖುದ್ದು ತಾನೇ ನೇರವಾಗಿ ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದ ಎಂಬ ಆಘಾತಕಾರಿ ವಿಷಯ ಗೊತ್ತಾಗಿದೆ.

ಕೇವಲ 100 ರಿಂದ 300 ರೂಪಾಯಿಗೆ ಸಿಗುತ್ತೆ ನಾಡಬಾಂಬ್!

ಯಲ್ಲಾಪುರ ಹಾಗೂ ಹಳಿಯಾಳ ಭಾಗದ ದಟ್ಟ ಅರಣ್ಯದ ನಡುವೆ ಈ ನಾಡಬಾಂಬ್‌ಗಳನ್ನು ಅಕ್ರಮವಾಗಿ ತಯಾರಿಸಲಾಗುತ್ತಿದ್ದು, ಕೇವಲ 100 ರಿಂದ 300 ರೂಪಾಯಿಗಳ ಅಗ್ಗದ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ರಾಸಾಯನಿಕ ನೈಟ್ರೇಟ್ ಬಳಕೆಯ ಪ್ರಮಾಣದ ಮೇಲೆ ಈ ಬಾಂಬ್‌ಗಳ ತೀವ್ರತೆ ನಿರ್ಧಾರವಾಗುತ್ತದೆ. ಈ ಬಾಂಬ್ ಹಾಗೂ ಗನ್‌ಗಳನ್ನು ಪ್ರಮುಖವಾಗಿ ಪ್ರಾಣಿಗಳ ಬೇಟೆಗಾಗಿ ಬಳಸಲಾಗುತ್ತಿದೆ.

ಕಾಡುಹಂದಿ ಬೇಟೆಗೆ ಮಾಂಸದ ಬಾಂಬ್

ಕೋಳಿಯ ಮಾಂಸದ ಒಳಗೆ ನಾಡಬಾಂಬ್ ಇಟ್ಟು ಕಾಡಿನ ಅಂಚಿನಲ್ಲಿ ಇಡಲಾಗುತ್ತದೆ. ಆಹಾರ ಅರಸಿ ಬರುವ ಕಾಡುಹಂದಿ ಇದನ್ನು ಅಗಿಯುತ್ತಿದ್ದಂತೆ ಒತ್ತಡಕ್ಕೆ ಸಿಲುಕಿ ಬಾಂಬ್ ಒಮ್ಮೆಲೆ ಬ್ಲಾಸ್ಟ್ ಆಗುತ್ತದೆ. ತಲೆ ಹಾಗೂ ಮುಖದ ಭಾಗ ಛಿದ್ರಗೊಂಡು ಹಂದಿ ಸ್ಥಳದಲ್ಲೇ ಸಾವನ್ನಪ್ಪುತ್ತದೆ. ಹೀಗೆ ಬೇಟೆಯಾಡಿದ ಒಂದು ಹಂದಿ ಕಳ್ಳಮಾರುಕಟ್ಟೆಯಲ್ಲಿ 7 ರಿಂದ 8 ಸಾವಿರ ರೂಪಾಯಿಗೆ ರಹಸ್ಯವಾಗಿ ಮಾರಾಟವಾಗುತ್ತದೆ.

ಇದನ್ನೂ ಓದಿ ಹುಚ್ಚಾಟ ಮೆರೆದು ದಾರುಣ ಅಂತ್ಯಕಂಡ ಪಾಗಲ್​​ ಪ್ರೇಮಿ: ನಾಗೇಂದ್ರಗೆ ಸ್ಫೋಟಕ ಸಿಕ್ಕಿದ್ದೇಗೆಂದು ಖಾಕಿ ತನಿಖೆ

ಜಲಚರಗಳ ಬೇಟೆಗೆ ಪೆಟ್ರೋಲ್ ಬಾಂಬ್

ಪ್ಲಾಸ್ಟಿಕ್‌ನಲ್ಲಿ ಪೆಟ್ರೋಲ್ ಬಾಂಬ್ ಸುತ್ತಿ ನೀರಿನಾಳಕ್ಕೆ ಬಿಟ್ಟು ಬ್ಲಾಸ್ಟ್ ಮಾಡಲಾಗುತ್ತದೆ. ಈ ಸ್ಫೋಟದ ತೀವ್ರತೆಗೆ ನೂರಾರು ಮೀನುಗಳು ಸತ್ತು ಮೇಲೇಳುತ್ತವೆ ಅಥವಾ ಪ್ರಜ್ಞೆ ತಪ್ಪಿ ಬಲೆಗೆ ಬೀಳುತ್ತವೆ.

ನಾಡಬಂದೂಕಿನ ಬಳಕೆ

ಉಡಾ, ಕಾಡುಕೋಣ, ಕಡವೆ ಬೇಟೆಗೆ ನಾಡಬಂದೂಕು ಬಳಸಲಾಗುತ್ತಿದ್ದು, ಇತ್ತೀಚೆಗೆ ಪೊಲೀಸರ ದಾಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇವುಗಳನ್ನು ತೋಟ ಹಾಗೂ ಗದ್ದೆಗಳ ಮಣ್ಣಿನಲ್ಲಿ ಬಚ್ಚಿಡಲಾಗುತ್ತಿದೆ. ಸದ್ಯ ಪೊಲೀಸರು ಈ ಇಡೀ ಅಕ್ರಮ ಜಾಲದ ಬೇರು ಸವೆಯಲು ತನಿಖೆ ತೀವ್ರಗೊಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!