AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿಯಲ್ಲೂ ಕಾಣಿಸಿಕೊಂಡ ಮಡ್ರಾಸ್ ಐ ಸೋಂಕು: ಮೀನುಗಾರಿಕೆಗೆ ತೆರಳಲು ಅಡ್ಡಿ

Uttara Kannada News: ದೇಶದೆಲ್ಲೆಡೆ ಜನರ ಕಣ್ಣು ಕೆಂಪು ಮಾಡಿರುವ ಮಡ್ರಾಸ್ ಐ ಸೋಂಕು ಇದೀಗ ಉತ್ತರಕನ್ನಡ ಕರಾವಳಿಯಲ್ಲಿ ಕಾಣಿಸಿಕೊಂಡಿದೆ. ಆದರೆ ಇದೀಗ ಹೊರರಾಜ್ಯದಿಂದ ಬರುತ್ತಿರುವ ಕಾರ್ಮಿಕರಲ್ಲಿ ಕಣ್ಣುಬೇನೆ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದು ಮೀನುಗಾರಿಕೆಗೆ ತೆರಳಲು ಅಡ್ಡಿಯುಂಟು ಮಾಡಿದೆ.

ಕರಾವಳಿಯಲ್ಲೂ ಕಾಣಿಸಿಕೊಂಡ ಮಡ್ರಾಸ್ ಐ ಸೋಂಕು: ಮೀನುಗಾರಿಕೆಗೆ ತೆರಳಲು ಅಡ್ಡಿ
ಮಡ್ರಾಸ್ ಐ ಸೋಂಕು
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಗಂಗಾಧರ​ ಬ. ಸಾಬೋಜಿ

Updated on: Aug 05, 2023 | 9:24 PM

ಉತ್ತರ ಕನ್ನಡ, ಆಗಸ್ಟ್​ 05: ಎರಡು ತಿಂಗಳ ನಿಷೇಧ ಅವಧಿ ಮುಗಿದು ಕರಾವಳಿಯಲ್ಲಿ ಅಗಸ್ಟ್ 1 ರಿಂದ ಯಾಂತ್ರೀಕೃತ ಮೀನುಗಾರಿಕೆ ಆರಂಭವಾಗಿದೆ. ಮಳೆಗಾಲದ ಆರಂಭದಲ್ಲಿ ರಜೆಗೆ ಊರುಗಳಿಗೆ ತೆರಳಿದ್ದ ಆಳಸಮುದ್ರ ಮೀನುಗಾರಿಕಾ ಬೋಟುಗಳ ಕಾರ್ಮಿಕರು ಇದೀಗ ಕೆಲಸಕ್ಕೆ ಮರಳುತ್ತಿದ್ದು ಬೋಟುಗಳು ಮೀನುಗಾರಿಕೆಗೆ ತೆರಳಲು ಸನ್ನದ್ಧವಾಗುತ್ತಿವೆ. ಆದರೆ ಇದೀಗ ಹೊರರಾಜ್ಯದಿಂದ ಬರುತ್ತಿರುವ ಕಾರ್ಮಿಕರಲ್ಲಿ ಕಣ್ಣುಬೇನೆ ಸಮಸ್ಯೆ (Madras eye infection) ಕಾಣಿಸಿಕೊಳ್ಳುತ್ತಿದ್ದು ಮೀನುಗಾರಿಕೆಗೆ ತೆರಳಲು ಅಡ್ಡಿಯುಂಟು ಮಾಡಿದೆ.

ದೇಶದೆಲ್ಲೆಡೆ ಜನರ ಕಣ್ಣು ಕೆಂಪು ಮಾಡಿರುವ ಮಡ್ರಾಸ್ ಐ ಸೋಂಕು ಇದೀಗ ಉತ್ತರಕನ್ನಡ ಕರಾವಳಿಯಲ್ಲಿ ಕಾಣಿಸಿಕೊಂಡಿದೆ. ರಾಜ್ಯದಲ್ಲಿ ಮೀನುಗಾರಿಕೆ ಮೇಲಿನ ನಿಷೇಧ ಅವಧಿ ಮುಗಿದು ಯಾಂತ್ರೀಕೃತ ಬೋಟುಗಳು ಮೀನುಗಾರಿಕೆಗೆ ಹೊರಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಕಾರವಾರದ ಬೈತಕೋಲ ಮೀನುಗಾರಿಕಾ ಬಂದರಿನಲ್ಲಿ ಪರ್ಸಿನ್ ಹಾಗೂ ಟ್ರಾಲರ್ ಬೋಟುಗಳು ಮೀನುಗಾರಿಕೆಗೆ ಮುಂದಾಗಿವೆ.

ಇದನ್ನೂ ಓದಿ: ಕಾರವಾರ: ಕಡಲತೀರದಲ್ಲಿ ಸಿಲಿಂಡರ್ ರೂಪದ ವಸ್ತು ಪತ್ತೆ, ಜನರಲ್ಲಿ ಆತಂಕ

ಆಳಸಮುದ್ರಕ್ಕೆ ತೆರಳುವ ಬೋಟುಗಳಲ್ಲಿ ಹೆಚ್ಚಿನದಾಗಿ ಹೊರರಾಜ್ಯದ ಕಾರ್ಮಿಕರೇ ಕೆಲಸಗಾರರಾಗಿದ್ದು ಓರಿಸ್ಸಾ, ಜಾರ್ಖಂಡ್, ಛತ್ತೀಸ್‌ಗಢ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸುತ್ತಾರೆ. ಇದೀಗ ಹೀಗೆ ಬೋಟ್ ಕೆಲಸಕ್ಕೆಂದು ಆಗಮಿಸುತ್ತಿರುವ ನೂರಾರು ಕಾರ್ಮಿಕರಲ್ಲಿ ಕಣ್ಣುಬೇನೆ ಸೋಂಕು ಕಾಣಿಸಿಕೊಳ್ಳುತ್ತಿದೆ. ಬೋಟುಗಳಲ್ಲಿ 20 ರಿಂದ 30 ಮಂದಿ ಕಾರ್ಮಿಕರು ಒಟ್ಟಾಗಿ ಇರುವುದರಿಂದ ಕಣ್ಣುಬೇನೆ ಸೋಂಕು ಇದೀಗ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತಿದ್ದು, ಸ್ಥಳೀಯ ಮೀನುಗಾರರಿಗೂ ಸಮಸ್ಯೆ ಉಂಟುಮಾಡುತ್ತಿದೆ.

ಒಮ್ಮೆ ಯಾಂತ್ರೀಕೃತ ಬೋಟುಗಳು ಆಳಸಮುದ್ರ ಮೀನುಗಾರಿಕೆಗೆ ಹೊರಟರೆ ವಾರಗಳ ಕಾಲ ಸಮುದ್ರದಲ್ಲೇ ಕಾಲ ಕಳೆಯುತ್ತವೆ. ಇದೀಗ ಕಾರ್ಮಿಕರಲ್ಲಿ ಕಣ್ಣುಬೇನೆ ಸೋಂಕು ಕಾಣಿಸಿಕೊಂಡಿರುವುದರಿಂದ ಸಾಕಷ್ಟು ಮಂದಿ ಕಾರ್ಮಿಕರು ಕೆಲಸ ಮಾಡಲಾಗದೇ ಪರದಾಡುವಂತಾಗಿದ್ದು, ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತಿರುವುದರಿಂದ ಮೀನುಗಾರಿಕೆಗೆ ತೆರಳುವುದಕ್ಕೂ ಇದೀಗ ಸಮಸ್ಯೆ ಎದುರಾಗಿದೆ.

ಇದನ್ನೂ ಓದಿ: ಕ್ಷುಲ್ಲಕ ಕಾರಣಕ್ಕೆ ಸಮುದಾಯದವರಿಂದಲೇ 2 ಕುಟುಂಬಗಳಿಗೆ ಬಹಿಷ್ಕಾರ: ನ್ಯಾಯಕ್ಕಾಗಿ ಜಿಲ್ಲಾಧಿಕಾರಿ ಮೊರೆ ಹೋದ ಕುಟುಂಬಸ್ಥರು

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಆರೋಗ್ಯಾಧಿಕಾರಿಗಳು, ಕಣ್ಣುಬೇನೆ ಕಾಣಿಸಿಕೊಂಡಿರುವ ಬೈತಖೋಲ ಬೋಟಿನ ಕಾರ್ಮಿಕರನ್ನ ತಪಾಸಣೆಗೊಳಪಡಿಸಲು ಆರೋಗ್ಯ ಸಿಬ್ಬಂದಿಗೆ ಸೂಚಿಸಲಾಗಿದೆ. ಸೋಂಕು ಕಾಣಿಸಿಕೊಂಡವರು ಇತರರಿಂದ ಅಂತರ ಕಾಯ್ದುಕೊಳ್ಳಬೇಕಿದ್ದು, ವಾರದೊಳಗೆ ಕಡಿಮೆಯಾಗದಿದ್ದಲ್ಲಿ ಕಣ್ಣಿನ ವೈದ್ಯರನ್ನ ಸಂಪರ್ಕಿಸಿ ಎಂದು ಸಲಹೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಕಣ್ಣುಬೇನೆ ಸೋಂಕಿನ ಪ್ರಕರಣಗಳು ಅಲ್ಲಲ್ಲಿ ವರದಿಯಾಗುತ್ತಿದ್ದು, ಸಾರ್ವಜನಿಕರು ಅಗತ್ಯ ಮುಂಜಾಗ್ರತೆವಹಿಸಿ ಸೋಂಕು ತಗಲದಂತೆ ಎಚ್ಚರಿಕೆ ವಹಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ