AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾವಿ ತೋಡಲು ಗೌರಿ ನಾಯ್ಕ್​ಗೆ ಅಡ್ಡಿ: ಸ್ಪಷ್ಟನೆ ನೀಡಿದ ಉತ್ತರ ಕನ್ನಡ ಸಿಇಒ

ಮಾಹಿತಿ ಪ್ರಕಾರ ಬಾವಿ ತೋಡಲು ಗೌರಿ ನಾಯ್ಕ್​ ಯಾವುದೇ ಪರವಾನಗಿ ಪಡೆದಿಲ್ಲ. ಗೌರಿ ನಾಯ್ಕ್ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಅದರಲ್ಲಿ ಎರಡು ಮಾತಿಲ್ಲ. ಆದರೆ ಸರ್ಕಾರಿ ಜಾಗದಲ್ಲಿ ಏನೇ ಮಾಡಬೇಕಾದರೂ ಪರವಾನಗಿ ಬೇಕು. ಸಂಬಂಧಪಟ್ಟ ಇಲಾಖೆಯಿಂದ ಪರವಾನಗಿ ಪಡೆಯಲೇಬೇಕು. ಗೌರಿ ನಾಯ್ಕ್ ಬಳಿ ಪರವಾನಗಿ ಇದ್ದರೆ ಅಧಿಕಾರಿಗಳಿಗೆ ತೋರಿಸಲಿ. ಪರವಾನಗಿ ಪಡೆದರೆ ಮಾತ್ರ ಬಾವಿ ತೆಗೆಯಲು ಅವಕಾಶ ಕೊಡುತ್ತೇವೆ ಎಂದು ಸಿಇಒ ಈಶ್ವರ ಕಾಂದೂ ಸ್ಪಷ್ಟನೆ ನೀಡಿದ್ದಾರೆ.

ಬಾವಿ ತೋಡಲು ಗೌರಿ ನಾಯ್ಕ್​ಗೆ ಅಡ್ಡಿ: ಸ್ಪಷ್ಟನೆ ನೀಡಿದ ಉತ್ತರ ಕನ್ನಡ ಸಿಇಒ
ಗೌರಿ ನಾಯ್ಕ್, ಸಿಇಒ ಈಶ್ವರ ಕಾಂದೂ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Feb 12, 2024 | 7:50 PM

Share

ಉತ್ತರ ಕನ್ನಡ, ಫೆಬ್ರವರಿ 12: ಏಕಾಂಗಿಯಾಗಿ ಬಾವಿ ತೋಡುತಿದ್ದ ಗೌರಿ ನಾಯ್ಕ್ (Gouri Nayk)​ ಅವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಈಗಾಗಲೇ ನೋಟಿಸ್​ ನೀಡಿದೆ. ಸದ್ಯ ಈ ವಿಚರವಾಗಿ ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕಾಂದೂ ಪ್ರತಿಕ್ರಿಯಿಸಿದ್ದು, ಮಾಹಿತಿ ಪ್ರಕಾರ ಬಾವಿ ತೋಡಲು ಯಾವುದೇ ಪರವಾನಗಿ ಪಡೆದಿಲ್ಲ. ಗೌರಿ ನಾಯ್ಕ್ ಒಳ್ಳೇ ಕೆಲಸ ಮಾಡುತ್ತಿದ್ದಾರೆ ಅದರಲ್ಲಿ ಎರಡು ಮಾತಿಲ್ಲ. ಆದರೆ ಸರ್ಕಾರಿ ಜಾಗದಲ್ಲಿ ಏನೇ ಮಾಡಬೇಕಾದರೂ ಪರವಾನಗಿ ಬೇಕು. ಸಂಬಂಧಪಟ್ಟ ಇಲಾಖೆಯಿಂದ ಪರವಾನಗಿಯನ್ನು ಪಡೆಯಲೇಬೇಕು. ಗೌರಿ ನಾಯ್ಕ್ ಬಳಿ ಪರವಾನಗಿ ಇದ್ದರೆ ಅಧಿಕಾರಿಗಳಿಗೆ ತೋರಿಸಲಿ. ಪರವಾನಗಿ ಪಡೆದರೆ ಮಾತ್ರ ಬಾವಿ ತೆಗೆಯಲು ಅವಕಾಶ ಕೊಡುತ್ತೇವೆ. ಇಲ್ಲದಿದ್ರೆ ಬಾವಿ ತೆಗೆಯಲು ಅನುಮತಿ ಕೊಡಲು ಆಗಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಕುಡಿಯುವ ನೀರಿನ ಸಮಸ್ಯೆಯನ್ನು ಅಧಿಕಾರಿಗಳು ಬಗೆಹರಿಸುತ್ತಾರೆ. ನಾಳೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳ ವೀಕ್ಷಣೆಗೆ ಹೋಗಲಿದ್ದಾರೆ. ಅವರ ಮಾಹಿತಿ ಬಂದ ಬಳಿಕ ಪರವಾನಿಗೆ ಕೊಡಬೇಕೊ ಕೊಡಬಾರದು ಯೋಚನೆ ಮಾಡುತ್ತೆವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾರವಾರ: ಮಕ್ಕಳ ದಾಹ ನೀಗಿಸಲು ಏಕಾಂಗಿಯಾಗಿ ಬಾವಿ ತೋಡುತಿದ್ದ ಮಹಿಳೆಗೆ ಅಧಿಕಾರಿಗಳಿಂದ ವಿಘ್ನ

ಜಿಲ್ಲೆಯ ಶಿರಸಿಯ ಗಣೇಶನಗರದಲ್ಲಿ ಅಂಗನವಾಡಿ ಮಕ್ಕಳಿಗೆ ಕುಡಿಯುವ ನೀರಿನ ಸಲವಾಗಿ ಏಕಾಂಗಿಯಾಗಿ ಗೌರಿ ಅವರು ಬಾವಿ ತೋಡುತ್ತಿದ್ದಾರೆ. ಆದರೆ ಬಾವಿ ತೋಡುವುದನ್ನು ನಿಲ್ಲಿಸಿ ಮುಚ್ಚುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿರಸಿ ವಿಭಾಗದ ಸಿಡಿಪಿಓ ವೀಣಾ ಶಿರ್ಸಿಕರ್​ ಸೂಚನೆ ನೀಡಿದ್ದಾರೆ. ಇಲಾಖೆಯ ವಿರುದ್ಧ ಸುದ್ದಿ ಬಂದಿದ್ದಕ್ಕೆ ಭದ್ರತೆ ನೆಪವೊಡ್ಡಿ ಬಾವಿ ಮುಚ್ಚಲು ಸೂಚನೆ ನೀಡಲಾಗಿದೆ.

ಮೊದಲೇ ಮಾಹಿತಿ ನೀಡಿ ಅನುಮತಿ ಪಡೆದರೂ ಮಾಧ್ಯಮದಲ್ಲಿ ಸುದ್ದಿ ಬಂದಿದ್ದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸೇಡು ತೀರಿಸಿಕೊಂಡರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಮಕ್ಕಳಿಗೆ ಕುಡಿಯುವ ನೀರಿನ ಕೊರತೆ ಕುರಿತು ಇಲಾಖೆ ನಿರ್ಲಕ್ಷದ ಸುದ್ದಿ ಪ್ರಸಾರವಾಗಿದ್ದಕ್ಕೆ ಅಧಿಕಾರಿಗಳಿಂದ ಬಾವಿ ಮುಚ್ಚುವ ಸೂಚನೆ ಹಿನ್ನಲೆಯಲ್ಲಿ ಅರ್ಧಕ್ಕೆ ಬಾವಿ ತೋಡುವುದನ್ನು ನಿಲ್ಲಿಸಿದ್ದಾರೆ.

ಇದನ್ನೂ ಓದಿ: ನೀರು ಸಿಗುವವರೆಗೂ ಬಾವಿ ತೋಡುವೆ -ಅಂಗನವಾಡಿ ಮಕ್ಕಳ ದಣಿವು ತಣಿಸಲು ಮುಂದಾದ ಏಕಾಂಗಿ ಮಹಿಳೆ ಗೌರಿ

ಪ್ರತಿಫಲಾಪೆಕ್ಷಿಸದೆ ಸಮಾಜಕ್ಕೆ ಕೊಡುಗೆ ಕೊಡುವವರು ಬಹಳ ಕಡಿಮೆ.‌ ಅಂತಹದರಲ್ಲಿ ಮಕ್ಕಳ ನೀರಿನ ದಾಹ ನೀಗಿಸಲು, ತನ್ನ ನಿರಂತರ ಶ್ರಮದಿಂದ 60 ಅಡಿ ಬಾವಿ ತೊಡಲು ಮುಂದಾದ ಮಹಿಳೆಗೆ, ಅಧಿಕಾರಿಗಳು ಇಲ್ಲ ಸಲ್ಲದ ಕಟ್ಟಪ್ಪಣೆ ವಿಧಿಸುತ್ತಿರುವುದು ಸಾರ್ವಜನಿಕರ ಕಣ್ಣು ಕೆಂಪಗಾಗಿಸಿದ್ದು ಅಧಿಕಾರಿಗಳು ಮುಂದೆ ಯಾವ ಕ್ರಮ ಕೈಗೊಳ್ಳುತ್ತಾರೆ ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ