AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಕೊಮುಗಲಭೆ ಸುಳಿವು ನೀಡಿದ ಗುಪ್ತಚರ ಇಲಾಖೆ, ಕಠಿಣ ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ!

ಮುರಿನ್ ಕಟ್ಟೆ ವಿವಾದದ ಬಳಿಕ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಈ ಮಧ್ಯೆ ಗುಪ್ತಚರ ಇಲಾಖೆ ಭಟ್ಕಳದಲ್ಲಿ ಕೊಮುಗಲಭೆಯ ಸುಳಿವು ನೀಡಿದೆ. ಈ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ, 60 ರೌಡಿ ಶೀಟರ್‌ಗಳಿಗೆ ನೋಟಿಸ್​ ನೀಡಿದೆ. ಕೊಮುಗಲಭೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಮುಚ್ಚಳಿಕೆ ಬರೆದು ಕೊಡುವಂತೆ ಸೂಚಿಸಲಾಗಿದೆ.

ಕಾರವಾರ: ಕೊಮುಗಲಭೆ ಸುಳಿವು ನೀಡಿದ ಗುಪ್ತಚರ ಇಲಾಖೆ, ಕಠಿಣ ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ!
ಮೂರಿನ್ ಕಟ್ಟೆImage Credit source: tv9 kannada
ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on:Jun 29, 2026 | 8:32 PM

Share

ಮುಖ್ಯಾಂಶಗಳು

  • ಭಟ್ಕಳದಲ್ಲಿ ಕೊಮುಗಲಭೆಯ ಸುಳಿವು ನೀಡಿದ ಗುಪ್ತಚರ ಇಲಾಖೆ
  • ಗುಪ್ತಚರ ಇಲಾಖೆ ವರದಿ ಬೆನ್ನಲ್ಲೇ ಜಿಲ್ಲಾಡಳಿತ ಅಲರ್ಟ್​
  • 60 ರೌಡಿಶೀಟರ್​ಗಳಿಗೆ ತಹಶೀಲ್ದಾರ್ ನೋಟಿಸ್

ಕಾರವಾರ, ಜೂನ್​​ 29: ಮೂರಿನ್ ಕಟ್ಟೆ ಧ್ವಂಸ ವಿವಾದ (Moorin Katte Controversy) ಇತ್ತೀಚೆಗೆ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಆ ಬಳಿಕ ಉತ್ತರ ಕನ್ನಡದ (Uttara kannada) ಭಟ್ಕಳದಲ್ಲಿ ಇಂದಿಗೂ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಹೀಗಿರುವಾಗ ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಭಟ್ಕಳದಲ್ಲಿ ಕೋಮು ಗಲಭೆ ನಡೆಯುವ ಸಾಧ್ಯತೆ ಕುರಿತಾಗಿ ಗುಪ್ತಚರ ಇಲಾಖೆ (ಇಂಟೆಲಿಜೆನ್ಸ್) ಸುಳಿವು ನೀಡಿದೆ. ಗುಪ್ತಚರ ಇಲಾಖೆ ಸುಳಿವು ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ ಹಾಗೂ ಭಟ್ಕಳ ಶಹರ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

60 ರೌಡಿ ಶೀಟರ್‌ಗಳಿಗೆ ನೋಟಿಸ್ 

ಗುಪ್ತಚರ ಇಲಾಖೆ ವರದಿ ಮತ್ತು ಪೊಲೀಸರು ನೀಡಿದ ಮಾಹಿತಿ ಆಧಾರದ ಮೇಲೆ ಭಟ್ಕಳ ತಹಶೀಲ್ದಾರ್ ಪ್ರವೀಣ್ ಕರಾಂಡೆ ಶಹರದ ಒಟ್ಟು 60 ರೌಡಿ ಶೀಟರ್‌ಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಇದರಲ್ಲಿ 40 ಮುಸ್ಲಿಂ ಹಾಗೂ 20 ಹಿಂದೂ ಸಮುದಾಯಕ್ಕೆ ಸೇರಿದ ರೌಡಿ ಶೀಟರ್‌ಗಳು ಸೇರಿದ್ದಾರೆ.

ಇದನ್ನೂ ಓದಿ: ಮೂರಿನ್ ಕಟ್ಟೆ ವಿವಾದ: ಬಕ್ರಿದ್ ಹಬ್ಬದ ದಿನ ಮದ್ಯ ಮಾರಾಟ ನಿಷೇಧ; ಸಂಘರ್ಷಕ್ಕೆ ಕಾರಣವಾದ ವಿಡಿಯೋ ವೈರಲ್​

ಗಣೇಶ ಹಬ್ಬ, ಈದ್ ಮಿಲಾದ್ ಸೇರಿದಂತೆ ಯಾವುದೇ ಹಬ್ಬಗಳ ಸಂದರ್ಭದಲ್ಲಿ ಯಾವುದೇ ರೀತಿಯ ಕೋಮು ಗಲಭೆ ಅಥವಾ ಅಶಾಂತಿ ಸೃಷ್ಟಿಸುವ ಕೃತ್ಯಗಳಲ್ಲಿ ಭಾಗಿಯಾಗುವುದಿಲ್ಲ ಮತ್ತು ಸಮಾಜದಲ್ಲಿ ದುರ್ವರ್ತನೆ ತೋರುವುದಿಲ್ಲ ಎಂದು ತಲಾ 50 ಸಾವಿರ ರೂಪಾಯಿಗಳ ಮುಚ್ಚಳಿಕೆ ಬಾಂಡ್ ಬರೆದುಕೊಡುವಂತೆ ನೋಟಿಸ್‌ನಲ್ಲಿ ಸೂಚನೆ ನೀಡಿದ್ದಾರೆ.

ತಹಶೀಲ್ದಾರ್ ನೀಡಿರುವ ನೋಟಿಸ್​ ಬಗ್ಗೆ ಕೆಲವರಿಂದ ಆಕ್ಷೇಪ

ಇನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 129(ಇ) ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ. ಆದರೆ, ತಹಶೀಲ್ದಾರ್ ನೀಡಿರುವ ಈ ನೋಟಿಸ್‌ಗೆ ಕೆಲವರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ, ಶಾಂತಿ ಸುವ್ಯವಸ್ಥೆ ಕಾಪಾಡಲು ನಿಮ್ಮಿಂದ ಏಕೆ ಬಾಂಡ್ ಬರೆಸಿಕೊಳ್ಳಬಾರದು? ಎಂಬ ಕುರಿತು ವಿಚಾರಣೆ ನಡೆಸಲು ತಹಶೀಲ್ದಾರ್ ನಿರ್ಧರಿಸಿದ್ದಾರೆ. ಆಕ್ಷೇಪಣೆ ಸಲ್ಲಿಸಿರುವ ಹಾಗೂ ನೋಟಿಸ್ ನೀಡಿದವರಿಗೆ ಇಂದು ಕೋರ್ಟ್‌ಗೆ ಖುದ್ದಾಗಿ ಹಾಜರಾಗುವಂತೆ ತಹಶೀಲ್ದಾರ್ ಖಡಕ್ ಸೂಚನೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:30 pm, Mon, 29 June 26

Follow Us
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ
ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ
ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ
5 ವರ್ಷ ಲವರ್​ನನ್ನು ಸಾಕಿ ಮದುವೆಯಾದಳು! ಆದ್ರೆ ಆತ ಬೇರೊಬ್ಬಳೊಂದಿಗೆ ಪರಾರಿ
5 ವರ್ಷ ಲವರ್​ನನ್ನು ಸಾಕಿ ಮದುವೆಯಾದಳು! ಆದ್ರೆ ಆತ ಬೇರೊಬ್ಬಳೊಂದಿಗೆ ಪರಾರಿ
ಕಲುಷಿತ ಕಾವೇರಿ ನೀರಿನ ಪೂರೈಕೆಗೆ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ
ಕಲುಷಿತ ಕಾವೇರಿ ನೀರಿನ ಪೂರೈಕೆಗೆ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ