AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡಕ್ಕೆ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯ ಕನಸು ನನಸಾಗಲು ಬೇಕಿನ್ನೆಷ್ಟು ಕಾಲ?

ಮುಖ್ಯಮಂತ್ರಿಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಹುಬ್ಬಳ್ಳಿಯಲ್ಲಿ ಏಮ್ಸ್ ಸ್ಥಾಪಿಸಲು ಕನಸು ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರ ಕನಸೇನಾದರೂ ಫಲಿಸಿದಲ್ಲಿ ಉತ್ತರ ಕನ್ನಡಕ್ಕೆ ಈಬಾರಿಯೂ ಮಲ್ಟಿ ಸ್ಪೆಶಲ್ ಆಸ್ಪತ್ರೆ ಹೋರಾಟಕ್ಕೆ ಹಿನ್ನೆಡೆ ಆಗುವ ಸಾಧ್ಯತೆಯೂ ಇದೆ.

ಉತ್ತರ ಕನ್ನಡಕ್ಕೆ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯ ಕನಸು ನನಸಾಗಲು ಬೇಕಿನ್ನೆಷ್ಟು ಕಾಲ?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಧಾನಿ ನರೇಂದ್ರ ಮೋದಿ
TV9 Web
| Updated By: ಆಯೇಷಾ ಬಾನು|

Updated on: Aug 30, 2021 | 7:06 AM

Share

ಕಾರವಾರ: ಮಲೆನಾಡು, ಕರಾವಳಿ ಮತ್ತು ಅರೆ ಬಯಲುಸೀಮೆಯನ್ನು ಒಳಗೊಂಡಿರುವ ವಿಶಾಲ ಜಿಲ್ಲೆ ಉತ್ತರ ಕನ್ನಡಕ್ಕೊಂದು ತುರ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಕೆನ್ನುವ ಆಸೆ ಮತ್ತೊಮ್ಮೆ ಚಿಗುರೊಡೆದಿದೆ. ಇತ್ತೀಚಿಗೆ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಕಾರ್ಡಿಯೋಲಜಿ ವಿಭಾಗದ ಮುಖ್ಯಸ್ಥರಾದ ಡಾ.ಪದ್ಮನಾಭ ಕಾಮತ್ ಅವರು ಸಾಮಾಜಿಕ ಜಾಲತಾಣದ ಖಾತೆಯಲ್ಲಿ, ಉತ್ತರ ಕನ್ನಡ ಜಿಲ್ಲೆಗೊಂದು ತುರ್ತು ಆಸ್ಪತ್ರೆಯ ಅಗತ್ಯತೆಯಿದೆ. ಆದರೆ ಇದಕ್ಕೆ ನನ್ನೊಬ್ಬನ ಪ್ರಯತ್ನ ಸಾಲುವುದಿಲ್ಲ. ಜನರ ಬೆಂಬಲವೂ ಬೇಕಿದೆ ಎಂದು ಬರೆದುಕೊಂಡಿದ್ದಾರೆ. ಜತೆಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿ ಉತ್ತರ ಕನ್ನಡಕ್ಕೊಂದು ಏಮ್ಸ್ ಅಗತ್ಯತೆಯಿದೆ ಎಂದು ಹಂಚಿಕೊಂಡಿದ್ದಾರೆ.

ಈಹಿಂದೆ ಕುಮಟಾ ಶಾಸಕ ದಿನಕರ ಶೆಟ್ಟಿ ಉದ್ಯಮಿ ಬಿ.ಆರ್.ಶೆಟ್ಟಿಯವರ ಜತೆ ಮಾತುಕತೆ ನಡೆಸಿ ಖಾಸಗಿ ಆಸ್ಪತ್ರೆ ನಿರ್ಮಾಣದ ಕುರಿತು ಚರ್ಚಿಸಿದ್ದರು. ಕುಮಟಾ ತಾಲೂಕಿನ ಮಿರ್ಜಾನ್ ಬಳಿ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಕೂಡ ಬಹುತೇಕ ಖಚಿತಪಡಿಸಿದ್ದರು. ಹೀಗಾಗಿ ಜನ ಜಿಲ್ಲೆಯಲ್ಲೊಂದು ತುರ್ತು ಆಸ್ಪತ್ರೆಯಾಗಲಿದೆ ಎಂಬ ಕನಸು ಕಂಡಿದ್ದರು. ಆದರೆ ಬಿ.ಆರ್.ಶೆಟ್ಟಿಯವರ ಉದ್ಯಮ ಸಾಮ್ರಾಜ್ಯದ ಕುಸಿತದಿಂದ ಈ ಬೆಳವಣಿಗೆ ಅಲ್ಲಿಗೇ ನಿಂತಿತ್ತು.

ಈಹಿಂದೆ ಉತ್ತರ ಕನ್ನಡಕ್ಕೆ ಒಂದು ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಬೇಕು ಎಂದು #WewantsSuperSpecialityHospitalInUttaraKannada ಎಂಬ ಹ್ಯಾಶ್‌ಟ್ಯಾಗ್ ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಅಭಿಯಾನ ನಡೆಸಿದ್ದರು. ಅಂದಿನ ಮುಖ್ಯಮಂತ್ರಿಗಳಾಗಿದ್ದ ಎಚ್.ಡಿ.ಕುಮಾರಸ್ವಾಮಿಯವರ ಗಮನ ಕೂಡ ಸೆಳೆದಿದ್ದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಗಮನ ಸೆಳೆಯಲು ಸಹ ಅವರ ಅಭಿಯಾನ ಯಶಸ್ವಿಯಾಗಿತ್ತು. ಕುಮಾರಸ್ವಾಮಿಯವರು ಸಹ ಭರವಸೆ ನೀಡಿದ್ದರು,

ಇದೀಗ ಉತ್ತರ ಕನ್ನಡ ಜಿಲ್ಲೆಗೆ ಏಮ್ಸ್ ಬೇಕೆಂದು ಆಗ್ರಹಿಸಿರುವ ಡಾ.ಕಾಮತ್ ಅವರನ್ನು ಶಾಸಕ ದಿನಕರ ಶೆಟ್ಟಿ ಭೇಟಿಯಾಗಿ ಜಿಲ್ಲೆಗೆ ಏಮ್ಸ್ ಆಸ್ಪತ್ರೆ ಪಡೆದುಕೊಳ್ಳುವಲ್ಲಿ ಸಹಕಾರ, ಮಾರ್ಗದರ್ಶನ ನೀಡುವಂತೆ ಕೇಳಿಕೊಂಡಿದ್ದಾರೆ. ಆದರೆ ಮುಖ್ಯಮಂತ್ರಿಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಹುಬ್ಬಳ್ಳಿಯಲ್ಲಿ ಏಮ್ಸ್ ಸ್ಥಾಪಿಸಲು ಕನಸು ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರ ಕನಸೇನಾದರೂ ಫಲಿಸಿದಲ್ಲಿ ಉತ್ತರ ಕನ್ನಡಕ್ಕೆ ಈಬಾರಿಯೂ ಮಲ್ಟಿ ಸ್ಪೆಶಲ್ ಆಸ್ಪತ್ರೆ ಹೋರಾಟಕ್ಕೆ ಹಿನ್ನೆಡೆ ಆಗುವ ಸಾಧ್ಯತೆಯೂ ಇದೆ.

ಇದನ್ನೂ ಓದಿ: 

Uttara Kannada Flood: ಉತ್ತರ ಕನ್ನಡ: ಪ್ರವಾಹ, ಭೂಕುಸಿತದಿಂದ 737 ಕೋಟಿ ಮೌಲ್ಯದ ಮೂಲಭೂತ ಸೌಕರ್ಯಕ್ಕೆ ಹಾನಿ

Uttara Kannada Flood: ಚಿತ್ರನೋಟ: ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಕೊಟ್ಟ ಭೂಕುಸಿತಕ್ಕೊಳಗಾದ ಕಳಚೆ ಗ್ರಾಮ ಹೇಗಿದೆ?

(Uttara Kannada people demand Super Speciality Hospital AIMS)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ