AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ನಾಸಾ ಫ್ಯೂಚರ್ ಇನ್ವೆಸ್ಟಿಗೇಟರ್ ಪ್ರಶಸ್ತಿಗೆ ಆಯ್ಕೆಯಾದ ಉತ್ತರ ಕನ್ನಡದ ದಿನೇಶ್ ವಸಂತ ಹೆಗಡೆ

ದಿನೇಶ್ ಹೆಗಡೆ ಅವರು ಪ್ರಸ್ತುತದಲ್ಲಿ ಯು.ಎ.ಎಚ್ ಸೆಂಟರ್ ಫಾರ್ ಸ್ಪೇಸ್ ಪ್ಲಾಸ್ಮಾ ಮತ್ತು ಏರೋನಾಮಿಕ್ ರಿಸರ್ಚ್​ ಬಾಹ್ಯಾಕಾಶ ವಿಜ್ಞಾನ ವಿಭಾಗದಲ್ಲಿ ಪದವಿ ಸಂಶೋಧನಾ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ.

ಅಮೆರಿಕದ ನಾಸಾ ಫ್ಯೂಚರ್ ಇನ್ವೆಸ್ಟಿಗೇಟರ್ ಪ್ರಶಸ್ತಿಗೆ ಆಯ್ಕೆಯಾದ ಉತ್ತರ ಕನ್ನಡದ ದಿನೇಶ್ ವಸಂತ ಹೆಗಡೆ
ದಿನೇಶ್​ ವಸಂತ ಹೆಗಡೆ
TV9 Web
| Edited By: |

Updated on: Aug 20, 2021 | 3:01 PM

Share

ನಾಸಾದ ಫ್ಯೂಚರ್ ಇನ್ವೆಸ್ಟಿಗೇಟರ್ ಪ್ರಶಸ್ತಿಗೆ ಉತ್ತರ ಕನ್ನಡದ ಸಿದ್ದಾಪುರ ತಾಲೂಕಿನ ಸಶಿಗುಳಿ ಗ್ರಾಮದ ದಿನೇಶ್ ವಸಂತ ಹೆಗಡೆ ಆಯ್ಕೆಯಾಗಿದ್ದಾರೆ. ನಾಸಾದ ಭೂಮಿ, ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ (ನ್ಯಾಷನಲ್ ಏರೋನಾಟಿಕ್ಸ್ ಆ್ಯಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್) ಅನುದಾನದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಸದ್ಯ ಎರಡನೇ ವರ್ಷದ ಪಿಎಚ್​ಡಿ ಅಧ್ಯಯನ ಮಾಡುತ್ತಿದ್ದು, ಪ್ರಶಸ್ತಿಗೆ ಆಯ್ಕೆಯಾಗುವ ಮೂಲಕ ನಾಡಿಗೆ ಕೀರ್ತಿ ತಂದಿದ್ದಾರೆ.

ದಿನೇಶ್ ಹೆಗಡೆ ಅಮೆರಿಕದ ಹಂಟ್​ಸ್​ವಿಲ್​ನಲ್ಲಿರುವ ಅಲಬಾಮಾ ವಿಶ್ವವಿದ್ಯಾಲಯದಲ್ಲಿ ಎರಡನೇ ವರ್ಷದ ಡಾಕ್ಟರೇಟ್ ಅಧ್ಯಯನ ಮಾಡುತ್ತಿದ್ದಾರೆ.  ಬಾಹ್ಯಾಕಾಶ ಹವಾಮಾನ ಅಧ್ಯಯನ ಮಾಡುವ ವಿಧಾನವನ್ನು ಸಂಶೋಧನಾ ವಿಷಯವಾಗಿ ದಿನೇಶ ಹೆಗಡೆ ಅವರು ಆಯ್ಕೆ ಮಾಡಿಕೊಂಡಿದ್ದಾರೆ.

ದಿನೇಶ್​ ಅವರು ಸಿದ್ದಾಪುರ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ತಮ್ಮ ಶಿಕ್ಷಣವನ್ನು ಪೂರೈಸಿದರು. ಬಳಿಕ ಮುಂದಿನ ಶಿಕ್ಷಣಕ್ಕಾಗಿ ಮೈಸೂರಿನ ಯುವರಾಜ ಕಾಲೇಜಿನಲ್ಲಿ ಬಿ.ಎಸ್.ಸಿ ಹಾಗೂ ಮೈಸೂರು ವಿಶ್ವ ವಿದ್ಯಾಲಯದಲ್ಲಿ ಭೌತಶಾಸ್ತ್ರದಲ್ಲಿ ಎಂಎಸ್​ಸಿ ಪದವಿ ಪಡೆದರು.

ಇನ್ನೊಬ್ಬ ವಿದ್ಯಾರ್ಥಿ ಕ್ಯಾಥರೀನ್ ಡೇವಿಡ್ಸನ್ ಅವರೂ ಸಹ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅದರ ಅನ್ವಯ ವಿದ್ಯಾರ್ಥಿಗಳಿಗೆ ಟ್ಯೂಷನ್, ಸಂಶೋಧನೆಗೆ ಸಂಬಂಧಿಸಿದ ಚಟುವಟಿಕೆಗಳು ಮತ್ತು ವೆಚ್ಚಗಳನ್ನು ಭರಿಸಲು ಹಾಗೂ ಸಂಬಂಧಿತ ಸಮ್ಮೇಳನಗಳಿಗೆ ಹಾಜರಾಗಲು ತಲಾ 1,35,000 ಡಾಲರ್ (ಅಂದಾಜು 1.20 ಕೋಟಿ) ನೀಡಲಾಗುತ್ತದೆ. ಈ ಕುರಿತಂತೆ ವಿಶ್ವವಿದ್ಯಾಲಯ ತನ್ನ ಅಧಿಕೃತ  ವೆಬ್​ಸೈಟ್​ನಲ್ಲಿ ತಿಳಿಸಿದೆ.

ಇದನ್ನೂ ಓದಿ:

ನಾಳೆ ಸುಮಂಗಲಿ ಸೇವಾಶ್ರಮದ ಸುಶೀಲಮ್ಮ ಸೇರಿ ಮೂವರಿಗೆ ದೇವರಾಜ ಅರಸು ಪ್ರಶಸ್ತಿ ಪ್ರದಾನ

ಅಮಿತಾಭ್​ ಬಚ್ಚನ್‌ ನನ್ನ ಪಾತ್ರ ಮೆಚ್ಚಿದ್ದರು, ಅದೇ ನನಗೆ ದೊಡ್ಡ ಪ್ರಶಸ್ತಿ; ವೈಜನಾಥ್ ಬಿರಾದಾರ್

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು