AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಅಧಿಕಾರ ಸ್ವೀಕರಿಸಲು ಆಗಮಿಸಿದ ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ; ಬಾಗಿಲು ಮುರಿದು ದಾಂಧಲೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಲ್ಲಿ ಗ್ರಾಮದಲ್ಲಿನ ಮುರಾರ್ಜಿ ವಸತಿ ಶಾಲೆಗೆ ಅಧಿಕಾರ ಸ್ವೀಕರಿಸಲು ಆಗಮಿಸಿದ ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಾಂಶುಪಾಲರ ಕೊಠಡಿಗೆ ನುಗ್ಗಿ ವಿದ್ಯಾರ್ಥಿಗಳು ಬಾಗಿಲು ಮುರಿದು ದಾಂಧಲೆ ಮಾಡಿದ್ದಾರೆ.

ಕಾರವಾರ: ಅಧಿಕಾರ ಸ್ವೀಕರಿಸಲು ಆಗಮಿಸಿದ ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ; ಬಾಗಿಲು ಮುರಿದು ದಾಂಧಲೆ
ವಿದ್ಯಾರ್ಥಿಗಳ ಪ್ರತಿಭಟನೆ
ವಿನಾಯಕ ಬಡಿಗೇರ್​
| Edited By: |

Updated on: Aug 22, 2023 | 6:29 PM

Share

ಕಾರವಾರ(ಆ.22): ಉತ್ತರ ಕನ್ನಡ ಜಿಲ್ಲೆಯ (Uttara Kannada) ಶಿರಸಿ (Sirsi) ತಾಲೂಕಿನ ಕಲ್ಲಿ(Kalli) ಗ್ರಾಮದಲ್ಲಿನ ಮುರಾರ್ಜಿ ವಸತಿ ಶಾಲೆಗೆ (Morarji Desai Residential School) ಅಧಿಕಾರ ಸ್ವೀಕರಿಸಲು ಆಗಮಿಸಿದ ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಾಂಶುಪಾಲರ ಕೊಠಡಿಗೆ ನುಗ್ಗಿ ವಿದ್ಯಾರ್ಥಿಗಳು ಬಾಗಿಲು ಮುರಿದು ದಾಂಧಲೆ ಮಾಡಿದ್ದಾರೆ. ಹೊಸದಾಗಿ ನೇಮಕಗೊಳ್ಳುತ್ತಿರುವ ಪ್ರಾಂಶುಪಾಲರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವಿರುವುದರಿಂದ, ಹೊಸ ನೇಮಕಾತಿಯನ್ನು ವಿದ್ಯಾರ್ಥಿಗಳು ವಿರೋಧಿಸಿ, ಹಳೆಯ ಪಾಂಶುಪಾಲರನ್ನೇ ಮುಂದುವರೆಸುವಂತೆ ಆಗ್ರಹಿಸಿದ್ದಾರೆ.

ಬಿಸಿಲಿನಲ್ಲಿ ಕೂತು ವಿದ್ಯಾರ್ಥಿಗಳು ಪ್ರತಿಭಟಿಸುತ್ತಿಸುತ್ತಿದ್ದು, ಅವರೊಂದಿಗೆ ಹಳೆ ವಿದ್ಯಾರ್ಥಿಗಳು ಹಾಗೂ ಪಾಲಕರೂ ಕೈ ಜೋಡಿಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿದ್ದರೂ, ಸ್ಥಳಕ್ಕೆ ಬಾರದೆ ಇದ್ದಿದ್ದರಿಂದ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಾಂಶುಪಾಲರ ವರ್ಗಾವಣೆಯನ್ನು ರದ್ದು ಮಾಡದೇ ಇದ್ದಲ್ಲಿ, ಉಪವಾಸ ಸತ್ಯಾಗ್ರಹ ಮಾಡುತ್ತೇವೆ. ಅಲ್ಲದೇ ನಮಗೆ ತೊಂದರೆಯಾದರೆ ಸಂಬಂಧಿಸಿದ ಅಧಿಕಾರಿಗಳು ನೇರ ಹೊಣೆ ಎಂದು ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ. ಅಲ್ಲದೇ ಮಕ್ಕಳ ವರ್ಗಾವಣೆ ಪತ್ರ ನೀಡುವಂತೆ ಪಾಲಕರು ಒತ್ತಡ ಹಾಕಿದ್ದಾರೆ.

ಇದನ್ನೂ ಓದಿ: ಕಾರವಾರ: ಚಾಕೊಲೇಟ್​​ ಎಂದು ಪ್ಯಾಂಟ್ ಬಟನ್​ ನುಂಗಿದ ಹಸುಳೆ: ಜೀವ ಉಳಿಸಿದ ಸರಕಾರಿ ಆಸ್ಪತ್ರೆ ವೈದ್ಯರು

ವಿದ್ಯಾರ್ಥಿಗಳು ನಮಗೆ ಹೊಸ ಪ್ರಾಂಶುಪಾಲರು ಬೇಡ ಎಂದು ಕಂಪೌಂಡ್ ಜಿಗಿಯಲು ಮುಂದಾದಾಗ ಪೊಲೀಸರು ತಡೆಯಲು ಹರಸಾಹಸ ಪಟ್ಟರರು. ಮುನ್ನೆಚ್ಚರಿಕೆಯಾಗಿ ಮೊರಾರ್ಜಿ ವಸತಿ ಶಾಲೆಯ ಸುತ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ವಿದ್ಯಾರ್ಥಿಗಳ ವಿರೋಧದ ನಡುವೆ ಪ್ರಾಂಶುಪಾಲ ಚಂದ್ರಶೇಖರ ನಾಯ್ಕ ಅಧಿಕಾರ ಸ್ವೀಕರಿಸಿ, ಪೊಲೀಸ್ ರಕ್ಷಣೆಯಲ್ಲಿ ಕೆಲವೇ ನಿಮಿಷದಲ್ಲಿ ವಾಪಸ್​​​ ಆಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು