AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಪ ವಿಮೊಚನೆಗೆ ಗೊಕರ್ಣದಲ್ಲಿ ಧ್ಯಾನ ಮಾಡಿದ್ದ ಶ್ರೀ ರಾಮ: ಇಂದು ರಾಮತಿರ್ಥವೆಂದು ಪ್ರಸಿದ್ಧ

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ರಾಮ ಧ್ಯಾನ ಮಾಡಿದ್ದ ಎಂಬ ಕುರುಹು ಪತ್ತೆ ಆಗಿದೆ. ಜಿಲ್ಲೆಯ ಗೋಕರ್ಣಕ್ಕೆ ರಾವಣ ಬಂದಿದ್ದ ಎಂಬ ಇತಿಹಾಸ ಇದೆ. ಆದರೆ ಅದೇ ಭೂಮಿಗೆ ರಾಮನೂ ಕೂಡ ಬಂದು ಧ್ಯಾನ ಮಾಡಿದ್ದ ಎಂಬುವುದಕ್ಕೆ ಪತ್ತೆಯಾದ ಕುರುಹುಗಳೆ ಸಾಕ್ಷಿ. ಅಂದು ತಪಸ್ಸು ಮಾಡಿದ ಸ್ಥಳದಲ್ಲಿ ಆಂಜನೇಯ ಸಹಿತ ರಾಮ ಲಕ್ಷ್ಮಣ ಮತ್ತು ಸೀತೆ ಇರುವ ಸುಂದರವಾದ ದೇವಾಲಯ ಇದೆ.

ಶಾಪ ವಿಮೊಚನೆಗೆ ಗೊಕರ್ಣದಲ್ಲಿ ಧ್ಯಾನ ಮಾಡಿದ್ದ ಶ್ರೀ ರಾಮ: ಇಂದು ರಾಮತಿರ್ಥವೆಂದು ಪ್ರಸಿದ್ಧ
ಶ್ರೀ ರಾಮ ಧ್ಯಾನ ಮಾಡಿದ್ದ ಸ್ಥಳ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Jan 14, 2024 | 8:38 PM

Share

ಉತ್ತರ ಕನ್ನಡ, ಜನವರಿ 14: ಅಯೋಧ್ಯೆ (Ayodhya) ಯ ಭವ್ಯ ದೇವಸ್ಥಾನದಲ್ಲಿ ಇನ್ನೇನು ಕೆಲವೆ ದಿನಗಳಲ್ಲಿ ರಾಮ ಲಲ್ಲಾ ಮೂರ್ತಿ ಪ್ರತಿಷ್ಠಾಪಣೆ ಆಗಲಿದೆ. ಅದರ ಬೆನ್ನಲ್ಲೆ ರಾಜ್ಯದೆಲ್ಲೆಡೆ ರಾಮನ ಕುರುಹುಗಳು ಕಾಣಸಿಗುತ್ತಿವೆ. ಶಾಪ ವಿಮೊಚನೆಗೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ರಾಮ ಧ್ಯಾನ ಮಾಡಿದ್ದ ಎಂಬ ಕುರುಹು ಪತ್ತೆ ಆಗಿದೆ. ಜಿಲ್ಲೆಯ ಗೋಕರ್ಣಕ್ಕೆ ರಾವಣ ಬಂದಿದ್ದ ಎಂಬ ಇತಿಹಾಸ ಇದೆ. ಆದರೆ ಅದೇ ಭೂಮಿಗೆ ರಾಮನೂ ಕೂಡ ಬಂದು ಧ್ಯಾನ ಮಾಡಿದ್ದ ಎಂಬುವುದಕ್ಕೆ ಪತ್ತೆಯಾದ ಕುರುಹುಗಳೆ ಸಾಕ್ಷಿ.

ಬ್ರಾಹ್ಮಣ ಸಮಾಜದ ರಾವಣನ ವಧೆ ಮಾಡಿದ್ದ ರಾಮನಿಗೆ ಬ್ರಾಹ್ಮಣ ಹತ್ಯೆ ದೋಷ ಕಾಡುತ್ತಿರುತ್ತದೆ. ಪಾಪ ವಿಮೋಚನೆಗೆ ಗೋಕರ್ಣದ ಕಡಲತೀರದಲ್ಲಿ ಧ್ಯಾನ ಮಾಡುವಂತೆ ವಸಿಷ್ಟ ಗುರುಗಳು ಸಲಹೆ ಕೊಡುತ್ತಾರೆ.

ಕಲ್ಯಾಣಿ

ಗುರುಗಳ ಮಾತಿನಂತೆ ಲಕ್ಷ್ಮಣ ಮತ್ತು ಸೀತೆಯರ ಜೊತೆಗೆ ಗೋಕರ್ಣ ಕಾಡಂಚಿನಲ್ಲಿ ಬಂದು ತಪ್ಪಸ್ಸು ಮಾಡಿದ್ದ. ಅಂದು ತಪಸ್ಸು ಮಾಡಿದ ಸ್ಥಳದಲ್ಲಿ ಆಂಜನೇಯ ಸಹಿತ ರಾಮ ಲಕ್ಷ್ಮಣ ಮತ್ತು ಸೀತೆ ಇರುವ ಸುಂದರವಾದ ದೇವಾಲಯ ಇದೆ.

ಇದನ್ನೂ ಓದಿ: ಬಾಗಲಕೋಟೆ; ರಾಮಮಂದಿರ ನಿರ್ಮಾಣದ ಸಂಕಲ್ಪದೊಂದಿಗೆ 16 ಲಕ್ಷಕ್ಕೂ ಹೆಚ್ಚು ಬಾರಿ ರಾಮನಾಮ ಬರೆದ ವೃದ್ಧೆ

ರಾಮ ಇಲ್ಲಿ ಬಂದು ಧ್ಯಾನ ಮಾಡುವ ಮುನ್ನ ಸ್ನಾನ ಮಾಡಲು, ತನ್ನ ಬಾಣವನ್ನು ಭೂಮಿಗೆ ಹೊಡೆದು ಭೂಮಿಯಿಂದ ನೀರು ಬರುವಂತೆ ಮಾಡುತ್ತಾನೆ. ಅಂದು ರಾಮ ಹೊಡೆದ ಬಾಣಿನಿಂದ ಸೃಷ್ಟಿ ಆಗಿದ್ದ ಜಲಧಾರೆ ಇಂದಿಗೂ ಜೀವಂತ ಆಗಿದೆ. ವರ್ಷದ 12 ತಿಂಗಳು ನೀರು ಬರ್ತಾ ಇರುತ್ತೆ ಇನ್ನೂ ಇಲ್ಲಿ ಸ್ನಾನ ಮಾಡಿದರೆ ಪಾಪ ಪರಿಹಾರ ಆಗುತ್ತೆ ಎಂಬ ನಂಬಿಕೆಯೂ ಇದೆ.

ಇದನ್ನೂ ಓದಿ: ಕೋಟೆನಾಡಿನಲ್ಲಿ ಶ್ರೀರಾಮನ ಹೆಜ್ಜೆ ಗುರುತು; ಇಲ್ಲಿದೆ ರಾಮನೇ ಪ್ರತಿಷ್ಠಾಪನೆ ಮಾಡಿದ ಶಿವಲಿಂಗ

ರಾವಣನನ ವಧೆಯಿಂದ ರಾಮನಿಗೆ ತಟ್ಟಿದ ಬ್ರಾಹ್ಮಣ ಹತ್ಯೆ ಶಾಪದಿಂದ ಮುಕ್ತಿ ಆಗಲು. ರಾವಣ ಬಂದು ಎಡವಟ್ಟುವ ಮಾಡಿಕೊಂಡಿದ್ದ ಗೊಕರ್ಣ ಸ್ಥಳಕ್ಕೆ ಬಂದಿದ್ದ ಎಂಬುವುದನ್ನ ಇಲ್ಲಿನ ಕುರುಹುಗಳು ಹೆಳುತ್ತವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?