AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆನಾಡಿನ ಪ್ರಸಿದ್ದ ಮಾಗೋಡು ಫಾಲ್ಸ್ ನೋಡಲು ಪ್ರವಾಸಿಗರ ಹಿಂದೇಟು; ಯಾಕೆ ಗೊತ್ತಾ?

ಉತ್ತರ ಕನ್ನಡ ಜಿಲ್ಲೆ, ಪ್ರವಾಸಿತಾಣಕ್ಕೆ ಪ್ರಸಿದ್ಧವಾಗಿರುವ ಜಿಲ್ಲೆ. ಆದ್ರೆ, ಇಲ್ಲಿ ಕೆಲವು ಪ್ರಸಿದ್ದ ಪ್ರವಾಸಿತಾಣಕ್ಕೆ ಹೋಗಲು ರಸ್ತೆ ಸಂಪರ್ಕ ಹಾಳಾಗಿರುವ ಹಿನ್ನೆಲೆ, ಪ್ರವಾಸಿಗರು ಬರಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲಿನ ಅವ್ಯವಸ್ಥೆಯ ಕುರಿತು ಇಲ್ಲಿದೆ ಮಾಹಿತಿ. 

ಮಲೆನಾಡಿನ ಪ್ರಸಿದ್ದ ಮಾಗೋಡು ಫಾಲ್ಸ್ ನೋಡಲು ಪ್ರವಾಸಿಗರ ಹಿಂದೇಟು; ಯಾಕೆ ಗೊತ್ತಾ?
ಮಾಗೋಡು ಪಾಲ್ಸ್​
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Nov 19, 2023 | 5:37 PM

Share

ಉತ್ತರ ಕನ್ನಡ, ನ.19: ಮಲೆನಾಡಿನ ಬೆಟ್ಟದ ನಡುವೆ ಸೀಳಿಕೊಂಡು ಬರುವ ಜಲಧಾರೆ, ಹಾಲ್ನೊರೆಯಾಗಿ ಧುಮ್ಮಿಕ್ಕುತ್ತಾ ಕೈ ಬೀಸಿ ಕರೆಯುವ ಜಲಪಾತ. ಹಸಿರ ಬೆಟ್ಟದಲ್ಲಿ ಸೌಂದರ್ಯ ಹೆಚ್ಚಿಸಿರುವ ಮಾಗೋಡು ಫಾಲ್ಸ್(Magod Falls). ಉತ್ತರ ಕನ್ನಡ(Uttara Kannada) ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಶಾಂತವಾಗಿ ಹರಿಯುತ್ತಿರುವ ಬೇಡ್ತಿ ನದಿಯಿಂದ ಮಾಗೋಡು ಜಲಪಾತ ಎಂಬ ಸುಂದರ ಫಾಲ್ಸ್​ ಸೃಷ್ಟಿಸುತ್ತದೆ. ಈ ಸುಂದರ ತಾಣವನ್ನು ಎಷ್ಟು ಬಾರಿ ನೋಡಿದರೂ ಮತ್ತೆ ನೋಡಬೇಕು ಎಂದು ಅನಿಸುತ್ತದೆ. ಆದ್ರೆ, ಸದ್ಯ ಆ ಸ್ಥಳಕ್ಕೆ ಪ್ರಯಾಣಿಕರು ಬರುವ ಸಂಖ್ಯೆ ಬಹಳ ಕಡಿಮೆ ಆಗಿದೆ.

ವಿಕೆಂಡ್ ಬಂದರೆ ಸಾಕು ಜನಜಂಗುಳಿಯಿಂದ ತುಂಬುತ್ತಿದ್ದ ಈ ತಾಣದಲ್ಲಿ ಬೆರಳಣಿಕೆಯ ಜನ ಮಾತ್ರ ಕಣಾಸಿಗುತ್ತಿದ್ದಾರೆ. ಇಲ್ಲಿನ ಪ್ರಕೃತಿ ಸೌಂದರ್ಯ ನೋಡಿ ಎಲ್ಲರೂ ಖುಷಿ ಪಡುತ್ತಾರೆ. ಆದ್ರೆ, ಇನ್ನೊಮ್ಮೆ ಇಲ್ಲಿಗೆ ಬರಬೇಕೆಂದು ಮನಸ್ಸು ಮಾಡಲ್ಲ. ಜೊತೆಗೆ ಯಾರಿಗೂ ಇಲ್ಲಿಗೆ ಹೋಗಬೇಡಿ, ಹೋಗೊದಾದ್ರೆ ಎಚ್ಚರಿಕೆಯಿಂದ ಹೋಗಿ ಎಂದು ಸಲಹೆ ಕೊಡುತ್ತಿದ್ದಾರೆ.

ಇದನ್ನೂ ಓದಿ:ಉತ್ತರ ಕನ್ನಡ ಜಿಲ್ಲೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಜಾಗ ಮಂಜೂರು ಮಾಡಿದ ಕರ್ನಾಟಕ ಸರ್ಕಾರ

ಸರಿಯಾದ ರಸ್ತೆಯಿಲ್ಲದೆ ಪ್ರವಾಸಿಗರ ಪರದಾಟ

ಮಾಗೋಡು ಫಾಲ್ಸ್ ಪ್ರತಿಯೊಬ್ಬ ಪ್ರವಾಸಿಗರನ್ನು ಮೂಖ ವಿಸ್ಮಿತ ಮಾಡುವುದ್ರಲ್ಲಿ ಎರಡು ಮಾತಿಲ್ಲ ಆದ್ರೆ, ಮಾಗೋಡು ಫಾಲ್ಸ್ ಗೆ ಹೋಗಲು ಇರುವ ರಸ್ತೆ ಬಹಳಷ್ಟು ಹಾಳಾಗಿದೆ, ಕಾರು, ಟ್ಯಾಕ್ಸಿ ಮೂಲಕ ಈ ಸ್ಥಳಕ್ಕೆ ಬಂದ್ರೆ ವಾಹನ ಡ್ಯಾಮೆಜ್ ಆಗುವುದು ಗ್ಯಾರೆಂಟಿ, ದೂರದೂರಿನಿಂದ ಇಲ್ಲಿಗೆ ಬಂದು ಕಾರು ಹಾಳಾದ್ರೆ ರಿಪೇರಿ ಮಾಡಲು ಕೂಡ ಇಲ್ಲಿ ಯಾರೂ ಸಿಗಲ್ಲ. ಎಷ್ಟೊ ಜನ ಪ್ರವಾಸಿಗರು ಪರದಾಡಿದ್ದು ಉಂಟು . ಹಾಗಾಗಿ ಇಲ್ಲಿಗೆ ಬರಲು ಪ್ರವಾಸಿಗರು ನಿತ್ಯ ಪರದಾಡುತ್ತಿದ್ದಾರೆ.

ಒಟ್ಟಾರೆಯಾಗಿ ರಾಜ್ಯದ ಪ್ರವಾಸಿ ತಾಣವನ್ನು ಉಳಿಸಿ ಬೆಳೆಸಬೇಕಿರುವ ಇಲಾಖೆಗಳು, ಇರುವ ಪ್ರವಾಸಿ ತಾಣಗಳಿಗೆ ಉತ್ತಮ ಮೂಲಭೂತ ವ್ಯವಸ್ಥೆ ಕಲ್ಪಸಿಕೊಟ್ಟರೆ ಎಷ್ಟೋ ಪ್ರವಾಸಿ ತಾಣಗಳು ಜಿವಂತವಾಗಿ ಉಳಿಯುತ್ತವೆ. ಆದ್ರೆ, ಸಂಬಂಧಪಟ್ಟವರು ಮಾತ್ರ ಜಾಣ ಮೌನ ವಹಿಸಿರುವುದು ನಿಜಕ್ಕೂ ವಿಷಾದನೀಯ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?