AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಪ್ರವಾಸಿಗರ ಜೀವ ಉಳಿಸುವ ಲೈಫ್​ ಗಾರ್ಡ್ ಮೇಲೆಯೇ ಪ್ರವಾಸಿಗರಿಂದ ಹಲ್ಲೆ, ಕಾರಣವೇನು?

ಜಿಲ್ಲೆಯು ಪ್ರವಾಸಿಗರನ್ನ ಹೆಚ್ಚಾಗಿ ಸೆಳೆಯುತ್ತದೆ ಆದರೆ ಇಲ್ಲಿಗೆ ಬರುವ ಪ್ರವಾಸಿಗರು ಪ್ರದೇಶದ ಬಗ್ಗೆ ಅರಿವಿಲ್ಲದೆ ಮೋಜು ಮಸ್ತಿಯಲ್ಲಿ ತೊಡಗುತ್ತಾರೆ. ಇಂತಹ ಪ್ರವಾಸಿಗರ ಪ್ರಾಣ ಉಳಿಸುವ ಲೈಪ್​ ಗಾರ್ಡ್​ಗಳ ಮೇಲೆಯೇ ಇದೀಗ ಪ್ರವಾಸಿಗರು ಹಲ್ಲೆ ಮಾಡುತ್ತಿದ್ದಾರೆ.

ಉತ್ತರ ಕನ್ನಡ: ಪ್ರವಾಸಿಗರ ಜೀವ ಉಳಿಸುವ ಲೈಫ್​ ಗಾರ್ಡ್ ಮೇಲೆಯೇ ಪ್ರವಾಸಿಗರಿಂದ ಹಲ್ಲೆ, ಕಾರಣವೇನು?
ಉತ್ತರ ಕನ್ನಡ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 18, 2023 | 12:26 PM

Share

ಉತ್ತರಕನ್ನಡ: ಪ್ರವಾಸೋದ್ಯಮದಿಂದಲೇ ಸಾಕಷ್ಟು ಹೆಸರುವಾಸಿಯಾಗಿರುವ ಜಿಲ್ಲೆ ಇದಾಗಿದ್ದು. ಇಲ್ಲಿಗೆ ಆಗಮಿಸುವ ದೇಶ ವಿದೇಶಿ ಪ್ರವಾಸಿಗರ ಸಂಖ್ಯೆ ಕೂಡ ಹೆಚ್ಚಾಗಿದೆ. ಅದರಲ್ಲಿಯೂ ಕೊರೊನಾ ಕಡಿಮೆಯಾದ ಬಳಿಕ ಜಿಲ್ಲೆಯ ಪ್ರವಾಸಿ ತಾಣಕ್ಕೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆ ಒಂದು ಕೋಟಿಗೂ ಮೀರಿದೆ. ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಮುರುಡೇಶ್ವರ, ಗೋಕರ್ಣ ಕಡಲತೀರ ನಿತ್ಯವೂ ಪ್ರವಾಸಿಗರಿಂದಲೇ ತುಂಬಿಕೊಳ್ಳುತ್ತಿದೆ. ಆದರೆ ಬಂದಂತಹ ಪ್ರವಾಸಿಗರು ಕಡಲತೀರದ ಅಪಾಯಗಳ ಬಗ್ಗೆ ತಿಳಿಯದೆ ಎಲ್ಲೆಂದರಲ್ಲಿ ಈಜಾಡುತ್ತಿದ್ದು ಅಲೆಗಳ ಸುಳಿಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದಾರೆ. ಜಿಲ್ಲೆಯ ವಿವಿಧ ಕಡಲತೀರಗಳಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಹೀಗೆ ಕೊಚ್ಚಿ ಹೋಗುತ್ತಿದ್ದ 95ಕ್ಕೂ ಹೆಚ್ಚು ಪ್ರವಾಸಿಗರನ್ನು ಲೈಫ್ ಗಾರ್ಡ್​ಗಳು ರಕ್ಷಣೆ ಮಾಡಿದ್ದಾರೆ. ಕಡಲತೀರದ ಬಳಿಯೇ ಇದ್ದು ತಮ್ಮ ಜೀವವನ್ನು ಲೆಕ್ಕಿಸದೆ ಪ್ರವಾಸಿಗರ ಜೀವ ಉಳಿಸುತ್ತಿದ್ದಾರೆ ಆದರೆ ಕೆಲ ಪ್ರವಾಸಿಗರು ರಕ್ಷಣೆಗೆ ಬಂದ ಲೈಪ್ ಗಾರ್ಡ್​ನ ಮೇಲೆ ಹಲ್ಲೆ ಮಾಡುತ್ತಿರುವುದು ಖಂಡನೀಯವಾಗಿದೆ.

ಇನ್ನು ಜಿಲ್ಲೆಯ ಕಡಲತೀರಗಳತ್ತ ಆಕರ್ಷಿತರಾಗುವ ಪ್ರವಾಸಿಗರು, ಆಪತ್ತು ತಂದುಕೊಳ್ಳುವ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಳೆದ ಕೆಲ ವರ್ಷದ ಹಿಂದೆ ಕಡಲ ತೀರ ಹಾಗೂ ಜಲಪಾತಗಳು ಸೇರಿ ಒಟ್ಟು 12 ಕಡೆ 27 ಲೈಫ್ ಗಾರ್ಡ್​ಗಳ ನೇಮಕ ಮಾಡಿದೆ. ಹೀಗೆ ನೇಮಕವಾದ ಬಳಿಕ ಅಪಾಯಕ್ಕೆ ಸಿಲುಕಿದ ಸಾಕಷ್ಟು ಪ್ರವಾಸಿಗರನ್ನು ಕಾಪಾಡಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. ಇನ್ನು ತಮ್ಮ ಜೀವವನ್ನೆ ಒತ್ತೆ ಇಟ್ಟು ಪ್ರವಾಸಿಗರನ್ನು ರಕ್ಷಣೆ ಮಾಡುವ ಲೈಫ್ ಗಾರ್ಡ್​ಗಳಿಗೇ ಇದೀಗ ಜೀವಭಯ ಕಾಡುವಂತಾಗಿದೆ.

ಕಡಲತೀರಗಳಿಗೆ ಈಜಾಡುತ್ತಿದ್ದವರಿಗೆ ಮುಂದೆ ಹೋಗದಂತೆ, ಆಳ ಇರುವ ಕಡೆ ತೆರಳದಂತೆ ಸೂಚಿಸಿದರೆ ಕೆಲ ಪ್ರವಾಸಿಗರು ಅವರೊಂದಿಗೆ ಜಗಳಕ್ಕೆ ಬರುತ್ತಿದ್ದಾರೆ. ಅಲ್ಲದೆ ಕಳೆದ ಎರಡು ದಿನದ ಹಿಂದೆ ಮುರುಡೇಶ್ವರದಲ್ಲಿ ಅಲೆಗೆ ಕೊಚ್ಚಿಹೋಗುತ್ತಿದ್ದ ಪ್ರವಾಸಿಗರನ್ನು ರಕ್ಷಣೆ ಮಾಡಿದಾಗಲೂ ವಿನಾ ಕಾರಣ ಕುಡಿದ ಮತ್ತಿನಲ್ಲಿ ಲೈಫ್ ಗಾರ್ಡ್​ಗಳ ಮೇಲೆ ಹಲ್ಲೆ ಮಾಡಿ ಗಾಸಿಗೊಳಿಸಲಾಗಿದೆ. ಇಂತಹ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಹೆಚ್ಚು ಪ್ರವಾಸಿಗರು ಸೇರುವ ತಾಣಗಳಲ್ಲಿ ಪೊಲೀಸರನ್ನು ನೇಮಕ ಮಾಡಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

ಇದನ್ನೂ ಓದಿ:ಕಾರವಾರ: ಕಡಲತೀರದಲ್ಲಿ ಕಾಣಿಸಿಕೊಂಡ ಅಪರೂಪದ ಗೂಸ್ ಬಾರ್ನಕಲ್

ಒಟ್ಟಾರೆ ಜಿಲ್ಲೆಯ ಕಡಲತೀರಗಳಲ್ಲಿ ಪ್ರವಾಸಿಗರ ರಕ್ಷಣೆಗೆ ಲೈಫ್ ಗಾರ್ಡ್​ಗಳು ಆಪತ್ ಭಾಂಧವರಾಗಿದ್ದು ಅವರ ಮೇಲಿನ ಹಲ್ಲೆ ನಿಜಕ್ಕೂ ಖಂಡನೀಯ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಈ ಬಗ್ಗೆ ಗಮನ ಹರಿಸಿ ಹೆಚ್ಚು ಪ್ರವಾಸಿಗರು ಸೇರುವ ಸ್ಥಳಗಳಲ್ಲಿ ಪೊಲೀಸರನ್ನು ನಿಯುಕ್ತಿಗೊಳಿಸಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

ವರದಿ: ವಿನಾಯಕ ಬಡಿಗೇರ ಟಿವಿ9 ಕಾರವಾರ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ