AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಪ್ರವಾಸಿಗರ ಜೀವ ಉಳಿಸುವ ಲೈಫ್​ ಗಾರ್ಡ್ ಮೇಲೆಯೇ ಪ್ರವಾಸಿಗರಿಂದ ಹಲ್ಲೆ, ಕಾರಣವೇನು?

ಜಿಲ್ಲೆಯು ಪ್ರವಾಸಿಗರನ್ನ ಹೆಚ್ಚಾಗಿ ಸೆಳೆಯುತ್ತದೆ ಆದರೆ ಇಲ್ಲಿಗೆ ಬರುವ ಪ್ರವಾಸಿಗರು ಪ್ರದೇಶದ ಬಗ್ಗೆ ಅರಿವಿಲ್ಲದೆ ಮೋಜು ಮಸ್ತಿಯಲ್ಲಿ ತೊಡಗುತ್ತಾರೆ. ಇಂತಹ ಪ್ರವಾಸಿಗರ ಪ್ರಾಣ ಉಳಿಸುವ ಲೈಪ್​ ಗಾರ್ಡ್​ಗಳ ಮೇಲೆಯೇ ಇದೀಗ ಪ್ರವಾಸಿಗರು ಹಲ್ಲೆ ಮಾಡುತ್ತಿದ್ದಾರೆ.

ಉತ್ತರ ಕನ್ನಡ: ಪ್ರವಾಸಿಗರ ಜೀವ ಉಳಿಸುವ ಲೈಫ್​ ಗಾರ್ಡ್ ಮೇಲೆಯೇ ಪ್ರವಾಸಿಗರಿಂದ ಹಲ್ಲೆ, ಕಾರಣವೇನು?
ಉತ್ತರ ಕನ್ನಡ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jan 18, 2023 | 12:26 PM

Share

ಉತ್ತರಕನ್ನಡ: ಪ್ರವಾಸೋದ್ಯಮದಿಂದಲೇ ಸಾಕಷ್ಟು ಹೆಸರುವಾಸಿಯಾಗಿರುವ ಜಿಲ್ಲೆ ಇದಾಗಿದ್ದು. ಇಲ್ಲಿಗೆ ಆಗಮಿಸುವ ದೇಶ ವಿದೇಶಿ ಪ್ರವಾಸಿಗರ ಸಂಖ್ಯೆ ಕೂಡ ಹೆಚ್ಚಾಗಿದೆ. ಅದರಲ್ಲಿಯೂ ಕೊರೊನಾ ಕಡಿಮೆಯಾದ ಬಳಿಕ ಜಿಲ್ಲೆಯ ಪ್ರವಾಸಿ ತಾಣಕ್ಕೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆ ಒಂದು ಕೋಟಿಗೂ ಮೀರಿದೆ. ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಮುರುಡೇಶ್ವರ, ಗೋಕರ್ಣ ಕಡಲತೀರ ನಿತ್ಯವೂ ಪ್ರವಾಸಿಗರಿಂದಲೇ ತುಂಬಿಕೊಳ್ಳುತ್ತಿದೆ. ಆದರೆ ಬಂದಂತಹ ಪ್ರವಾಸಿಗರು ಕಡಲತೀರದ ಅಪಾಯಗಳ ಬಗ್ಗೆ ತಿಳಿಯದೆ ಎಲ್ಲೆಂದರಲ್ಲಿ ಈಜಾಡುತ್ತಿದ್ದು ಅಲೆಗಳ ಸುಳಿಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದಾರೆ. ಜಿಲ್ಲೆಯ ವಿವಿಧ ಕಡಲತೀರಗಳಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಹೀಗೆ ಕೊಚ್ಚಿ ಹೋಗುತ್ತಿದ್ದ 95ಕ್ಕೂ ಹೆಚ್ಚು ಪ್ರವಾಸಿಗರನ್ನು ಲೈಫ್ ಗಾರ್ಡ್​ಗಳು ರಕ್ಷಣೆ ಮಾಡಿದ್ದಾರೆ. ಕಡಲತೀರದ ಬಳಿಯೇ ಇದ್ದು ತಮ್ಮ ಜೀವವನ್ನು ಲೆಕ್ಕಿಸದೆ ಪ್ರವಾಸಿಗರ ಜೀವ ಉಳಿಸುತ್ತಿದ್ದಾರೆ ಆದರೆ ಕೆಲ ಪ್ರವಾಸಿಗರು ರಕ್ಷಣೆಗೆ ಬಂದ ಲೈಪ್ ಗಾರ್ಡ್​ನ ಮೇಲೆ ಹಲ್ಲೆ ಮಾಡುತ್ತಿರುವುದು ಖಂಡನೀಯವಾಗಿದೆ.

ಇನ್ನು ಜಿಲ್ಲೆಯ ಕಡಲತೀರಗಳತ್ತ ಆಕರ್ಷಿತರಾಗುವ ಪ್ರವಾಸಿಗರು, ಆಪತ್ತು ತಂದುಕೊಳ್ಳುವ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಳೆದ ಕೆಲ ವರ್ಷದ ಹಿಂದೆ ಕಡಲ ತೀರ ಹಾಗೂ ಜಲಪಾತಗಳು ಸೇರಿ ಒಟ್ಟು 12 ಕಡೆ 27 ಲೈಫ್ ಗಾರ್ಡ್​ಗಳ ನೇಮಕ ಮಾಡಿದೆ. ಹೀಗೆ ನೇಮಕವಾದ ಬಳಿಕ ಅಪಾಯಕ್ಕೆ ಸಿಲುಕಿದ ಸಾಕಷ್ಟು ಪ್ರವಾಸಿಗರನ್ನು ಕಾಪಾಡಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. ಇನ್ನು ತಮ್ಮ ಜೀವವನ್ನೆ ಒತ್ತೆ ಇಟ್ಟು ಪ್ರವಾಸಿಗರನ್ನು ರಕ್ಷಣೆ ಮಾಡುವ ಲೈಫ್ ಗಾರ್ಡ್​ಗಳಿಗೇ ಇದೀಗ ಜೀವಭಯ ಕಾಡುವಂತಾಗಿದೆ.

ಕಡಲತೀರಗಳಿಗೆ ಈಜಾಡುತ್ತಿದ್ದವರಿಗೆ ಮುಂದೆ ಹೋಗದಂತೆ, ಆಳ ಇರುವ ಕಡೆ ತೆರಳದಂತೆ ಸೂಚಿಸಿದರೆ ಕೆಲ ಪ್ರವಾಸಿಗರು ಅವರೊಂದಿಗೆ ಜಗಳಕ್ಕೆ ಬರುತ್ತಿದ್ದಾರೆ. ಅಲ್ಲದೆ ಕಳೆದ ಎರಡು ದಿನದ ಹಿಂದೆ ಮುರುಡೇಶ್ವರದಲ್ಲಿ ಅಲೆಗೆ ಕೊಚ್ಚಿಹೋಗುತ್ತಿದ್ದ ಪ್ರವಾಸಿಗರನ್ನು ರಕ್ಷಣೆ ಮಾಡಿದಾಗಲೂ ವಿನಾ ಕಾರಣ ಕುಡಿದ ಮತ್ತಿನಲ್ಲಿ ಲೈಫ್ ಗಾರ್ಡ್​ಗಳ ಮೇಲೆ ಹಲ್ಲೆ ಮಾಡಿ ಗಾಸಿಗೊಳಿಸಲಾಗಿದೆ. ಇಂತಹ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಹೆಚ್ಚು ಪ್ರವಾಸಿಗರು ಸೇರುವ ತಾಣಗಳಲ್ಲಿ ಪೊಲೀಸರನ್ನು ನೇಮಕ ಮಾಡಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

ಇದನ್ನೂ ಓದಿ:ಕಾರವಾರ: ಕಡಲತೀರದಲ್ಲಿ ಕಾಣಿಸಿಕೊಂಡ ಅಪರೂಪದ ಗೂಸ್ ಬಾರ್ನಕಲ್

ಒಟ್ಟಾರೆ ಜಿಲ್ಲೆಯ ಕಡಲತೀರಗಳಲ್ಲಿ ಪ್ರವಾಸಿಗರ ರಕ್ಷಣೆಗೆ ಲೈಫ್ ಗಾರ್ಡ್​ಗಳು ಆಪತ್ ಭಾಂಧವರಾಗಿದ್ದು ಅವರ ಮೇಲಿನ ಹಲ್ಲೆ ನಿಜಕ್ಕೂ ಖಂಡನೀಯ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಈ ಬಗ್ಗೆ ಗಮನ ಹರಿಸಿ ಹೆಚ್ಚು ಪ್ರವಾಸಿಗರು ಸೇರುವ ಸ್ಥಳಗಳಲ್ಲಿ ಪೊಲೀಸರನ್ನು ನಿಯುಕ್ತಿಗೊಳಿಸಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

ವರದಿ: ವಿನಾಯಕ ಬಡಿಗೇರ ಟಿವಿ9 ಕಾರವಾರ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್