AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

White Cobra: ಕಡಲತೀರದ ಕಾರವಾರದಲ್ಲಿ ಮತ್ತೊಂದು ನಿಸರ್ಗದತ್ತ ವಿಸ್ಮಯ; ಬಿಳಿ ಹೆಬ್ಬಾವು ಪ್ರತ್ಯಕ್ಷ!

ಬಿಳಿ ಹೆಬ್ಬಾವು ಕಂಡು ಜನ ತಕ್ಷಣಕ್ಕೆ ಆತಂಕಗೊಂಡಿದ್ದಾರೆ. ಬಳಿಕ ಸಾವರಿಸಿಕೊಂಡು ಕೂಡಲೇ ಉರಗ ತಜ್ಞ ಪವನ್ ನಾಯ್ಕ‌ಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉರಗ ಪ್ರೇಮಿ ಪವನ್ ನಾಯ್ಕ ಬಿಳಿ ಹೆಬ್ಬಾವನ್ನು ರಕ್ಷಣೆ ಮಾಡಿದ್ದಾರೆ.

White Cobra: ಕಡಲತೀರದ ಕಾರವಾರದಲ್ಲಿ ಮತ್ತೊಂದು ನಿಸರ್ಗದತ್ತ ವಿಸ್ಮಯ; ಬಿಳಿ ಹೆಬ್ಬಾವು ಪ್ರತ್ಯಕ್ಷ!
White Cobra: ಕಡಲತೀರದ ಕಾರವಾರದಲ್ಲಿ ಮತ್ತೊಂದು ನಿಸರ್ಗದತ್ತ ವಿಸ್ಮಯ; ಬಿಳಿ ಹೆಬ್ಬಾವು ಪ್ರತ್ಯಕ್ಷ!
TV9 Web
| Updated By: ಆಯೇಷಾ ಬಾನು|

Updated on:Aug 22, 2022 | 10:48 PM

Share

ಕಡಲತೀರದ ಕಾರವಾರದಲ್ಲಿ (White Cobra) ನಿಸರ್ಗದತ್ತ ವಿಸ್ಮಯಗಳಿಗೆ ಕೊರತೆಯೇನೂ ಇಲ್ಲ. ಆಗಾಗ ಅಲ್ಲಲ್ಲಿ ಚಿತ್ರ ವಿಚಿತ್ರ ಪ್ರಾಣಿ ಪಕ್ಷಿಗಳು, ಜಂತುಗಳು ಕಂಡುಬರುತ್ತವೆ. ಅವು ಕಡಲಾಳದಷ್ಟೇ ವಿಸ್ಮಯವನ್ನುಂಟುಮಾಡುತ್ತದೆ. ತಾಜಾ ಆಗಿ ಅಪರೂಪದ ಬಿಳಿ ಹೆಬ್ಬಾವು (Karwar) ಪತ್ತೆಯಾಗಿದೆ. ಉತ್ತರ ಕನ್ನಡ ( Uttara Kannada) ಜಿಲ್ಲೆಯ ಕುಮಟಾ ತಾಲೂಕಿನ ಮಿರ್ಜಾನ ಗ್ರಾಮದಲ್ಲಿ ಸುಬ್ರಹ್ಮಣ್ಯ ನಾಯ್ಕ ಅವರ ಮನೆಯಲ್ಲಿ ಬಿಳಿ ಹೆಬ್ಬಾವು ಸಿಕ್ಕಿದೆ.

ಬಿಳಿ ಹೆಬ್ಬಾವು ಕಂಡು ಜನ ತಕ್ಷಣಕ್ಕೆ ಆತಂಕಗೊಂಡಿದ್ದಾರೆ. ಬಳಿಕ ಸಾವರಿಸಿಕೊಂಡು ಕೂಡಲೇ ಉರಗ ತಜ್ಞ ಪವನ್ ನಾಯ್ಕ‌ಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉರಗ ಪ್ರೇಮಿ ಪವನ್ ನಾಯ್ಕ ಬಿಳಿ ಹೆಬ್ಬಾವನ್ನು ರಕ್ಷಣೆ ಮಾಡಿದ್ದಾರೆ. ಹೆಬ್ಬಾವು ಬಿಳಿ ಬಣ್ಣವಿರಲು ಕಾರಣ ಮೆಲಾಲಿನ್ ಅಥವಾ ಪಿಗ್ಮೆಂಟ್‌ ಕೊರತೆಯಿಂದ ಚರ್ಮೆಕ್ಕೆ ಬಣ್ಣ ಬಂದಿರುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಕರ್ನಾಟಕದಲ್ಲಿ ಬಿಳಿ ಹೆಬ್ಬಾವು ಸಿಕ್ಕಿರುವ 2ನೆಯ ದಾಖಲೆ ಇದಾಗಿದೆ. ಬಿಳಿ ಹೆಬ್ಬಾವನ್ನು ರಕ್ಷಣೆ ಮಾಡಿದ ಉರಗ ತಜ್ಞ ಪವನ್ ನಾಯ್ಕ ಅವರು ಅದನ್ನು ಕಾಡಿಗೆ ಬಿಟ್ಟುಬಂದಿದ್ದಾರೆ.

Ghatiana Dvivarna: ಯಲ್ಲಾಪುರದ ಅರಣ್ಯವಲಯದಲ್ಲಿ ಹೊಸ ಪ್ರಬೇಧದ ಏಡಿ ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಅರಣ್ಯವಲಯದಲ್ಲಿ ಹೊಸ ಪ್ರಬೇಧದ ಸಿಹಿ ನೀರಿನ ಏಡಿ ಪತ್ತೆಯಾಗಿದೆ. ಬಿಳಿ ಮೈ ಬಣ್ಣ ಮತ್ತು ನೇರಳೆ ಬಣ್ಣದ ಕಾಲುಗಳನ್ನ ಹೊಂದಿರುವ ಈ ಏಡಿಯನ್ನು ಘಾಟಿಯಾನ ದ್ವೀವರಣ(Ghatiana Dvivarna) ಎಂದು ಸೈಂಟಿಫಿಕ್ ಹೆಸರು ನಾಮಕರಣ ಮಾಡಲಾಗಿದೆ.

ಅತೀ ಸುಂದರವಾಗಿರುವ ಈ ಏಡಿ ನೋಡಲು ಗುಂಡನೇ ಕಪ್ಪು ಕಣ್ಣು, ಬಿಳಿ ಬಣ್ಣದ ಕೊಕ್ಕೆ, ನೇರಳೆ ಬಣ್ಣದ ನೀಳ ಕಾಲುಗಳನ್ನು ಹೊಂದಿರುವ ಅಪರೂಪದ ಏಡಿಯಾಗಿದೆ. ಹೊಸ ಪ್ರಬೇಧದ ಏಡಿ ಕಂಡು ಅರಣ್ಯ ಅಧಿಕಾರಿಗಳು ತಮ್ಮ ಕ್ಯಾಮಾರದಲ್ಲಿ ಏಡಿಯ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿ ಪರಶುರಾಮ ಭಜಂತ್ರಿ, ನಿಸರ್ಗ ತಜ್ಞರಾದ ಗೋಪಾಲಕೃಷ್ಣ ಹೆಗಡೆ, ಸಮೀರಕುಮಾರ ಪಾಟಿ ಮತ್ತು ತೇಜಸ್ ಥಾಕರೆ ತಂಡದವರು ಈ ಘಟಿಯಾನ ಪ್ರಭೇದದ ಹೊಸ ಜಾತಿಯ ಸಿಹಿ ನೀರಿನ ಏಡಿಯನ್ನು ಪತ್ತೆ ಹಚ್ಚಿದ್ದಾರೆ.

Published On - 10:10 pm, Mon, 22 August 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!