AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಷ್ಕೃತ ಹವಾಮಾನ ಆಧಾರಿತ ಬೆಳೆ ವಿಮೆ ನೋಂದಣಿಗೆ ಇನ್ನು ಕೆಲವೇ ದಿನ ಬಾಕಿ: ಇಲ್ಲಿದೆ ವಿವರ

ಕರ್ನಾಟಕ ಸರ್ಕಾರದ ಆದೇಶದ ಪ್ರಕಾರ 2023ನೇ ಸಾಲಿನ ಮುಂಗಾರು ಹಂಗಾಮು, ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದೆ. ಹಾಗಾಗಿ ಬೆಳೆ ಸಾಲ ಪಡೆಯುವ ಮತ್ತು ಪಡೆಯದ ರೈತರು ವಿಮಾ ಕಂತನ್ನು ಜುಲೈ 31 ರಂದು ಪಾವತಿಸಲು ಕೊನೆಯ ದಿನವಾಗಿದೆ.

ಪರಿಷ್ಕೃತ ಹವಾಮಾನ ಆಧಾರಿತ ಬೆಳೆ ವಿಮೆ ನೋಂದಣಿಗೆ ಇನ್ನು ಕೆಲವೇ ದಿನ ಬಾಕಿ: ಇಲ್ಲಿದೆ ವಿವರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 26, 2023 | 8:59 PM

Share

ಉತ್ತರ ಕನ್ನಡ, ಜುಲೈ 26: ಉತ್ತರ ಕನ್ನಡ ಜಿಲ್ಲೆಯಲ್ಲಿ 2023ನೇ ಸಾಲಿನ ಮುಂಗಾರು ಹಂಗಾಮು ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು (RWBCIS) ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಹಾಗಾಗಿ ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ವಿಮಾ ಕಂತನ್ನು ಜುಲೈ 31 ರಂದು ಪಾವತಿಸಲು ಕೊನೆಯ ದಿನವಾಗಿದೆ. ಈ ಕುರಿತಾಗಿ ತೋಟಗಾರಿಕಾ ಇಲಾಖೆ ಪ್ರಕಟಣೆ ಹೊರಡಿಸಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಡಿಕೆ, ಮಾವು, ಶುಂಠಿ ಮತ್ತು ಕರಿಮೆಣಸು ಬೆಳೆಗಳಿಗೆ ಬೆಳೆ ವಿಮಾ ಸೌಲಭ್ಯ ನೀಡಲಾಗುತ್ತಿದೆ. ಈ ಪೈಕಿ ದಾಂಡೇಲಿ, ಹಳಿಯಾಳ, ಅಂಕೋಲಾ ಮತ್ತು ಮುಂಡಗೋಡ ತಾಲ್ಲೂಕಿನ ವಿಮಾ ಘಟಕಗಳಿಗೆ ಮಾವು, ಶುಂಠಿ ಮತ್ತು ಶಿರಸಿ ತಾಲ್ಲೂಕಿನ ಬನವಾಸಿ ಹೋಬಳಿ ವ್ಯಾಪ್ತಿಗೆ ಶುಂಠಿ ಬೆಳೆಯನ್ನು ಹೊಸದಾಗಿ ವಿಮಾ ವ್ಯಾಪ್ತಿಗೆ ಒಳಪಡಿಸಲಾಗಿದೆ.

ಇದನ್ನೂ ಓದಿ: Ballari News: ಬಳ್ಳಾರಿ; ಪರಿಷ್ಕೃತ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ನೊಂದಣಿಗೆ ಆಹ್ವಾನ

ರೈತರು ನಿಗದಿತ ಅರ್ಜಿ ಪ್ರತಿ, ಬ್ಯಾಂಕ್ ಪಾಸ್​ ಬುಕ್​ ಪ್ರತಿ, ಬೆಳೆ ನಮೂದಿರುವ ಪಹಣಿ ಪತ್ರಿಕೆ, ಸ್ವಯಂ ದೃಢೀಕರಣ, ನಾಮಿನಿ ವಿವರ ಮತ್ತು ಆಧಾರ್ ಕಾರ್ಡ್‌ ಪ್ರತಿಯೊಂದಿಗೆ ಸಂಬಂಧಿಸಿದ ಬ್ಯಾಂಕ್ ಶಾಖೆಯಲ್ಲಿ ಕೊನೆಯ ದಿನಾಂಕದ ಒಳಗಾಗಿ ನೋಂದಣಿ ಮಾಡಿಕೊಳ್ಳಬಹುದು.

ಇದನ್ನೂ ಓದಿ: Crop Insurance: ಬೆಳೆ ವಿಮೆ ಬಗ್ಗೆ ಹತ್ತಾರು ಗೊಂದಲಗಳಿವೆಯಾ? ಹಾಗಾದ್ರೆ ಇಲ್ಲಿದೆ ಮಾಹಿತಿ

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಿನ ತೋಟಗಾರಿಕಾ ಇಲಾಖೆಯ ಕಚೇರಿ ಅಥವಾ ಹತ್ತಿರದ ಬ್ಯಾಂಕ್​ ಶಾಖೆಗಳನ್ನು ಸಂಪರ್ಕಿಸಬಹುದಾಗಿದೆ.

ಬೆಳೆ ವಿಮೆ ಯೋಜನೆ ವಿವರ

ರಾಜ್ಯದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:56 pm, Wed, 26 July 23

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?